AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು

ಛತ್ತೀಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಾವೇರಿ ಮೂಲಕ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು
ಹುತಾತ್ಮರಾದ ಹಾವೇರಿ ಮೂಲದ ಯೋಧ ರವಿ ಕೆಳಗಿನಮನಿ
Follow us
Rakesh Nayak Manchi
|

Updated on:Apr 25, 2023 | 8:51 PM

ಹಾವೇರಿ: ಛತ್ತೀಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿ ಪ್ರಕರಣದಲ್ಲಿ (Chhattisgarh bomb blast) ಗಂಭೀರವಾಗಿ ಗಾಯಗೊಂಡಿದ್ದ ಹಾವೇರಿ ಮೂಲಕ ಸಿಆರ್​ಪಿಎಫ್ (CRPF) ಯೋಧ ರವಿ ಕೆಳಗಿನಮನಿ (26) ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್ ತಿಂಗಳಲ್ಲಿ ತನ್ನ ವಿವಾಹ ವಾರ್ಷಿಕೋತ್ಸ ಮುಗಿಸಿ ದೇಶ ಸೇವೆಗೆ ತೆರಳಿದ್ದ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ ರವಿ ಕೆಳಗಿನಮನಿ ಮಾರ್ಚ್ 30 ರಂದು ಛತ್ತಿಸಗಡದಲ್ಲಿ ನಡೆದಿದ್ದ ಬಾಂಬ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಅವರು ಹುತಾತ್ಮರಾಗಿದ್ದಾರೆ.

ಇಂದು ಬೆಳಿಗ್ಗೆ ಚಿಕಿತ್ಸೆ ಫಲಸದೆ ಛತ್ತೀಸಗಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ರವಿ ಪಾರ್ಥಿವ ಶರೀರ ನಾಳೆ ದೆಹಲಿಯಲಿಂದ ಹುಟ್ಟೂರು ಬ್ಯಾತನಾಳ ಗ್ರಾಮಕ್ಕೆ ತರಲಾಗುತ್ತದೆ. ರವಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಹುತಾತ್ಮ ರವಿ ಅವರ ಪತ್ನಿ ಅಶ್ವಿನಿ 2 ತಿಂಗಳ ಗರ್ಭಿಣಿಯಾಗಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: 5 ಯೋಧರು ಹುತಾತ್ಮ, ಒಬ್ಬರಿಗೆ ಗಂಭೀರ ಗಾಯ

ಇತ್ತೀಚೆಗೆ ಪಂಜಾಬ್‌ನ ಬತಿಂಡಾ ಸೇನಾ ಘಟಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಬಾಗಲಕೋಟೆ ಮೂಲದ ಯೋಧ ಎಂ ನಾಗರಾಳ್ (25) ಹುತಾತ್ಮರಾಗಿದ್ದರು. ಬತಿಂಡಾ ಮಿಲಿಟರಿ ಸ್ಟೇಷನ್ ಒಳಗೆ ನಡೆದ ಗುಂಡಿನ ದಾಳಿಯಲ್ಲಿ ನಾಗರಾಳ್ ಹುತಾತ್ಮರಾಗಿದ್ದರು. ಘಟನೆಯಲ್ಲಿ ಯೋಧರಾದ ಸಾಗರ್ ಬನ್ನೆ (25), ಕಮಲೇಶ್ ಆರ್ (24), ಯೋಗೇಶ್‌ಕುಮಾರ್ ಜೆ (24) ಕೂಡ ಹುತಾತ್ಮರಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Tue, 25 April 23

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ