AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು

ಛತ್ತೀಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಾವೇರಿ ಮೂಲಕ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು
ಹುತಾತ್ಮರಾದ ಹಾವೇರಿ ಮೂಲದ ಯೋಧ ರವಿ ಕೆಳಗಿನಮನಿ
Rakesh Nayak Manchi
|

Updated on:Apr 25, 2023 | 8:51 PM

Share

ಹಾವೇರಿ: ಛತ್ತೀಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿ ಪ್ರಕರಣದಲ್ಲಿ (Chhattisgarh bomb blast) ಗಂಭೀರವಾಗಿ ಗಾಯಗೊಂಡಿದ್ದ ಹಾವೇರಿ ಮೂಲಕ ಸಿಆರ್​ಪಿಎಫ್ (CRPF) ಯೋಧ ರವಿ ಕೆಳಗಿನಮನಿ (26) ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್ ತಿಂಗಳಲ್ಲಿ ತನ್ನ ವಿವಾಹ ವಾರ್ಷಿಕೋತ್ಸ ಮುಗಿಸಿ ದೇಶ ಸೇವೆಗೆ ತೆರಳಿದ್ದ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ ರವಿ ಕೆಳಗಿನಮನಿ ಮಾರ್ಚ್ 30 ರಂದು ಛತ್ತಿಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಅವರು ಹುತಾತ್ಮರಾಗಿದ್ದಾರೆ.

ಇಂದು ಬೆಳಿಗ್ಗೆ ಚಿಕಿತ್ಸೆ ಫಲಸದೆ ಛತ್ತೀಸಗಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ರವಿ ಪಾರ್ಥಿವ ಶರೀರ ನಾಳೆ ದೆಹಲಿಯಲಿಂದ ಹುಟ್ಟೂರು ಬ್ಯಾತನಾಳ ಗ್ರಾಮಕ್ಕೆ ತರಲಾಗುತ್ತದೆ. ರವಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಹುತಾತ್ಮ ರವಿ ಅವರ ಪತ್ನಿ ಅಶ್ವಿನಿ 2 ತಿಂಗಳ ಗರ್ಭಿಣಿಯಾಗಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: 5 ಯೋಧರು ಹುತಾತ್ಮ, ಒಬ್ಬರಿಗೆ ಗಂಭೀರ ಗಾಯ

ಇತ್ತೀಚೆಗೆ ಪಂಜಾಬ್‌ನ ಬತಿಂಡಾ ಸೇನಾ ಘಟಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಬಾಗಲಕೋಟೆ ಮೂಲದ ಯೋಧ ಎಂ ನಾಗರಾಳ್ (25) ಹುತಾತ್ಮರಾಗಿದ್ದರು. ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ನಡೆದ ಗುಂಡಿನ ದಾಳಿಯಲ್ಲಿ ನಾಗರಾಳ್ ಹುತಾತ್ಮರಾಗಿದ್ದರು. ಘಟನೆಯಲ್ಲಿ ಯೋಧರಾದ ಸಾಗರ್ ಬನ್ನೆ (25), ಕಮಲೇಶ್ ಆರ್ (24), ಯೋಗೇಶ್‌ಕುಮಾರ್ ಜೆ (24) ಕೂಡ ಹುತಾತ್ಮರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Tue, 25 April 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?