AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​

ಹಾವೇರಿ ಜಿಲ್ಲೆಯಲ್ಲಿನ ಮೂರು ಇಂದಿರಾ ಕ್ಯಾಂಟೀನ್​ಗಳ ಬಿಲ್ ಪಾವತಿ ಮಾಡಲು, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ವಿಶ್ವನಾಥ್ ದರ್ಶನಾಪೂರ ಆರೋಪಿಸಿದ್ದಾರೆ. ಆ ಮೂಲಕ ಅಧಿಕಾರಿ ಮತ್ತು ಗುತ್ತಿಗೆದಾರ ನಡುವಿನ ಜಟಾಪಟಿಗೆ ಸಾಕ್ಷಿ ಆಗಿದೆ. ಸರ್ಕಾರದ ಹಣ ಹೊಡೆಯಲು ಮಾಡಿದ ಸಂಚು ಬಯಲಾಗಿದ್ದು, ಇಬ್ಬರ ನಡುವೆ ಭಾರಿ ಗದ್ದಲ ಸೃಷ್ಟಿ ಆಗಿದೆ.

ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​
ಇಂದಿರಾ ಕ್ಯಾಂಟೀನ್​
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 19, 2023 | 11:03 PM

Share

ಹಾವೇರಿ, ಅಕ್ಟೋಬರ್​​​ 19: ಇಂದಿರಾ ಕ್ಯಾಂಟೀನ್ (Indira canteen) ಸಿದ್ಧರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಆಗಬೇಕಿತ್ತು. ಆದರೆ ಅಧಿಕಾರಿ ಮತ್ತು ಗುತ್ತಿಗೆದಾರ ನಡುವಿನ ಜಟಾಪಟಿಗೆ ಸಾಕ್ಷಿ ಆಗಿದೆ. ಸರ್ಕಾರದ ಹಣ ಹೊಡೆಯಲು ಮಾಡಿದ ಸಂಚು ಬಯಲಾಗಿದ್ದು, ಇಬ್ಬರ ನಡುವೆ ಭಾರಿ ಗದ್ದಲ ಸೃಷ್ಟಿಗೆ ಕಾರಣವಾಗಿದೆ. ಆ ಕುರಿತು ಒಂದು ವರದಿ ಇಲ್ಲಿದೆ ಮುಂದೆ ಓದಿ.

ಹಾವೇರಿ ಜಿಲ್ಲೆಯಲ್ಲಿನ ಮೂರು ಇಂದಿರಾ ಕ್ಯಾಂಟೀನ್​ಗಳ ಬಿಲ್ ಪಾವತಿ ಮಾಡಲು, ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ವಿಶ್ವನಾಥ್ ದರ್ಶನಾಪೂರ ಆರೋಪಿಸಿದ್ದಾರೆ. ಕಮಿಷನ್ ಹಾವಳಿಯಿಂದ ಹೈರಾಣಾದ ಗುತ್ತಿಗೆದಾರ ಇಂದಿರಾ ಕ್ಯಾಂಟಿನ್ ಹಳೆ ಬಿಲ್ ಪಾವತಿ ಮಾಡಿಸಿ ನನ್ನನ್ನು ಟೆಂಡರ್​ನಿಂದ ಮುಕ್ತಿ ಕೊಡಿ ಎಂದು ಮನವಿ ಮಾಡಿ ಪತ್ರ ಬರೆದಿದ್ದಾನೆ.

ಇದನ್ನೂ ಓದಿ: ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಗುತ್ತಿಗೆದಾರನ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಹಾವೇರಿ ನಗರಾಭಿವೃದ್ದಿ ಇಲಾಖೆಯ ಯೋಜನಾಧಿಕಾರಿ ಮಮತಾ. ಕಳೆದ ನವೆಂವರ್ ತಿಂಗಳಿನಿಂದ ಎಪ್ರಿಲ್ ತಿಂಗಳವರೆಗೂ ಅವರು ಸಲ್ಲಿಸಿದ ಬಿಲ್ ಗೂ ಹಾಗೂ ಫುಟ್ ಬಾಲ್ ರಿಪೊರ್ಟ್​ಗೂ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಮಾಹಿತಿ ನೀಡುವಂತೆ ನೋಟಿಸ್ ನೀಡಿದ್ದೆವೆ. ನಮ್ಮ ನೋಟಿಸ್​ಗೆ ಉತ್ತರ ನೀಡಲಾಗದೆ, ಸುಖಾ ಸುಮ್ಮನೆ ಕಮಿಷನ್ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಂದಿ ಹಿಲ್ಸ್ ನಲ್ಲಿಯೂ ಇಂದಿರಾ ಕ್ಯಾಂಟೀನ್ ಮಾದರಿ ಮಯೂರ್ ಹೋಟೆಲ್ ಆರಂಭ

ಇಬ್ಬರ ಜಗಳದಿಂದ ಕೂಸು ಬಡವಾಯಿತು ಎಂಬಂತೆ, ಹಣ ಬಾರದ ಹಿನ್ನೆಲೆ ನಿಯಮನುಸಾರ ಇಂದಿರಾ ಕ್ಯಾಂಟೀನ್ ನಡೆಯುತ್ತಿಲ್ಲ. ಕಾಟಾಚಾರಕ್ಕೆ ಮುಂದುವರೆಸಿಕೊಂಡು ಹೊಗಲಾಗುತ್ತಿದ್ದು, ಹಸಿವು ನಿಗಿಸಲು ಬಡವರು ಇದರಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ.

ಕಮಿಷನ್ ಆರೋಪದ ಕುರಿತು ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣ ವಿ.ಬಿ. ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ