AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​

ಹಾವೇರಿ ಜಿಲ್ಲೆಯಲ್ಲಿನ ಮೂರು ಇಂದಿರಾ ಕ್ಯಾಂಟೀನ್​ಗಳ ಬಿಲ್ ಪಾವತಿ ಮಾಡಲು, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ವಿಶ್ವನಾಥ್ ದರ್ಶನಾಪೂರ ಆರೋಪಿಸಿದ್ದಾರೆ. ಆ ಮೂಲಕ ಅಧಿಕಾರಿ ಮತ್ತು ಗುತ್ತಿಗೆದಾರ ನಡುವಿನ ಜಟಾಪಟಿಗೆ ಸಾಕ್ಷಿ ಆಗಿದೆ. ಸರ್ಕಾರದ ಹಣ ಹೊಡೆಯಲು ಮಾಡಿದ ಸಂಚು ಬಯಲಾಗಿದ್ದು, ಇಬ್ಬರ ನಡುವೆ ಭಾರಿ ಗದ್ದಲ ಸೃಷ್ಟಿ ಆಗಿದೆ.

ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​
ಇಂದಿರಾ ಕ್ಯಾಂಟೀನ್​
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Oct 19, 2023 | 11:03 PM

Share

ಹಾವೇರಿ, ಅಕ್ಟೋಬರ್​​​ 19: ಇಂದಿರಾ ಕ್ಯಾಂಟೀನ್ (Indira canteen) ಸಿದ್ಧರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಆಗಬೇಕಿತ್ತು. ಆದರೆ ಅಧಿಕಾರಿ ಮತ್ತು ಗುತ್ತಿಗೆದಾರ ನಡುವಿನ ಜಟಾಪಟಿಗೆ ಸಾಕ್ಷಿ ಆಗಿದೆ. ಸರ್ಕಾರದ ಹಣ ಹೊಡೆಯಲು ಮಾಡಿದ ಸಂಚು ಬಯಲಾಗಿದ್ದು, ಇಬ್ಬರ ನಡುವೆ ಭಾರಿ ಗದ್ದಲ ಸೃಷ್ಟಿಗೆ ಕಾರಣವಾಗಿದೆ. ಆ ಕುರಿತು ಒಂದು ವರದಿ ಇಲ್ಲಿದೆ ಮುಂದೆ ಓದಿ.

ಹಾವೇರಿ ಜಿಲ್ಲೆಯಲ್ಲಿನ ಮೂರು ಇಂದಿರಾ ಕ್ಯಾಂಟೀನ್​ಗಳ ಬಿಲ್ ಪಾವತಿ ಮಾಡಲು, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ವಿಶ್ವನಾಥ್ ದರ್ಶನಾಪೂರ ಆರೋಪಿಸಿದ್ದಾರೆ. ಕಮಿಷನ್ ಹಾವಳಿಯಿಂದ ಹೈರಾಣಾದ ಗುತ್ತಿಗೆದಾರ ಇಂದಿರಾ ಕ್ಯಾಂಟಿನ್ ಹಳೆ ಬಿಲ್ ಪಾವತಿ ಮಾಡಿಸಿ ನನ್ನನ್ನು ಟೆಂಡರ್​ನಿಂದ ಮುಕ್ತಿ ಕೊಡಿ ಎಂದು ಮನವಿ ಮಾಡಿ ಪತ್ರ ಬರೆದಿದ್ದಾನೆ.

ಇದನ್ನೂ ಓದಿ: ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಗುತ್ತಿಗೆದಾರನ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಹಾವೇರಿ ನಗರಾಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ಮಮತಾ. ಕಳೆದ ನವೆಂವರ್ ತಿಂಗಳಿನಿಂದ ಎಪ್ರಿಲ್ ತಿಂಗಳವರೆಗೂ ಅವರು ಸಲ್ಲಿಸಿದ ಬಿಲ್ ಗೂ ಹಾಗೂ ಫುಟ್ ಬಾಲ್ ರಿಪೊರ್ಟ್​ಗೂ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಮಾಹಿತಿ ನೀಡುವಂತೆ ನೋಟಿಸ್ ನೀಡಿದ್ದೆವೆ. ನಮ್ಮ ನೋಟಿಸ್​ಗೆ ಉತ್ತರ ನೀಡಲಾಗದೆ, ಸುಖಾ ಸುಮ್ಮನೆ ಕಮಿಷನ್ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಂದಿ ಹಿಲ್ಸ್ ನಲ್ಲಿಯೂ ಇಂದಿರಾ ಕ್ಯಾಂಟೀನ್ ಮಾದರಿ ಮಯೂರ್ ಹೋಟೆಲ್ ಆರಂಭ

ಇಬ್ಬರ ಜಗಳದಿಂದ ಕೂಸು ಬಡವಾಯಿತು ಎಂಬಂತೆ, ಹಣ ಬಾರದ ಹಿನ್ನೆಲೆ ನಿಯಮನುಸಾರ ಇಂದಿರಾ ಕ್ಯಾಂಟೀನ್ ನಡೆಯುತ್ತಿಲ್ಲ. ಕಾಟಾಚಾರಕ್ಕೆ ಮುಂದುವರೆಸಿಕೊಂಡು ಹೊಗಲಾಗುತ್ತಿದ್ದು, ಹಸಿವು ನಿಗಿಸಲು ಬಡವರು ಇದರಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ.

ಕಮಿಷನ್ ಆರೋಪದ ಕುರಿತು ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣ ವಿ.ಬಿ. ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು