AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಪ್ರೇಮ ಪ್ರಣಯ ಎಂದು ಕಾಲೇಜಿಗೆ ಚಕ್ಕರ್ ಹಾಕಿ ಹುಡುಗಿ ಹಿಂದೆ ಸುತ್ತಾಡ್ತಿದ್ದ, ಕೇರಳಕ್ಕೆ ಹೋದವನು ಹೆಣವಾಗಿ ಬಂದ

ಅಪ್ರಾಪ್ತ ಬಾಲಕ ನೋರ್ವ ಅಪ್ರಾಪ್ತ ಬಾಲಕಿ ಜೊತೆ ಪ್ರೀತಿ ಮಾಡಿ ಕೇರಳಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಲು ಮುಂದಾಗಿರುತ್ತಾನೆ, ಆಗ ಹುಡುಗಿ ಮನೆಯವರು ಹುಡುಗನ ಮನೆಯವರಿಗೆ ನಿಮ್ಮ ಮಗ ನಮ್ಮ ಮಗಳನ್ನು ಕರೆದುಕೊಂಡು ಹೋಗಿರುತ್ತಾನೆ ಕರೆದು ತಂದು ನಮಗೆ ಒಪ್ಪಿಸಿ. ಇಲ್ಲವಾದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲಾ ಎಂದು ಹೇಳಿರುತ್ತಾರೆ. ಆಗ ಹೆತ್ತವರು ಮಗನನ್ನು ಹುಡುಕಿ ಬುದ್ದಿ ಹೇಳಿ ಅವರ ಮಗಳನ್ನು ಅವರ ಮನೆಗೆ ಕಳಿಸಿರುತ್ತಾರೆ. ಇಷ್ಟಕ್ಕೆ ಸುಮ್ಮನಾಗಿದ್ರೆ ಈ ಪ್ರಕರಣ ಸುಖಾಂತ್ಯ ಕಾಣುತ್ತಿತ್ತು. ಆದರೆ

ಪ್ರೀತಿ ಪ್ರೇಮ ಪ್ರಣಯ ಎಂದು ಕಾಲೇಜಿಗೆ ಚಕ್ಕರ್ ಹಾಕಿ  ಹುಡುಗಿ ಹಿಂದೆ ಸುತ್ತಾಡ್ತಿದ್ದ, ಕೇರಳಕ್ಕೆ ಹೋದವನು ಹೆಣವಾಗಿ ಬಂದ
ಕಾಲೇಜಿಗೆ ಚಕ್ಕರ್ ಹಾಕಿ ಹುಡುಗಿ ಹಿಂದೆ ಸುತ್ತಾಡ್ತಿದ್ದ, ಕೊನೆಗೆ
Follow us
ಸಾಧು ಶ್ರೀನಾಥ್​
|

Updated on:Mar 19, 2024 | 4:44 PM

ಆ ಹುಡುಗನ ಮುಖದ ಮೇಲೆ ಇನ್ನೂ ಸರಿಯಾಗಿ ಮೀಸೆ ಚಿಗುರಿರಲಿಲ್ಲ. ಅದರೂ ಪ್ರೀತಿ, ಪ್ರೇಮ, ಪ್ರಣಯ ಎಂದು ಕಾಲೇಜಿಗೆ ಚಕ್ಕರ್ ಹಾಕಿ ಹುಡುಗಿ ಹಿಂದೆ ಸುತ್ತಾಡುತ್ತಿದ್ದ. ಇಷ್ಟೇ ಮಾಡಿ ಸುಮ್ಮನ್ನೇ ಇದ್ದಿದ್ದರೆ ಜೀವಂತವಾಗಿ ಇರುತ್ತಿದ್ದನೇನೋ ಗೊತ್ತಿಲ್ಲ. ಆದರೆ ಪ್ರೀತಿಸಿದ ಹುಡುಗಿ ಜೊತೆ ಮನೆ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಒಂಬತ್ತು ತಿಂಗಳು ಹೆತ್ತು ಹೊತ್ತವರನ್ನು ಬಿಟ್ಟು ಹುಡುಗಿ ಹಿಂದೆ ಹೋದವನು ಹೆಣವಾಗಿ ಹೋಗಿದ್ದಾನೆ. ಒಂದಡೆ ಬಾಳಿ ಬದಕಬೇಕಾಗಿದ್ದ ಕರುಳು ಬಳ್ಳಿಯನ್ನು ಕಳೆದುಕೊಂಡು ಬಿಕ್ಕಿ, ಬಿಕ್ಕಿ ಅಳುತ್ತಿರುವ ಹೆತ್ತವರು. ಇನ್ನೊಂದಡೆ ತಂಡೋಪತಂಡವಾಗಿ ಬಂದು ಹೆಣವಾಗಿ ಮಲಗಿರುವ ಹುಡುಗನ ಕಂಡು ಮರಮರ ಮರಗುತ್ತಿರುವ ಗ್ರಾಮಸ್ಥರು. ಈ ಎಲ್ಲ ವಿದ್ಯಮಾನಗಳಿಗೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆ ಸವಣೂರು ಠಾಣಾ ವ್ಯಾಪ್ತಿಯ ಗ್ರಾಮಮೊಂದು.

ಅಪ್ರಾಪ್ತ ಬಾಲಕ ನೋರ್ವ ಅಪ್ರಾಪ್ತ ಬಾಲಕಿ ಜೊತೆ ಪ್ರೀತಿ ಮಾಡಿ ಕೇರಳಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಲು ಮುಂದಾಗಿರುತ್ತಾನೆ, ಆಗ ಹುಡುಗಿ ಮನೆಯವರು ಹುಡುಗನ ಮನೆಯವರಿಗೆ ನಿಮ್ಮ ಮಗ ನಮ್ಮ ಮಗಳನ್ನು ಕರೆದುಕೊಂಡು ಹೋಗಿರುತ್ತಾನೆ ಕರೆದು ತಂದು ನಮಗೆ ಒಪ್ಪಿಸಿ. ಇಲ್ಲವಾದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲಾ ಎಂದು ಹೇಳಿರುತ್ತಾರೆ. ಆಗ ಹೆತ್ತವರು ಮಗನನ್ನು ಹುಡುಕಿ ಬುದ್ದಿ ಹೇಳಿ ಅವರ ಮಗಳನ್ನು ಅವರ ಮನೆಗೆ ಕಳಿಸಿರುತ್ತಾರೆ.

ಇಷ್ಟಕ್ಕೆ ಸುಮ್ಮನಾಗಿದ್ರೆ ಈ ಪ್ರಕರಣ ಸುಖಾಂತ್ಯ ಕಾಣುತ್ತಿತ್ತು. ಆದರೆ ದ್ವೇಷ ಮತ್ತು ಹಣದಾಸೆಯಿಂದ ಪ್ರಕರಣ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಆತ್ಮಹತ್ಯೆಗೆ ಪ್ರಮುಖ ಕಾರಣ ವಕೀಲರು ಮತ್ತು ಪೊಲೀಸರು ಹಾಗೂ ಗ್ರಾಮದ ಮುಖಂಡರು ರಾಜೀಪಂಚಾಯಿತಿ ಹೆಸರಲ್ಲಿ ಐದು ಲಕ್ಷಕ್ಕೆ ಬೇಡಿಕೆ ಇಟ್ಟಿರುವುದೇ ಕಾರಣ ಎಂದು ಹುಡುಗನ ಕಡೆಯವರು ಆರೋಪ ಮಾಡುತ್ತಿದ್ದಾರೆ.

Also Read: Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಈ ಘಟನೆ ನಡೆದು ನಾಲ್ಕು ದಿನ ಗತಿಸಿದ್ದರೂ ಆರೋಪಿಗಳನ್ನು ಬಂಧಿಸದ ಹಿನ್ನೆಲೆ ಇಂದು ಕುಟುಂಬಸ್ಥರು ಹಾವೇರಿ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿ ಮಾಡಿ ತಮ್ಮ ಮಗನ ಸಾವಿಗೆ ನ್ಯಾಯ ಸಿಗುವಂತೆ ಮಾಡಲು ಒತ್ತಾಯಿಸಿದ್ದಾರೆ. ಫೊಸ್ಕೊ ಕೇಸ್ ಮಾಡುವುದಾಗಿ ಹೆದರಿಸಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಕಿರಾತಕರಿಗೆ ಶಿಕ್ಷೆ ಕೊಡಿಸಿ ಎಂದು ಒತ್ತಾಯಿಸಿದ್ದಾರೆ. ಈ ನೊಂದ ಕುಟುಂಬಕ್ಕೆ ಹಾವೇರಿಯ ಕೆಲ ಸಂಘಟನೆಗಳು ಕೈಜೋಡಿಸಿವೆ. ಬೇಗನೆ ಆರೋಪಿಗಳನ್ನು ಬಂಧಿಸದೆ ಇದ್ದರೆ ಉಗ್ರ ಹೋರಾಟದ ಎಚ್ಚೆರಿಕೆ ನೀಡಿದ್ದಾರೆ.

ಒಟ್ಟಾರೆ ಮಾಡಬಾರದ ವಯಸ್ಸಿನಲ್ಲಿ ಆಡಬಾರದ ಆಟವನ್ನು ಆಡಿದರೆ, ಆಗಬಾರದ್ದೇ ಅಗುತ್ತೆ ಎನ್ನುವಂತಾಗಿದೆ ಈ ಪ್ರಕರಣ ಸಾಕ್ಷಿ. ಈ ಸ್ಟೋರಿ ನೋಡಿಯಾದರು ಕಾಲೇಜು ವಿದ್ಯಾರ್ಥಿಗಳು ಸರಿ ದಾರಿಯಲ್ಲಿ ನಡೆಯಲಿ ಎನ್ನುವುದು ನಮ್ಮ ಆಶ್ರಯ ಜೊತೆಗೆ ಹೆಣ್ಣುಮಕ್ಕಳ ರಕ್ಷಣೆಗೆ ಇದ್ದ ಕಾಯ್ದೆಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವ ದುರುಳರಿಗೆ ಶಿಕ್ಷೆಯಾಗಲೇ ಬೇಕು ಎನ್ನುವುದು ಜನರ ಒತ್ತಾಯ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ 9, ಹಾವೇರಿ

Published On - 4:44 pm, Tue, 19 March 24

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್