AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ನವೀನ್ ಕುಟುಂಬಕ್ಕೆ ಯಡಿಯೂರಪ್ಪ ಭೇಟಿ, ಉಕ್ರೇನ್​ನಿಂದ ಪಾರ್ಥಿವ ಶರೀರ ಆದಷ್ಟು ಬೇಗ ತರಿಸುವುದಾಗಿ ಭರವಸೆ

ನವೀನ್ ಮನೆಗೆ ಭೇಟಿ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ನವೀನ್ ನಾಲ್ಕನೆ ವರ್ಷ ವಿಧ್ಯಾಭ್ಯಾಸ ಮಾಡೋ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. ಯುದ್ಧದ ಗಂಭೀರತೆ ಅಲ್ಲಿ ಜಾಸ್ತಿ ಇದೆ. ತಕ್ಷಣ ಡೆಡ್ ಬಾಡಿ ತರೋಕೆ ಆಗದೆ ಸಮಸ್ಯೆ ಆಗ್ತಿದೆ.

ಮೃತ ನವೀನ್ ಕುಟುಂಬಕ್ಕೆ ಯಡಿಯೂರಪ್ಪ ಭೇಟಿ, ಉಕ್ರೇನ್​ನಿಂದ ಪಾರ್ಥಿವ ಶರೀರ ಆದಷ್ಟು ಬೇಗ ತರಿಸುವುದಾಗಿ ಭರವಸೆ
ಬಿ.ಎಸ್. ಯಡಿಯೂರಪ್ಪ
TV9 Web
| Updated By: ಆಯೇಷಾ ಬಾನು|

Updated on:Mar 04, 2022 | 9:17 PM

Share

ಹಾವೇರಿ : ರಷ್ಯಾ-ಉಕ್ರೇನ್ ನಡುವೆ ನಡೀತಿರೋ ಯುದ್ಧದಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ರಷ್ಯಾದ ಮಿಸೈಲ್‌ ದಾಳಿಗೆ ಪ್ರಾಣ ಬಿಟ್ಟಿದ್ದಾರೆ. ನವೀನ್ ಕುಟುಂಬದಲ್ಲಿ ಕಣ್ಣೀರ ಕೂಡಿ ಹರಿದಿದೆ. ಉಕ್ರೇನ್ನಿಂದ ಡಾಕ್ಟರ್ ಆಗಿ ಮಗ ವಾಪಾಸ್ ಬರ್ತಾನೆ ಎಂದು ಕೊಂಡಿದ್ದ ಪೋಷಕರು ಕಣ್ಣೀರಲ್ಲಿ ಮುಳುಗಿದ್ದಾರೆ. ಸದ್ಯ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದು ನವೀನ್ ಕುಟುಂಬಸ್ಥರಿಗೆ ಸಾಂತ್ವನ ಕೇಳಿದ್ದಾರೆ.

ನವೀನ್ ಮನೆಗೆ ಭೇಟಿ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ನವೀನ್ ನಾಲ್ಕನೆ ವರ್ಷ ವಿಧ್ಯಾಭ್ಯಾಸ ಮಾಡೋ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. ಯುದ್ಧದ ಗಂಭೀರತೆ ಅಲ್ಲಿ ಜಾಸ್ತಿ ಇದೆ. ತಕ್ಷಣ ಡೆಡ್ ಬಾಡಿ ತರೋಕೆ ಆಗದೆ ಸಮಸ್ಯೆ ಆಗ್ತಿದೆ. ಪ್ರಧಾನಿ ಮೋದಿಜಿಯವರೇ ಡೆಡ್ ಬಾಡಿ ತರಲು ಚಿಂತನೆ ನಡೆಸಿದ್ದಾರೆ. ವಿಶೇಷ ವಿಮಾನದಲ್ಲಿ ಡೆಡ್ ಬಾಡಿ ತರೋ ಚಿಂತನೆ ನಡೆದಿದೆ. ಪಾರ್ಥಿವ ಶರೀರದ ಮುಖ ನೋಡಬೇಕು ಅನ್ನೋದು ತಂದೆ ತಾಯಿ ಬಯಕೆ. ಪ್ರಧಾನಿ ಜೊತೆ ನಾನು, ಸಿಎಂ ಬೊಮ್ಮಾಯಿಯವರು ಮಾತನಾಡಿದ್ದೇವೆ. ಆದಷ್ಟು ಬೇಗ ಡೆಡ್ ಬಾಡಿ ತರೋದು ಕೇಂದ್ರ ಮತ್ತು ರಾಜ್ಯ ಸರಕಾರದ ಕರ್ತವ್ಯ. ಅವರ ನೋವಿಗೆ, ಕಣ್ಣೀರಿಗೆ ಸಾಂತ್ವನ ಹೇಳಲು ಪದಗಳು ಬರ್ತಿಲ್ಲ. ತಮ್ಮ ಮಗನಿಗೆ ಬಂದ ಸ್ಥಿತಿ ಬೇರೆ‌ ಮಕ್ಕಳಿಗೆ ಬರಬಾರ್ದು ಅಂತಾ ನವೀನ್ ತಾಯಿ ಕಣ್ಣೀರು ಹಾಕಿದ್ದಾರೆ. ಅದು ಅವರ ಕಳಕಳಿ ತೋರಿಸುತ್ತೆ.

ರಾಜ್ಯ ಸರಕಾರದಿಂದ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರಕ್ಕೆ ತೀರ್ಮಾನಿಸಲಾಗಿದೆ. ನಾಳೆ ಸಿಎಂ‌ ಬಂದಾಗ ಚೆಕ್ ಕೊಡಬಹುದು. ಡೆಡ್ ಬಾಡಿ ಆದಷ್ಟು ಬೇಗ ತರೋ ಪ್ರಯತ್ನ ನಡೆಯುತ್ತಿದೆ. ಆದಷ್ಟು ಬೇಗ ಬಾಡಿ ತರೋ ಪ್ರಯತ್ನ ಮಾಡ್ತೀವಿ. ಉಕ್ರೇನ್ ಜೊತೆ ಪ್ರಧಾನಿಯವರೆ ಹೆಚ್ಚು ಸಂಪರ್ಕ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಡೆಡ್ ಬಾಡಿ ತರೋ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Russia- Ukrain Crisis: ಬ್ರಿಕ್ಸ್​ನ ನ್ಯೂ ಡೆವಲಪ್​ಮೆಂಟ್​ ಬ್ಯಾಂಕ್​ನಿಂದ ರಷ್ಯಾದಲ್ಲಿ ಎಲ್ಲ ಹೊಸ ವಹಿವಾಟುಗಳ ಸ್ಥಗಿತ

Shocking News: ರಾತ್ರಿ ವೇಳೆ ಬೀದಿ ನಾಯಿ ಮೇಲೆ ಕಾಮುಕನಿಂದ ಅತ್ಯಾಚಾರ!

Published On - 8:30 pm, Fri, 4 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ