AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಜ.6, 7ರಂದು ಐದು ಪಿಯು ಕಾಲೇಜುಗಳಿಗೆ ರಜೆ

ಜನವರಿ 6, 7, 8ರಂದು‌ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೀಗಾಗಿ ಜನವರಿ 6 ಮತ್ತು 7ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಜ.6, 7ರಂದು ಐದು ಪಿಯು ಕಾಲೇಜುಗಳಿಗೆ ರಜೆ
86th Kannada Sahitya Sammelan
TV9 Web
| Edited By: ಆಯೇಷಾ ಬಾನು|

Updated on:Jan 02, 2023 | 12:03 PM

Share

ಹಾವೇರಿ: ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೆಳನ (Kannada Sahitya Sammelana) ಪ್ರಯುಕ್ತ ಹಾವೇರಿ ಪಟ್ಟಣದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜನವರಿ 6, 7, 8ರಂದು‌ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹೀಗಾಗಿ ಜನವರಿ 6 ಮತ್ತು 7ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ಹಾವೇರಿ, ಗುಡ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ ಜೆ.ಎಂ ಪದವಿ ಪೂರ್ವ ಕಾಲೇಜು, ಎಸ್​ಎಂಎಸ್ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು ಐದು ಕಾಲೇಜಿಗೆ ರಜೆ ನೀಡಲಾಗಿದೆ. ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸುವಂತಾಗಳು ರಜೆ ನೀಡಲಾಗಿದೆ.

ಇದನ್ನೂ ಓದಿ: ಏಲಕ್ಕಿ ಕಂಪಿನ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: ತಯಾರಾಗುತ್ತಿವೆ ಸಾವಿರಾರು ಯಾಲಕ್ಕಿ ಹಾರಗಳು!

ಹಾವೇರಿ ಸಾಹಿತ್ಯ ಸಮ್ಮೇಳನ; ಪಾರ್ಕಿಂಗ್​, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾ ಟ್ರಾಫಿಕ್ ಪೋಲಿಸರಿಂದ ವಿನೂತನ ಪ್ರಯೋಗ

ಹಾವೇರಿ: ಜನವರಿ 6, 7 ಹಾಗೂ 8 ರಂದು ದಾಸಶ್ರೇಷ್ಠ ಕನಕದಾಸರ ನಾಡು ಹಾವೇರಿಯಲ್ಲಿ ಸಾಮರಸ್ಯದ ಭಾವ ಕನ್ನಡದ ಜೀವ ಎಂಬ ಧ್ಯೆಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಕ್ಕೆ ಬರುವ ವಾಹನ ನಿಲುಗಡೆಗಾಗಿ ಜಿಲ್ಲಾ ಸಂಚಾರಿ ಪೋಲಿಸ್ ವಿನೂತನ ಪ್ರಯೋಗ ಮಾಡಿದೆ. ಹೌದು ಹಾವೇರಿ (Haveri) ಜಿಲ್ಲಾ ಸಂಚಾರಿ ಪೋಲಿಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಂತ್ರಣಕ್ಕೆ ಕ್ಯು ಆರ್​ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

ಸಮ್ಮೇಳನಕ್ಕೆ ಬರುವವರಿಗಾಗಿ ಸುಲಲಿತ ಸಂಚಾರ ವ್ಯವಸ್ಥೆಗಾಗಿ ಜಿಲ್ಲಾ ಸಂಚಾರ ಪೋಲಿಸರು ಕ್ಯು ಆರ್​ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದು, ಸಂಚಾರ ಮಾರ್ಗಸೂಚಿಯನ್ನು ಗುಗಲ್ ಮ್ಯಾಪ್​ನಲ್ಲಿ ಅತಿ ಸರಳವಾಗಿ ತಿಳಿಯಬಹುದಾಗಿದೆ. ಇದರಿಂದ ಜನರು ಟ್ರಾಫಿಕ್ ಜ್ಯಾಮ್ ಸಮಸ್ಯೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Mon, 2 January 23

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ