AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ನವೀನ್ ಕುಟುಂಬಕ್ಕೆ ಯಡಿಯೂರಪ್ಪ ಭೇಟಿ, ಉಕ್ರೇನ್​ನಿಂದ ಪಾರ್ಥಿವ ಶರೀರ ಆದಷ್ಟು ಬೇಗ ತರಿಸುವುದಾಗಿ ಭರವಸೆ

ನವೀನ್ ಮನೆಗೆ ಭೇಟಿ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ನವೀನ್ ನಾಲ್ಕನೆ ವರ್ಷ ವಿಧ್ಯಾಭ್ಯಾಸ ಮಾಡೋ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. ಯುದ್ಧದ ಗಂಭೀರತೆ ಅಲ್ಲಿ ಜಾಸ್ತಿ ಇದೆ. ತಕ್ಷಣ ಡೆಡ್ ಬಾಡಿ ತರೋಕೆ ಆಗದೆ ಸಮಸ್ಯೆ ಆಗ್ತಿದೆ.

ಮೃತ ನವೀನ್ ಕುಟುಂಬಕ್ಕೆ ಯಡಿಯೂರಪ್ಪ ಭೇಟಿ, ಉಕ್ರೇನ್​ನಿಂದ ಪಾರ್ಥಿವ ಶರೀರ ಆದಷ್ಟು ಬೇಗ ತರಿಸುವುದಾಗಿ ಭರವಸೆ
ಬಿ.ಎಸ್. ಯಡಿಯೂರಪ್ಪ
TV9 Web
| Edited By: |

Updated on:Mar 04, 2022 | 9:17 PM

Share

ಹಾವೇರಿ : ರಷ್ಯಾ-ಉಕ್ರೇನ್ ನಡುವೆ ನಡೀತಿರೋ ಯುದ್ಧದಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ರಷ್ಯಾದ ಮಿಸೈಲ್‌ ದಾಳಿಗೆ ಪ್ರಾಣ ಬಿಟ್ಟಿದ್ದಾರೆ. ನವೀನ್ ಕುಟುಂಬದಲ್ಲಿ ಕಣ್ಣೀರ ಕೂಡಿ ಹರಿದಿದೆ. ಉಕ್ರೇನ್ನಿಂದ ಡಾಕ್ಟರ್ ಆಗಿ ಮಗ ವಾಪಾಸ್ ಬರ್ತಾನೆ ಎಂದು ಕೊಂಡಿದ್ದ ಪೋಷಕರು ಕಣ್ಣೀರಲ್ಲಿ ಮುಳುಗಿದ್ದಾರೆ. ಸದ್ಯ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದು ನವೀನ್ ಕುಟುಂಬಸ್ಥರಿಗೆ ಸಾಂತ್ವನ ಕೇಳಿದ್ದಾರೆ.

ನವೀನ್ ಮನೆಗೆ ಭೇಟಿ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ನವೀನ್ ನಾಲ್ಕನೆ ವರ್ಷ ವಿಧ್ಯಾಭ್ಯಾಸ ಮಾಡೋ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. ಯುದ್ಧದ ಗಂಭೀರತೆ ಅಲ್ಲಿ ಜಾಸ್ತಿ ಇದೆ. ತಕ್ಷಣ ಡೆಡ್ ಬಾಡಿ ತರೋಕೆ ಆಗದೆ ಸಮಸ್ಯೆ ಆಗ್ತಿದೆ. ಪ್ರಧಾನಿ ಮೋದಿಜಿಯವರೇ ಡೆಡ್ ಬಾಡಿ ತರಲು ಚಿಂತನೆ ನಡೆಸಿದ್ದಾರೆ. ವಿಶೇಷ ವಿಮಾನದಲ್ಲಿ ಡೆಡ್ ಬಾಡಿ ತರೋ ಚಿಂತನೆ ನಡೆದಿದೆ. ಪಾರ್ಥಿವ ಶರೀರದ ಮುಖ ನೋಡಬೇಕು ಅನ್ನೋದು ತಂದೆ ತಾಯಿ ಬಯಕೆ. ಪ್ರಧಾನಿ ಜೊತೆ ನಾನು, ಸಿಎಂ ಬೊಮ್ಮಾಯಿಯವರು ಮಾತನಾಡಿದ್ದೇವೆ. ಆದಷ್ಟು ಬೇಗ ಡೆಡ್ ಬಾಡಿ ತರೋದು ಕೇಂದ್ರ ಮತ್ತು ರಾಜ್ಯ ಸರಕಾರದ ಕರ್ತವ್ಯ. ಅವರ ನೋವಿಗೆ, ಕಣ್ಣೀರಿಗೆ ಸಾಂತ್ವನ ಹೇಳಲು ಪದಗಳು ಬರ್ತಿಲ್ಲ. ತಮ್ಮ ಮಗನಿಗೆ ಬಂದ ಸ್ಥಿತಿ ಬೇರೆ‌ ಮಕ್ಕಳಿಗೆ ಬರಬಾರ್ದು ಅಂತಾ ನವೀನ್ ತಾಯಿ ಕಣ್ಣೀರು ಹಾಕಿದ್ದಾರೆ. ಅದು ಅವರ ಕಳಕಳಿ ತೋರಿಸುತ್ತೆ.

ರಾಜ್ಯ ಸರಕಾರದಿಂದ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರಕ್ಕೆ ತೀರ್ಮಾನಿಸಲಾಗಿದೆ. ನಾಳೆ ಸಿಎಂ‌ ಬಂದಾಗ ಚೆಕ್ ಕೊಡಬಹುದು. ಡೆಡ್ ಬಾಡಿ ಆದಷ್ಟು ಬೇಗ ತರೋ ಪ್ರಯತ್ನ ನಡೆಯುತ್ತಿದೆ. ಆದಷ್ಟು ಬೇಗ ಬಾಡಿ ತರೋ ಪ್ರಯತ್ನ ಮಾಡ್ತೀವಿ. ಉಕ್ರೇನ್ ಜೊತೆ ಪ್ರಧಾನಿಯವರೆ ಹೆಚ್ಚು ಸಂಪರ್ಕ ಇಟ್ಟುಕೊಂಡಿದ್ದಾರೆ. ಆದಷ್ಟು ಬೇಗ ಡೆಡ್ ಬಾಡಿ ತರೋ ಪ್ರಾಮಾಣಿಕ ಪ್ರಯತ್ನ ಮಾಡ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Russia- Ukrain Crisis: ಬ್ರಿಕ್ಸ್​ನ ನ್ಯೂ ಡೆವಲಪ್​ಮೆಂಟ್​ ಬ್ಯಾಂಕ್​ನಿಂದ ರಷ್ಯಾದಲ್ಲಿ ಎಲ್ಲ ಹೊಸ ವಹಿವಾಟುಗಳ ಸ್ಥಗಿತ

Shocking News: ರಾತ್ರಿ ವೇಳೆ ಬೀದಿ ನಾಯಿ ಮೇಲೆ ಕಾಮುಕನಿಂದ ಅತ್ಯಾಚಾರ!

Published On - 8:30 pm, Fri, 4 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ