AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಯಡಿಯೂರಪ್ಪ ಸುಮ್ಮನಿರುವುದು ದೌರ್ಬಲ್ಯವಲ್ಲ; ವಿಜಯೇಂದ್ರ

ಬಿಎಸ್ ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ.

Karnataka Politics: ಯಡಿಯೂರಪ್ಪ ಸುಮ್ಮನಿರುವುದು ದೌರ್ಬಲ್ಯವಲ್ಲ; ವಿಜಯೇಂದ್ರ
ಬಿವೈ ವಿಜಯೇಂದ್ರ
ಗಣಪತಿ ಶರ್ಮಾ
|

Updated on: Mar 15, 2023 | 10:50 PM

Share

ಹಾವೇರಿ: ಬಿಎಸ್ ಯಡಿಯೂರಪ್ಪ (BS Yediyurappa) ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಗುಡುಗಿದ್ದಾರೆ. ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಎಸ್​ವೈ ಅವರ ಮೌನವನ್ನೇ ದೌರ್ಬಲ್ಯ ಅಂದುಕೊಂಡರೆ ಬಹಳ ಪಶ್ಚಾತ್ತಾಪ ಪಡಬೇಕಾಗಲಿದೆ. ರಾಜ್ಯದಲ್ಲಿ ಬಿಜೆಪಿಗೆ ಅಡಿಪಾಯ ಗಟ್ಟಿ ಇದೆ ಅಂದರೆ ಅದಕ್ಕೆ ಕಾರಣ ಯಡಿಯೂರಪ್ಪ. ಆದರೆ, ಅವರನ್ನು ಟೀಕೆ ಮಾಡುವ ಜನರಿದ್ದಾರೆ. ತಮ್ಮ ಕುಟುಂಬ ಬೆಳೆಸಬೇಕು ಅಂತ ಬಿಎಸ್‌ವೈ ರಾಜಕಾರಣ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕಿದೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾ ಇದ್ದೇವೆ ಎಂದು ಅವರು ಹೇಳಿದ್ದಾರೆ.

ಇಡೀ ಜಗತ್ತು ಮಾರ್ಗದರ್ಶನ ಮಾಡುವಂಥ ನಾಯಕನನ್ನು ಎದುರು ನೋಡುತ್ತಾ ಇತ್ತು. ನಮ್ಮ ಅದೃಷ್ಟ ಇಡೀ ಪ್ರಪಂಚ ದೇಶದ ನಮ್ಮ ಪ್ರಧಾನಿಗಳ ಕಡೆ ತಿರುಗಿ ನೋಡುತ್ತಾ ಇದೆ. ರಷ್ಯಾ – ಉಕ್ರೇನ್ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಬುದ್ಧಿ ಹೇಳಿವಂಥ ನಾಯಕ ಇರಲಿಲ್ಲ. ಆದರೆ ಮೋದಿಯವರು ಯುದ್ಧ ಬೇಡ, ಜಗತ್ತಿನ ಏಳಿಗೆಗೆ ಯುದ್ದ ಸರಿಯಲ್ಲ, ಯುದ್ಧ ನಿಲ್ಲಿಸಿ ಎಂದು ಸಲಹೆ ಕೊಟ್ಟಿದ್ದರು. ರಷ್ಯಾ ಅಣುಬಾಂಬ್ ದಾಳಿ ಮಾಡಲು ಹೊರಟಿತ್ತು. ಆಗಲೂ ಮೋದಿಯವರು ಬೇಡ ಎಂದು ತಡೆದರು. ಪರಿಣಾಮವಾಗಿ ರಷ್ಯಾ ಅಣುಬಾಂಬ್ ಪ್ರಯೋಗ ಮಾಡಲಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿಯವರ ಸಾಹಸ ಎಂದು ವಿಜಯೇಂದ್ರ ಬಣ್ಣಿಸಿದರು.

ಇದನ್ನೂ ಓದಿ: Ticket Fight: ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಬೆಳೆಯಲು ಸಾಧ್ಯ: ಸಿ.ಟಿ ರವಿಗೆ ಟಾಂಗ್ ಕೊಟ್ಟ ವಿಜಯೇಂದ್ರ

ಕಾಂಗ್ರೆಸ್​​ನವರಿಗೆ ಈ ದೇಶದ ಬಗ್ಗೆ, ಯುವಕರ ಬಗ್ಗೆ ಚಿಂತೆಯೇ ಇಲ್ಲ. ಈ ದೇಶದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಿರುವ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಬಡವರು ಬಡವರಾಗಿಯೇ ಇರಬೇಕು, ಅನಕ್ಷರಸ್ಥರು ಅನಕ್ಷರಸ್ಥಾರಾಗಿಯೇ ಇರಬೇಕು ಎಂದು ಕಾಂಗ್ರೆಸ್ ಪಕ್ಷದವರು ಬಯಸುತ್ತಾರೆ. ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ ಬಡತನ ಕಿತ್ತು ಹಾಕೋ ಕೆಲಸ ಮಾಡಲೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸಿಟಿ ರವಿಗೆ ಟಾಂಗ್ ಕೊಟ್ಟಿದ್ದ ವಿಜಯೇಂದ್ರ

ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದರು. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ ಕಟ್ಟಿದ್ದು ಬಿಎಸ್‌ವೈ ಎಂದು ಸಿಟಿ ರವಿಗೂ ಗೊತ್ತಿದೆ. ಈ ರೀತಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ