ಹಾವೇರಿ ಜನರ ಜೀವ ಹಿಂಡುತ್ತಿದೆ ಡೆಂಗ್ಯೂ: ಶೇಕಾಡ 80 ರಷ್ಟು ಮಕ್ಕಳಲ್ಲಿ ಜ್ವರ ಪತ್ತೆ

ಹಾವೇರಿ ಜಿಲ್ಲೆಯಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಅದರಲ್ಲೂ 14 ವರ್ಷದ ಒಳಗಿನ ಮಕ್ಕಳಲ್ಲಿ ಅತಿ ಹೆಚ್ಚು ಕಾಣಿಸಿಕೊಂಡಿದ್ದು ಪೋಷಕರಲ್ಲೊ ಆತಂಕ ಮೂಡಿಸಿದೆ. ಹಾವೇರಿ ಜಿಲ್ಲೆಯಾದ್ಯಂತ ಕಾಣಿಸಿಕೊಂಡ ಡೆಂಗ್ಯೂ ಪ್ರಕರಣದಲ್ಲಿ ಶೇಕಡಾ 80 ರಷ್ಟು ಮಕ್ಕಳಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯ ಬೆಡ್ ಪುಲ್ ಆಗಿವೆ.

ಹಾವೇರಿ ಜನರ ಜೀವ ಹಿಂಡುತ್ತಿದೆ ಡೆಂಗ್ಯೂ: ಶೇಕಾಡ 80 ರಷ್ಟು ಮಕ್ಕಳಲ್ಲಿ ಜ್ವರ ಪತ್ತೆ
ಹಾವೇರಿ ಜನರ ಜೀವ ಹಿಂಡುತ್ತಿದೆ ಡೆಂಗ್ಯೂ ಜ್ವರ
Follow us
|

Updated on: May 30, 2024 | 10:30 AM

ಹಾವೇರಿ, ಮೇ.30: ಮುಂಗಾರು ಮಳೆ ಪ್ರಾರಂಭವಾಗಿ ಇನ್ನು ಒಂದು ವಾರ ಕಳೆದಿಲ್ಲ. ಮುಂಗಾರು ಈಗ ಚುರುಕು ಪಡೆಯುತ್ತಿದೆ. ಆದರೆ ಹಾವೇರಿ ಜಿಲ್ಲೆಯಲ್ಲಿ ಮಹಾಮಾರಿ ಡೆಂಗ್ಯೂ (Dengue)  ಜನರ ಜೀವನನ್ನ ಹಿಂಡುತ್ತಿದೆ. ಜಿಲ್ಲೆಯಲ್ಲಿಯೇ ಶೇಕಡಾ 80 ರಷ್ಟು ಮಕ್ಕಳಲ್ಲಿ ಡೆಂಗ್ಯೂ ಜ್ವರದ ಲಕ್ಷಣ ಕಂಡು ಬಂದಿದ್ದು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 162 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 108 ಮಕ್ಕಳಲ್ಲಿ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡಿವೆ.

ಜಿಲ್ಲಾಸ್ಪತ್ರೆಯಲ್ಲಿಯೇ 50 ಕ್ಕೂ ಹೆಚ್ಚು ಡೆಂಗ್ಯೂ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಸಕ್ತ ವರ್ಷದಲ್ಲಿ ಹಾವೇರಿ-10, ಬ್ಯಾಡಗಿ-30, ರಾಣೇಬೆನ್ನೂರು-18, ಹಿರೇಕೆರೂರು-20, ರಟ್ಟಿಹಳ್ಳಿ-08, ಶಿಗ್ಗಾಂವಿ-06, ಸವಣೂರು-01, ಹಾನಗಲ್-69 ಸೇರಿ ಒಟ್ಟು 162 ಕೇಸ್ ಗಳು ಪತ್ತೆಯಾಗಿವೆ. ಇದರಿಂದ ಚಿಕ್ಕಮಕ್ಕಳು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಎಲ್ಲ ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಲು ಮುಂದಾಗಿದೆ. ಜೊತೆಗೆ ಜನರು ಸಹ ಕರಿಸುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹೊಸ ತಂತ್ರಜ್ಞಾನ ಬಳಕೆ; ಬಾಕ್ಸ್ ಆಕಾರದಲ್ಲಿ ಕಾಮಗಾರಿ

ಕಳೆದ ವರ್ಷ ಅಂದರೆ 2023ರಲ್ಲಿ ಜಿಲ್ಲೆಯಲ್ಲಿ ಕೇವಲ 24 ಡೆಂಗ್ಯೂ ಕೇಸ್ ಪತ್ತೆಯಾಗಿದ್ದವು. ಆದರೆ ಈ ವರ್ಷ ಡೆಂಗ್ಯೂ ಪ್ರಕರಣ ಬಹಳ ಹೆಚ್ಚಾಗಿದೆ ಕಾರಣ ಕಳೆದ ಬಾರಿಯ ಬರಗಾಲ ಮತ್ತು ನೀರಿನ ಕೊರತೆ. ನೀರಿನ ಸಮಸ್ಯೆ ಇದ್ದ ಕಾರಣ ಜನರು ನೀರನ್ನ ಶೇಖರಣೆ ಮಾಡಿ ಬಳಕೆ ಮಾಡಿದ್ದಾರೆ. ಶೇಕರಣೆ ಮಾಡಿದ ನೀರಿನಲ್ಲಿ ಎಡಿಎಸ್ ಅನ್ನೋ ಸೊಳ್ಳೆ ಉತ್ತತ್ಪಿಯಾಗಿ ರೋಗ ಉಲ್ಬಣಗೊಂಡಿದೆ. ಹೀಗಾಗಿ ಸುತ್ತಮುತ್ತಲಿನ‌ ಪರಿಸರವನ್ನ ಸ್ವಚ್ಚವಾಗಿ ಇಟ್ಟಕೊಳ್ಳಬೇಕು. ಸೊಳ್ಳೆಬತ್ತಿ, ಸೊಳ್ಳೆ ಪರದೆ ಹಾಗೂ ಮನೆಯ ಮುಂದೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಇದರಿಂದ ಈ ಡೆಂಗ್ಯೂವನ್ನು ತಡೆಗಟ್ಟಬಹದು. ಮಕ್ಕಳಲ್ಲಿ ಜ್ವರ ಹಾಗೂ ವಾಂತಿ ಸೇರಿದಂತೆ ವಿವಿಧ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರ ಬಳಿ ತೆರಳಿ ಚಿಕಿತ್ಸೆಯನ್ನ ಪಡೆಯಬೇಕು. ಅದರಲ್ಲಿ ಮಕ್ಕಳ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕು ಎಂದು ಡಾ.ಸರಿತಾ ಸಲಹೆ ನೀಡಿದ್ದಾರೆ.

ಒಟ್ನಲ್ಲಿ ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 80 ರಷ್ಟು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ಜಿಲ್ಲಾಡಳಿತ ಮತ್ತು ವೈದ್ಯರ ತಡ ಜನರಲ್ಲಿ ಜಾಗೃತಿ ಮೂಡಿಸಿ, ಡೆಂಗ್ಯೂ ಮಹಾಮಾರಿಯನ್ನ ತಡೆಗಟ್ಟಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಡೆಂಗ್ಯೂ ಇನ್ನು ಹೆಚ್ಚಾಗಿ ಆಸ್ಪತ್ರೆಯ ಬೆಡ್ ಪುಲ್ ಆಗಲಿದೆ. ಯಾರು ಬಯ ಪಡುವ ಅವಶ್ಯಕತೆ ಇಲ್ಲ. ಲಕ್ಷಣಗಳು ಕಂಡ ತಕ್ಷಣ ಸಮೀಪದ ಆಸ್ಪತ್ರೆಗೆ ಬೇಟಿ ನೀಡಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಚಿಕ್ಕಮಕ್ಕಳ ತಜ್ಞ ಡಾ.ಅಂಜನಕುಮಾರ ಸಲಹೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್