AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು

ಗೌರವ ಡಾಕ್ಟರೇಟ್ ಎನ್ನುವುದು ವಿಶ್ವವಿದ್ಯಾನಿಲಯ ಅಥವಾ ಕಾಲೇಜು ನೀಡುವ ಪ್ರತಿಷ್ಠಿತ ಶೈಕ್ಷಣಿಕ ಗೌರವವಾಗಿದ್ದು, ನಿರ್ದಿಷ್ಟ ಕ್ಷೇತ್ರ, ಸಮಾಜ ಅಥವಾ ಮಾನವೀಯತೆಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಅದರಂತೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದರೂ ಆಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಹಾವೇರಿ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್​ ನೀಡಲು ಮುಂದಾಗಿದೆ. ಆದ್ರೆ, ಇದನ್ನು ಬೊಮ್ಮಾಯಿ ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದಾರೆ.

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು
Basavaraj Bommai
ರಮೇಶ್ ಬಿ. ಜವಳಗೇರಾ
|

Updated on:Apr 05, 2026 | 4:36 PM

Share

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೊಮ್ಮಾಯಿ ಹೊರಡಿಸಿದ ಪ್ರಕರಣೆಯಲ್ಲೇನಿದೆ?

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ” ಎಂದಿದ್ದಾರೆ.

“ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Sun, 5 April 26

Follow Us
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ