AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಲ್ಲಿ ಹೂಳಬೇಕು: ತವರು ಕ್ಷೇತ್ರದ ಜನರೆದುರು ಸಿಎಂ ಕಣ್ಣೀರು

ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ನಡೆದ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು ಭಾಷಣ ನಡುವೆ ಕ್ಷೇತ್ರದ ಜನರ ಎದುರು ಭಾವುಕ ನುಡಿಗಳನ್ನಾಡಿದ್ದಾರೆ.

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಲ್ಲಿ ಹೂಳಬೇಕು: ತವರು ಕ್ಷೇತ್ರದ ಜನರೆದುರು ಸಿಎಂ ಕಣ್ಣೀರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Dec 17, 2022 | 11:40 PM

Share

ಹಾವೇರಿ: ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಲ್ಲಿ ಹೂಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವೇದಿಕೆ ಮೇಲೆಯೇ ಕಣ್ಣೀರಿಟ್ಟಿರುವ ಪ್ರಸಂಗ ನಡೆಯಿತು. ಇಂದು(ಡಿಸೆಂಬರ್ 17) ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ನಡೆದ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರು ಭಾಷಣ ನಡುವೆ ಕ್ಷೇತ್ರದ ಜನರ ಎದುರು ಭಾವುಕ ನುಡಿಗಳನ್ನಾಡಿದರು.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಇದು ಕನಕದಾಸರ ಪುಣ್ಯಭೂಮಿ. ಅವರ ಮಹಿಮೆ ಇಲ್ಲಿಂದಲೇ ಪ್ರಾರಂಭವಾಗಿದೆ. ಇದು ಪರಿವರ್ತನೆಯ ಭೂಮಿ. ಈ ಕಾರ್ಯಕ್ರಮ ಮಾಡುವುದರಿಂದ ಕ್ಷೇತ್ರದ ಮುಂದಿನ ಭವ್ಯ ಭವಿಷ್ಯ ಮತ್ತಷ್ಟು ಪ್ರಗತಿಯಾಗಲಿಗಲಿದೆ. ಬಡ ಜನರ, ರೈತರ ಕಲ್ಯಾಣಕ್ಕಾಗಿ ಯೋಜನೆ ಮುಟ್ಟಿಸಿದಾಗ ಸುಭಿಕ್ಷ ಕ್ಷೇತ್ರ ಆಗಲಿದೆ. ಮಾಡಿಯೇ ತೀರುತ್ತೇನೆ ಎಂದು ಪಣ ತೊಡುತ್ತೇನೆ ಎಂದರು.

ನಿಮ್ಮೆಲ್ಲರ ಪ್ರೀತಿ., ಆಶೀರ್ವಾದದಿಂದ ನಾಡಿನ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ರಾಜ್ಯದ ನಾನಾ ಕಡೆ ಹೋದಾಗ ಸಿಗುವ ಸ್ವಾಗತ ನೋಡಿದಾಗ ನೀವು ನೆನಪಾಗುತ್ತೀರಿ. ಈ ಸ್ಥಾನ ಗೌರವ ನನಗೆ ಸಿಗಬೇಕಾದ್ದಲ್ಲ. ಕ್ಷೇತ್ರದ ಜನರಿಗೆ ಸಿಗಬೇಕಾದ್ದು ಎಂದು ಅನಿಸುತ್ತಿದೆ. ನಿಮ್ಮ ಪ್ರೀತಿ ನೆನಪಾಗುತ್ತದೆ ಎಂದು ಭಾವುಕರಾಗಿ ಹೇಳಿದರು.

ಎಲ್ಲ ಗ್ರಾಮಗಳಿಗ ಅನೇಕ ಸಲ ಹೋಗಿದ್ದೇನೆ. ಕೊಟ್ಟಿರುವ ರೊಟ್ಟಿ, ಬುತ್ತಿ, ಹೋಳಿಗೆ, ಸೀಕರಣಿ ಉಣಿಸಿದ್ದೀರಿ. ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ಅದರ ಮುಂದೆ ಎಷ್ಟು ಕೆಲ ಮಾಡಿದರೂ ಕಡಿಮೆ. ನಿಮ್ಮ ಋಣದಲ್ಲಿದ್ದೇನೆ. ಹಗಲಿರುಳು ಕೆಲಸ ಮಾಡಿ, ರಾಜ್ಯದ ಭಾರ ಇದ್ದರೂ ಹೃದಯ ಸ್ಥಾನದಲ್ಲಿ ನೀವಿದ್ದೀರಿ. ಮುಂದೆ ಕೂಡ ಮಾಡುತ್ತೇನೆ ಎಂದು ಕ್ಷೇತ್ರದ ಜನರೆದುರು ಮನದಾಳದ ಮಾತನಾಡಿದರು.

Published On - 11:40 pm, Sat, 17 December 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು