AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನಪದ ಜಾತ್ರೆಯಲ್ಲಿ ಕಿಕ್ಕೇರಿಸೋ ದಂಗಲ್, ಗೆದ್ದು ಬೀಗಿದ ಕುಸ್ತಿಪಟುಗಳು!

ಹಾವೇರಿ: ಅಖಾಡ ಯಾವುದೇ ಇರಲಿ.. ಎದುರಾಳಿ ಯಾರೇ ಇರಲಿ.. ಎಷ್ಟೇ ಬಲಶಾಲಿ ಆಗಿರಲಿ.. ಮುಂದಿಟ್ಟ ಹೆಜ್ಜೆ ಹಿಂದಿಡದೇ ಹೊಡೆಯೋದೇ. ಎದುರಾಳಿನ ಮಣ್ಣು ಮುಕ್ಕಿಸೋದೇ ಅಂತಾ ಪೈಲ್ವಾನರು ತೊಡೆ ತಟ್ಟುತ್ತಿದ್ರೆ, ನೆರೆದಿದ್ದವರು ಜೈಕಾರದ ಮಳೆ ಸುರಿಸುತ್ತಿದ್ರು. ಹಾವೇರಿಯಲ್ಲಿ ಜಾನಪದ ಜಾತ್ರೆ ಸಂಭ್ರಮ: ಹಾವೇರಿಯಲ್ಲಿ ಕುಸ್ತಿ ಪೈಲ್ವಾನರು ಧೂಳೆಬ್ಬಿಸಿದ್ರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾನಪದ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಿತ್ತು. ತೂಕದ ಆಧಾರದ ಮೇಲೆ ವಿವಿಧ ಹಂತಗಳಲ್ಲಿ ಕುಸ್ತಿ ಪಂದ್ಯಾವಳಿ ನಡೆಸಲಾಯ್ತು. ದಾವಣಗೆರೆ, ಧಾರವಾಡ, […]

ಜಾನಪದ ಜಾತ್ರೆಯಲ್ಲಿ ಕಿಕ್ಕೇರಿಸೋ ದಂಗಲ್, ಗೆದ್ದು ಬೀಗಿದ ಕುಸ್ತಿಪಟುಗಳು!
ಸಾಧು ಶ್ರೀನಾಥ್​
|

Updated on: Feb 15, 2020 | 12:42 PM

Share

ಹಾವೇರಿ: ಅಖಾಡ ಯಾವುದೇ ಇರಲಿ.. ಎದುರಾಳಿ ಯಾರೇ ಇರಲಿ.. ಎಷ್ಟೇ ಬಲಶಾಲಿ ಆಗಿರಲಿ.. ಮುಂದಿಟ್ಟ ಹೆಜ್ಜೆ ಹಿಂದಿಡದೇ ಹೊಡೆಯೋದೇ. ಎದುರಾಳಿನ ಮಣ್ಣು ಮುಕ್ಕಿಸೋದೇ ಅಂತಾ ಪೈಲ್ವಾನರು ತೊಡೆ ತಟ್ಟುತ್ತಿದ್ರೆ, ನೆರೆದಿದ್ದವರು ಜೈಕಾರದ ಮಳೆ ಸುರಿಸುತ್ತಿದ್ರು.

ಹಾವೇರಿಯಲ್ಲಿ ಜಾನಪದ ಜಾತ್ರೆ ಸಂಭ್ರಮ: ಹಾವೇರಿಯಲ್ಲಿ ಕುಸ್ತಿ ಪೈಲ್ವಾನರು ಧೂಳೆಬ್ಬಿಸಿದ್ರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾನಪದ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಿತ್ತು. ತೂಕದ ಆಧಾರದ ಮೇಲೆ ವಿವಿಧ ಹಂತಗಳಲ್ಲಿ ಕುಸ್ತಿ ಪಂದ್ಯಾವಳಿ ನಡೆಸಲಾಯ್ತು. ದಾವಣಗೆರೆ, ಧಾರವಾಡ, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ಕುಸ್ತಿ ಪಟುಗಳು ಎಂಟ್ರಿ ಕೊಟ್ಟಿದ್ರು.

ನಾನಾ ನೀನಾ ಅಂತಾ ಅಖಾಡದಲ್ಲಿ ಸೆಣಸಾಡಿ ಮಿಂಚಿದ್ರು. ಇನ್ನು, ಯುವಕರಲ್ಲಿನ ದುಶ್ಚಟಗಳನ್ನ ದೂರ ಮಾಡೋದು, ಕುಸ್ತಿ ಉಳಿಸಿ ಬೆಳೆಸಲು ಈ ಪಂದ್ಯಾವಳಿ ಆಯೋಜಿಸಲಾಗಿತ್ತು. ಯುವಕರು ಮಾತ್ರವಲ್ಲದೇ ಬಾಲಕರೂ ಸಹ ನಾವು ಯಾರಿಗೂ ಕಮ್ಮಿ ಇಲ್ಲ ಅನ್ನೋ ರೇಂಜಲ್ಲಿ ಜಬರದಸ್ತ್ ಆಗಿ ಕಾದಾಡಿದ್ರು.

ದಂಗಲ್ ಕಂಡು ನೆರೆದಿದ್ದವರು ಥ್ರಿಲ್: ಹಲಗೆ ಬಾರಿಸುತ್ತಾ ಪೈಲ್ವಾನರನ್ನ ಸಂಘಟಕರು ಅಖಾಡಕ್ಕೆ ಕರೆತರ್ತಿದ್ದಂತೆ ಪ್ರೇಕ್ಷಕರು ಕೇಕೆ, ಚಪ್ಪಾಳೆಗಳ ಸುರಿಮಳೆ ಸುರಿಸ್ತಿದ್ರು. ಕುಸ್ತಿಯಲ್ಲಿ ಸೆಣಸಾಡಿ ಗೆದ್ದವರಿಗೆ ಬಹುಮಾನ ವಿತರಿಸಲಾಯ್ತು. ಒಟ್ನಲ್ಲಿ, ಹಾವೇರಿಯಲ್ಲಿ ಕುಸ್ತಿ ಪಟುಗಳ ಸಮಾಗಮವೇ ಆಗಿತ್ತು. ನಾನಾ ನೀನಾ ಅಂತಾ ಶಕ್ತಿ ಮೀರಿ ಕಾದಾಡಿ ಬಹುಮಾನ ತಮ್ಮದಾಗಿಸಿಕೊಂಡ್ರು. ಈ ಕಿಕ್ಕೇರಿಸೋ ದಂಗಲ್ ಕಂಡು ನೆರೆದಿದ್ದವರು ಥ್ರಿಲ್ ಆದ್ರು.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ