AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್​​ನ್ನೂ ಬಿಡದ ಸೈಬರ್ ವಂಚಕರು: ರಾಜ್ಯದ ನೂರಾರು ಜನರಿಂದ ಕೋಟ್ಯಂತರ ರೂ ವಂಚನೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಸೈಬರ್ ಖದೀಮರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ಸಾಮಾನ್ಯರಿಂದ ಕೋಟ್ಯಂತರ ರೂ ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ಸೈಬರ್ ಖದೀಮರು ಯಾರನ್ನೂ ಬಿಡುತ್ತಿಲ್ಲ. ಹಾವೇರಿ ಜಿಲ್ಲೆಯಲ್ಲಿಯೇ 15ಕ್ಕೂ ಅಧಿಕ ಜನರು ವಂಚನೆಗೊಳಗಾಗಿದ್ದಾರೆ.

ಡೊನಾಲ್ಡ್ ಟ್ರಂಪ್​​ನ್ನೂ ಬಿಡದ ಸೈಬರ್ ವಂಚಕರು: ರಾಜ್ಯದ ನೂರಾರು ಜನರಿಂದ ಕೋಟ್ಯಂತರ ರೂ ವಂಚನೆ
ಟ್ರಂಪ್ ಹೆಸರಲ್ಲಿ ಮೊಬೈಲ್ ಆ್ಯಪ್ ಸೃಷ್ಟಿಸಿ ವಂಚನೆ
ಗಂಗಾಧರ​ ಬ. ಸಾಬೋಜಿ
|

Updated on:May 26, 2025 | 10:47 AM

Share

ಹಾವೇರಿ, ಮೇ 26: ಇತ್ತೀಚಿನ ದಿನಗಳಲ್ಲಿ ಸೋಶಿಯಲ್​ ಮೀಡಿಯಾ ಬಳಸಿಕೊಂಡು ವಂಚಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ವಂಚಿಸುವ ಸೈಬರ್ ಖದೀಮರು (Cyber ​​criminals) ದೊಡ್ಡ ದೊಡ್ಡ ಅಧಿಕಾರಿಗಳ ಹೆಸರು ಇಲ್ಲಾ, ರಾಜಕಾರಣಿಗಳ ಹೆಸರಿನಲ್ಲಿ ಜನ ಸಾಮಾನ್ಯರನ್ನು ವಂಚಿಸುತ್ತಿದ್ದಾರೆ. ಇದೀಗ ಇಂತಹದೊಂದು ಘಟನೆ ನಡೆದಿದೆ. ಇಲ್ಲಿ ಸೈಬರ್ ಖದೀಮರು ವಂಚನೆಗೆ ಬಳಸಿಕೊಂಡ ಹೆಸರು ಕೇಳಿದರೆ ನಿಜಕ್ಕೂ ನೀವು ದಂಗಾಗುತ್ತೀರಿ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೆಸರಿನಲ್ಲಿ ಸೈಬರ್ ಖದೀಮರು ಕೋಟ್ಯಂತರ ರೂ ಪೀಕಿದ್ದಾರೆ. ರಾಜ್ಯದಲ್ಲಿ ನೂರಾರು ಜನರು ವಂಚನೆಗೊಳಗಾಗಿದ್ದಾರೆ.

ಟ್ರಂಪ್ ಹೆಸರಿನಲ್ಲಿ ಮೊಬೈಲ್ ಆ್ಯಪ್ ಸೃಷ್ಟಿಸಿ ವಂಚನೆ   

ಸೈಬರ್​ ಖದೀಮರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಮೊಬೈಲ್ ಆ್ಯಪ್ ಸೃಷ್ಟಿಸಿ ವಂಚನೆಗಿಳಿದಿದ್ದಾರೆ. ವ್ಯಾಪಾರಸ್ಥರು, ವಕೀಲರು, ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರು ಸೇರಿದಂತೆ ಹಲವರಿಗೆ ಸೈಬರ್ ವಂಚಕರಿಂದ ಟೋಪಿ ಹಾಕಲಾಗಿದೆ.

ಇದನ್ನೂ ಓದಿ: ಯಾದಗಿರಿ: ನಿವೃತ್ತ ಮಹಿಳಾ ಅಧಿಕಾರಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 10 ಲಕ್ಷ ರೂ. ದೋಚಿದ ಸೈಬರ್ ವಂಚಕರು

ಹಾವೇರಿ ಜಿಲ್ಲೆಯಲ್ಲಿಯೇ 15ಕ್ಕೂ ಅಧಿಕ ಜನರು ವಂಚನೆ ಒಳಗಾಗಿದ್ದು, ಬೆಂಗಳೂರು, ಮಂಗಳೂರು, ತುಮಕೂರು, ಹಾವೇರಿ, ಹುಬ್ಬಳ್ಳಿ ಧಾರವಾಡ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಂಚನೆ ಮಾಡಲಾಗಿದೆ.

ಟ್ರಂಪ್ ಆ್ಯಪ್ ಕುರಿತು ಸೈಬರ್ ಕಳ್ಳರು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಹರಿಬಿಟ್ಟಿದ್ದಾರೆ. ಈ ಜಾಹೀರಾತಿನಲ್ಲಿ ನೀಡಿದ ನಂಬರ್​ಗಳಿಗೆ ನೂರಾರು ಜನರು ಕರೆ ಮಾಡಿದ್ದಾರೆ. ಕರೆ ಮಾಡಿದ ಜನರಿಗೆ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಕೆ ಆಮಿಷ ತೋರಿಸಿ ವಂಚನೆ ಮಾಡಲಾಗಿದೆ.

ಇದನ್ನೂ ಓದಿ: ಅಬ್ಬಬ್ಬಾ ಸೈಬರ್ ವಂಚಕನನ್ನೇ ಯಾಮಾರಿಸಿಯೇ ಬಿಟ್ಲು ಈ ಯುವತಿ, ವಿಡಿಯೋ ವೈರಲ್

ಮೊದಲು ಟ್ರಂಪ್ ಆ್ಯಪ್​​ಗೆ ಹಣ ಹಾಕಿದವರಿಗೆ ದುಪ್ಪಟ್ಟು ಹಣ ನೀಡಲಾಗಿದೆ. ಬಡ್ಡಿ ಹಣ ನೀಡಿ ನಂಬಿಕೆ ಗಳಿಸಿಕೊಂಡಿದ್ದ ಸೈಬರ್​ ವಂಚಕರು, ಬಳಿಕ ಜನ ಹೆಚ್ಚಿನ ಲಾಭಾಂಶದ ಆಸೆಗೆ ಬಿದ್ದು ಕೋಟ್ಯಂತರ ರೂ. ಹಣ ಹಾಕಿದ್ದಾರೆ. ಅತ್ತ ಜನರು ಹಣ ಹಾಕುತ್ತಿದ್ದಂತೆ ಸೈಬರ್ ಕಳ್ಳರು ನಾಪತ್ತೆ ಆಗಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸ್​ ದೂರು ದಾಖಲಾಗಿರುವ ಮಾಹಿತಿ ಇಲ್ಲ.

ವರದಿ: ಅಣ್ಣಪ್ಪ ಬಾರ್ಕಿ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 am, Mon, 26 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ