AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಹಾವೇರಿಯಲ್ಲಿ ಹದಗೆಟ್ಟ ಸಾರ್ವಜನಿಕ ಶೌಚಾಲಯಗಳು: ಅಧಿಕಾರಿಗಳ ವಿರುದ್ದ ಜನರ ಹಿಡಿಶಾಪ

ಜಿಲ್ಲೆಯಲ್ಲಿ ಸರಿಯಾದ ನಿರ್ವಹಣೆ ಮಾಡದ ಹಿನ್ನಲೆ ಸಾರ್ವಜನಿಕ ಶೌಚಾಲಯಗಳು ಹದಗೆಟ್ಟಿದ್ದು, ಜನರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಮಳೆಯಿಂದಾಗಿ ಹಾವೇರಿಯಲ್ಲಿ ಹದಗೆಟ್ಟ ಸಾರ್ವಜನಿಕ ಶೌಚಾಲಯಗಳು: ಅಧಿಕಾರಿಗಳ ವಿರುದ್ದ ಜನರ ಹಿಡಿಶಾಪ
ಪ್ರಾತಿನಿಧಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 25, 2023 | 12:12 PM

Share

ಹಾವೇರಿ,ಜು.25: ಜಿಲ್ಲೆಯಲ್ಲಿ ಸರಿಯಾದ ನಿರ್ವಹಣೆ ಮಾಡದ ಹಿನ್ನಲೆ ಸಾರ್ವಜನಿಕ ಶೌಚಾಲಯಗಳು(Public Toilets) ಹದಗೆಟ್ಟಿದ್ದು, ಜನರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿ ಹೆಚ್ಚಾಗಿ ಸಾರ್ವಜನಿಕ ಶೌಚಾಲಯಗಳಿಲ್ಲ, ಇದೀಗ ಇರುವ ಶೌಚಾಲಯಗಳನ್ನೂ ನಿರ್ಲಕ್ಷಿಸಲಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಶೌಚಾಲಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೊಂದರೆ ಅನುಭವಿಸುತ್ತಿರುವ ನಗರಕ್ಕೆ ಬರುವ ಮಹಿಳೆಯರು, ಕಾಲೇಜು ಯುವತಿಯರು

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸ್ವಚ್ಛತೆ ಕಾಪಾಡಲು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿವೆ. ಜೊತೆಗೆ ‘ಸ್ವಚ್ಛ ಭಾರತ್ ಮಿಷನ್’ ಅಡಿಯಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಆದರೆ, ಹಾವೇರಿ ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸರಿಯಾದ ಶೌಚಾಲಯದ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಹಾವೇರಿಗೆ ಬರುವ ಮಹಿಳೆಯರು ಹಾಗೂ ಕಾಲೇಜು ಯುವತಿಯರು ತೊಂದರೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ:ಸಾರ್ವಜನಿಕ ಶೌಚಾಲಯಕ್ಕೆ ಸಂಬಂಧಪಟ್ಟ ಹೈಕೋರ್ಟ್ ನಿರ್ದೇಶನಕ್ಕೆ ಬಿಬಿಎಂಪಿ ಸಿದ್ಧತೆ ಹೇಗಿದೆ ಗೊತ್ತಾ?

ಈ ಕುರಿತು ಸರ್ಕಾರಿ ನೌಕರರಾದ ಸೌಜನ್ಯ ಪಾಟೀಲ್​ ಎಂಬುವವರು ಮಾತನಾಡಿ ‘ಕೆಲವೊಮ್ಮೆ ಶೌಚಾಲಯ ಬಳಸಲು ಹಾವೇರಿ ಬಸ್ ಟರ್ಮಿನಲ್​ಗೆ ಭೇಟಿ ನೀಡಬೇಕಾಗುತ್ತದೆ. ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಶೌಚಾಲಯ ನಿರ್ಮಿಸಿ, ನಿರ್ವಹಣೆ ಮಾಡಬೇಕು’ ಎಂದು ಆಗ್ರಹಿಸಿದರು. ಇನ್ನು ನಗರದ ಮಾಕನ್ ಗಲ್ಲಿ, ನಾಗೇಂದ್ರನಮಟ್ಟಿ, ಪುರದ ಓಣಿ, ಮುಲ್ಲಾನ ಟ್ಯಾಂಕ್ ಬಳಿ ಮತ್ತಿತರ ಕಡೆಗಳಲ್ಲಿ ಶೌಚಾಲಯಗಳಿದ್ದು, ನಿರ್ವಹಣೆಯ ಕೊರತೆಯಿಂದ ಉಪಯೋಗಿಸಲಾಗುತ್ತಿಲ್ಲ.

ಜಿಲ್ಲೆಯಲ್ಲಿ ನಿರಂತರ ಮಳೆಗೆ ಸೋರುತ್ತಿರುವ ಹಾವೇರಿ ಜಿಲ್ಲಾಸ್ಪತ್ರೆ

ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಹಾವೇರಿ ಜಿಲ್ಲಾಸ್ಪತ್ರೆಯ2 ನೇ ಮಹಡಿಯಲ್ಲಿರುವ ಮಕ್ಕಳ ವಾರ್ಡ್ ಸೋರುತ್ತಿದೆ. ಶೀತ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ಬಂದರೆ, ಅದರ ಮಳೆ ಹನಿಯ ಕಾಟ ಎದುರಾಗಿದೆ. ಇನ್ನು ಸೋರುತ್ತಿರುವ ಜಾಗಗಳಲ್ಲಿ ಬಕೆಟ್ ಇಟ್ಟು, ಸಿಬ್ಬಂದಿಗಳು ನೀರು ಹೊರ ಹಾಕುತ್ತಿದ್ದಾರೆ. ಇದರಿಂದ ರೋಗ ವಾಸಿಗೆ ಬಂದ ರೋಗಿಗಳಿಗೆ ಮತ್ತೊಷ್ಟು ರೋಗ ಹರಡುವ ಭೀತಿ ಎದುರಾಗಿದೆ. ಜೊತೆಗೆ ನಿನ್ನೆ ರಾತ್ರಿಯಲ್ಲಾ ಹನಿಗಳು ಸೋರುತ್ತಿದ್ದರಿಂದ ಆಸ್ಪತ್ರೆಯಲ್ಲಿದ್ದ ಪೋಷಕರು ನಿದ್ರೆಯಿಲ್ಲದೆ ತಮ್ಮ ಮಕ್ಕಳನ್ನ ಪೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Tue, 25 July 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ