AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ

ಜಿಲ್ಲಾಡಳಿತ ನಿಷೇಧ ಮತ್ತು ಬರಗಾಲದ ನಡುವೆಯೂ ಹಾವೇರಿ ಅನ್ನದಾತರು ತನ್ನ ಸಹಪಾಟಿ ಎತ್ತುಗಳನ್ನು ಶೃಂಗರಿಸಿ ಓಡಿಸುವುದರ ಮೂಲಕ ಸಂಭ್ರಮ ಪಟ್ಟರು. ಆದರೆ ಈ ಸಂಭ್ರಮ ಬಹಳ ಹೊತ್ತು ಉಳಿಯಲಿಲ್ಲ. ಏಕೆಂದರೆ ಹೋರಿ ತಿವಿದು ಓರ್ವ ಯುವಕ ಸಾವನ್ನಪ್ಪಿ ಹಲವರಿಗೆ ಗಾಯವಾಗಿದೆ.

ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಯುವಕ ಸಾವು, ಹತ್ತಾರು ಮಂದಿಗೆ ಗಾಯ
ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು
ಸಾಧು ಶ್ರೀನಾಥ್​
|

Updated on: Mar 05, 2024 | 9:52 AM

Share

ಹೋರಿ ಬೆದರಿಸುವ ಸ್ಪರ್ಧೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೂ ಆಗಾಗ ಹಾವೇರಿ ಜಿಲ್ಲೆಯಲ್ಲಿ ಅಲ್ಲಲ್ಲಿ ಹೋರಿ ಬೆದರಿಸು ಸ್ಪರ್ಧೆಯನ್ನು ಆಯೋಜನೆ ಮಾಡುತ್ತಲೇ ಇದ್ದಾರೆ. ಇದರ ಪರಿಣಾಮ ಇಂದು ಹೋರಿ ತಿವಿದು ಓರ್ವ ಸಾವನಪ್ಪಿ ಹಲವರಿಗೆ ತೀವ್ರ ಗಾಯಗಳಾಗಿವೆ. ಒಂದೆಡೆ ಬಾ..ಬಾ.. ಅಖಾಡಕ್ಕೆ ಬಾ… ಬಾರೋ…. ನನ್ನ ರಾಜಾ ಎನ್ನುತ್ತಿರುವ ಹೋರಿ ಹಬ್ಬದ ಆಯೋಜಕರು. ಇನ್ನೊಂದಡೆ ಪೈಲ್ವಾನರಿಗೆ ಸೆಡ್ಡು ಹೊಡೆದು ಹಿಡಿದು ತೋರಿಸಿ ನನ್ನ ಹೋರಿ… ಎನ್ನುತ್ತಿರುವ ರೈತ ಬಾಂಧವರು. ಮೊತ್ತೊಂದಡೆ ತಲೆಗೆ ಟವಲ್ ಕಟ್ಟಿ ಹೋರಿ ಹಿಡಿದೇ ಹಿಡಿಯುತ್ತೇವೆ ಎನ್ನುತ್ತಿರುವ ಯುವಕರ ಗುಂಪು. ಇತ್ತ ಹೋರಿ ನೋಡಲು ಸೇರಿರುವ ಲಕ್ಷಾಂತರ ಜನರು. ಈ ಎಲ್ಲ ದೃಶ್ಯಾವಳಿಗಳಿಗೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ.

ಜಿಲ್ಲಾಡಳಿತ ನಿಷೇಧ ಮತ್ತು ಬರಗಾಲದ ನಡುವೆಯೂ ಹಾವೇರಿ ಅನ್ನದಾತರು ತನ್ನ ಸಹಪಾಟಿ ಎತ್ತುಗಳನ್ನು ಶೃಂಗರಿಸಿ ಓಡಿಸುವುದರ ಮೂಲಕ ಸಂಭ್ರಮ ಪಟ್ಟರು. ಆದರೆ ಈ ಸಂಭ್ರಮ ಬಹಳ ಹೊತ್ತು ಉಳಿಯಲಿಲ್ಲ. ಏಕೆಂದರೆ ಹೋರಿ ತಿವಿದು ಓರ್ವ ಯುವಕ ಸಾವನ್ನಪ್ಪಿ ಹಲವರಿಗೆ ಗಾಯವಾಗಿದೆ.

ಹೋರಿ ತಿವಿತದಿಂದ ಮೃತಪಟ್ಟ 38 ವರ್ಷ ಮಂಜಪ್ಪ ಚನ್ನಪ್ಪನವರ ಅರಳೀಕಟ್ಟಿ ಗ್ರಾಮದ ನಿವಾಸಿ. ಹೋರಿ ಅಖಾಡದಲ್ಲಿ ಅರೆ ಕ್ಷಣ ಮೈಮರೆತಿದಕ್ಕೆ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇನ್ನೂ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಓರ್ವನ ಸ್ಥಿತಿ ಚಿಂತಾಜಕವಾಗಿದೆ. ಈತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಲಾಗಿದೆ. ಮೊತ್ತೊಂದಡೆ 10 ಕ್ಕೂ ಜನರಿಗೆ ಗಾಯಗಳಾಗಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಂಸಭಾವಿ ಪೊಲೀಸರು ಹೋರಿ ಬೆದರಿಸುವ ಹಬ್ಬವನ್ನು ಬಂದ್ ಮಾಡಿಸಿ ಆಯೋಜಕರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

Also Read: ಆಳಂದ ಪಟ್ಟಣದ ಮಶಾಕ್ ದರ್ಗಾ-ಶಿವಲಿಂಗ ವಿವಾದ: ಶಿವರಾತ್ರಿಗೆ ಪೂಜೆ ನಡೆಯುತ್ತದಾ?

ದೀಪಾವಳಿ ನಂತರ ಹಾವೇರಿ ಜಿಲ್ಲೆಯಲ್ಲಿ ಈ ತರ ಹೋರಿ ಬೆದರಿಸುವ ಸ್ಪರ್ಧೆ ಒಂದಲ್ಲಾ ಒಂದು ಗ್ರಾಮದಲ್ಲಿ ಮಾಡುತ್ತ ಬರುತ್ತಾರೆ. ಆಸಕ್ತ ಯುವಕರು ತಮ್ಮ ನೆಚ್ಚಿನ ಹೋರಿಗಳನ್ನು ಸ್ಪರ್ಧೆಗೆ ಬಿಡುತ್ತಾರೆ. ಈ ಹೋರಿಗಳಿಗೆ ಪೌಷ್ಟಿಕ ಆಹಾರ ನೀಡಿ ಕುಸ್ತಿ ಪಟುವನ್ನು ರೆಡಿ ಮಾಡಿದಂತೆ ಮಾಡುತ್ತಾರೆ. ಹೋರಿ ಹಬ್ಬ ಅಂದರೆ ಈ ಭಾಗದ ಜನರಿಗೆ ಬಹಳ ಅಚ್ಚುಮೆಚ್ಚು.

ಪ್ಯಾಟೇ ಜನರು ಐಷಾರಾಮಿ ಕಾರು ಖರೀದಿಸಲು ಆಸಕ್ತಿ ತೋರುವಂತೆ ಗ್ರಾಮಾಂತರದವರೂ ಇಂತಹ ಹೋರಿಗಳ ಖರೀದಿಸಲು ಆಸಕ್ತಿ ತೋರಿಸುತ್ತಾರೆ. ಅದನ್ನು ಮಕ್ಕಳಂತೆ ಸಾಕಿ ಹೋರಿ ಹಬ್ಬ ಸಮೀಪಿಸುತ್ತಿದ್ದಂತೆ ಅವುಗಳಿಗೆ ತಾಲೀಮು ನೀಡಿ ಲಕ್ಷ ಲಕ್ಷ ಖರ್ಚು ಮಾಡುತ್ತಾರೆ. ಆದರೆ ಈ ಹಬ್ಬದಲ್ಲಿ ಒಂದಲ್ಲಾ ಒಂದು ಅವಘಡ ನಡೆಯುತ್ತೆ. ಹೀಗಾಗಿ ಜಿಲ್ಲಾಡಳಿತ ನಿಷೇಧ ಹೇರಿದೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ 9, ಹಾವೇರಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?