AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ; ಹಾನಗಲ್​ನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಸಿದ್ದರಾಮಯ್ಯ, ಹೆಚ್​ಡಿ ಕುಮಾರಸ್ವಾಮಿ ಪಂಥಾಹ್ವಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರದು ಮಾತಿನ ಮಂಟಪ ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದ ವೇದಿಕೆಯೇ ದೊಡ್ಡ ಅಖಾಡ.

ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ; ಹಾನಗಲ್​ನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 23, 2021 | 2:15 PM

Share

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹುಬ್ಬಳ್ಳಿಯಿಂದ ಹಾನಗಲ್ಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಬೊಮ್ಮಾಯಿ, ವಿಪಕ್ಷ ನಾಯಕರು ಮಾತಿನಲ್ಲೇ ಮಂಟಪ ಕಟ್ಟಿಸುತ್ತಿದ್ದಾರೆ. ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಅಂತ ಹೇಳಿಕೆ ನೀಡಿದರು. ಇನ್ನು ಸಿಎಂ ಬೊಮ್ಮಾಯಿ, ಬಿಎಸ್​ವೈ ಜಂಟಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜ್ಯದ ಮುಖ್ಯಮಂತ್ರಿ, ಕಾಂಗ್ರೆಸ್​ನಲ್ಲಿ ಡಿಕೆಶಿ, ಸಿದ್ದರಾಮಯ್ಯರಿಂದ ಜಂಟಿ ಪ್ರಚಾರ ಮಾಡುತ್ತಿಲ್ವಾ? ಅಂತ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ, ಹೆಚ್​ಡಿ ಕುಮಾರಸ್ವಾಮಿ ಪಂಥಾಹ್ವಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರದು ಮಾತಿನ ಮಂಟಪ ಎಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದ ವೇದಿಕೆಯೇ ದೊಡ್ಡ ಅಖಾಡ. ವಿಧಾನಸೌಧದಲ್ಲಿಯೇ ಬಹಿರಂಗ ಚರ್ಚೆ ಮಾಡಲಿ. ನಾವು ಮಾಡಿದ್ದನ್ನು ನಿನ್ನೆಯೇ ದಾಖಲೆ ಸಮೇತ ಹೇಳಿದ್ದೇನೆ. ಕೆಲವು ಊರುಗಳ ಹೆಸರನ್ನು ಕೂಡ ಉಲ್ಲೇಖಿಸಿದ್ದೇನೆ. ವಿಪಕ್ಷದವರು ಅಲ್ಲಿಗೆ ಹೋಗಿ ನೋಡಿಕೊಂಡು ಬರಲಿ ಅಂತ ಹಾನಗಲ್​​ನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬಿಎಸ್​ವೈ ಆಗಮನದಿಂದ ನಮ್ಮ ಬಲ ಇಮ್ಮಡಿಯಾಗಿದೆ. ನಮ್ಮ ಗೆಲುವಿನ ಅಂತರ ಕೂಡ ಇಮ್ಮಡಿಯಾಗಿದೆ ಎಂದು ಟಿವಿ9ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರದ ವೇಳೆ ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ನಾನು ಮಾತಾಡಲ್ಲ. ಹಾನಗಲ್ ಕ್ಷೇತ್ರದಲ್ಲಂತೂ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆದಾಗ ರೈತರಿಗೆ ನಾಲ್ಕು ಸಾವಿರ ಕೊಡೋಕೆ ತೀರ್ಮಾನ ಮಾಡಿದರು. ತಾಲೂಕಿನ 38,433 ಜನ ರೈತರಿಗೆ ಕಿಸಾನ್ ಸಮ್ಮಾನ ಹಣ ಸಿಕ್ಕಿದೆ. ಈ ಕುಟುಂಬಗಳು ಯಾರಿಗೆ ವೋಟು ಹಾಕ್ತಾರೆ? ಯಡಿಯೂರಪ್ಪ, ಮೋದಿಯವರ ಪಕ್ಷದ ಬಿಜೆಪಿಗೆ ಮತ ಹಾಕ್ತಾರೆ. ನಮ್ಮ ವಿಶ್ವಾಸ ದಾಖಲೆಗಳಲ್ಲಿದೆ. ಕೊವಿಡ್ ಸಮಯದಲ್ಲಿ ಮಾಡಿದ ಸಹಾಯವನ್ನ ರಾಜಕೀಯ ಬಂಡವಾಳ ಮಾಡಿಕೊಳ್ತಿದ್ದಾರೆ. ಇದು ನ್ಯಾಯನಾ? ಯೋಗ್ಯನಾ? ಅಂತ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ

OMG 2: ‘ಓಹ್​ ಮೈ ಗಾಡ್​ 2’ ಪೋಸ್ಟರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ ಅಕ್ಷಯ್​ ಕುಮಾರ್​; ಹೇಗಿದೆ ಹೊಸ ಗೆಟಪ್​?

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

Published On - 12:44 pm, Sat, 23 October 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?