AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದ ಬಾಲಕನ ಅಪಹರಣ ಮಾಡಿ, ಹೂತಿಟ್ಟು, ಮತ್ತೆ ಅರೆ ಸುಟ್ಟು ಹತ್ಯೆ.. ಬಾಲಕ ಸೇರಿ ಇಬ್ಬರು ಅರೆಸ್ಟ್

ಅಶ್ವಿನಿನಗರದ ನಿವಾಸಿಯಾಗಿದ್ದ ತೇಜಸ್​ಗೌಡ ಮಲ್ಲಿಕೇರಿ ಎಂಬ 11 ವರ್ಷದ ಯುವಕನನ್ನು ಮಾರ್ಚ್ 7ರಂದು ಅಪಹರಿಸಿಕೊಂಡು ಹೋಗಿ ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ. ಬಳಿಕ ಕೆರೆಯಲ್ಲಿ ಶವ ತೇಲಿದರೆ ಪೊಲೀಸರಿಗೆ ಗೊತ್ತಾಗಬಹುದು ಅನುಮಾನ ಬರಬಹುದು ಎಂಬ ಭೀತಿ ಹಿನ್ನೆಲೆಯಲ್ಲಿ ಶವವನ್ನು ತಂದು ಮನೆಯ ಹಿತ್ತಲಿನಲ್ಲಿ ಹೂತಿದ್ದಾರೆ. ನಂತರ ಮತ್ತೆ ಆರೋಪಿಗಳಿಗೆ ಭಯ ಶುರುವಾಗಿದೆ...

11 ವರ್ಷದ ಬಾಲಕನ ಅಪಹರಣ ಮಾಡಿ, ಹೂತಿಟ್ಟು, ಮತ್ತೆ ಅರೆ ಸುಟ್ಟು ಹತ್ಯೆ.. ಬಾಲಕ ಸೇರಿ ಇಬ್ಬರು ಅರೆಸ್ಟ್
ಹಾವೇರಿ SP ಕೆ.ಜಿ. ದೇವರಾಜು.
ಆಯೇಷಾ ಬಾನು
| Edited By: |

Updated on: Mar 12, 2021 | 4:02 PM

Share

ಹಾವೇರಿ: 6 ದಿನದಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಯಸಲ್ಲದ ವಯಸಲ್ಲಿ ಒಬ್ಬ ಬಾಲಕ ಮೃತಪಟ್ಟರೆ ಇಬ್ಬರು ಬಾಲಕರು ಕೊಲೆ ಆರೋಪಿಗಳಾಗಿದ್ದಾರೆ. ಹಾವೇರಿಯಲ್ಲಿ ಇಂತಹದೊಂದು ಅನಾಹುತ ಸಂಭವಿಸಿದೆ. ಅಶ್ವಿನಿನಗರದ ತೇಜಸ್​ಗೌಡ ಮಲ್ಲಿಕೇರಿ ಹತ್ಯೆಯಾದ ಬಾಲಕ.

ಘಟನೆ ಹಿನ್ನೆಲೆ: ಅಶ್ವಿನಿನಗರದ ನಿವಾಸಿಯಾಗಿದ್ದ ತೇಜಸ್​ಗೌಡ ಮಲ್ಲಿಕೇರಿ ಎಂಬ 11 ವರ್ಷದ ಯುವಕನನ್ನು ಮಾರ್ಚ್ 7ರಂದು ಅಪಹರಿಸಿಕೊಂಡು ಹೋಗಿ ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ. ಬಳಿಕ ಕೆರೆಯಲ್ಲಿ ಶವ ತೇಲಿದರೆ ಪೊಲೀಸರಿಗೆ ಗೊತ್ತಾಗುವ ಭೀತಿ ಹಿನ್ನೆಲೆಯಲ್ಲಿ ಶವ ತಂದು ಮನೆಯ ಹಿತ್ತಲಿನಲ್ಲಿ ಹೂತಿದ್ದಾರೆ. ನಂತರ ಮತ್ತೆ ಭಯ ಶುರುವಾಗಿದೆ.

ಶವವನ್ನು ಪೊಲೀಸರು ಪತ್ತೆ ಹಚ್ಚುತ್ತಾರೆ ಎಂದು ಅನ್ನಿಸಿ ಮತ್ತೆ ಹೂತಿದ್ದ ಶವ ತೆಗೆದು ಮನೆ ಬಳಿ ಅರೆಬರೆ ಸುಟ್ಟು ಪರಾರಿಯಾಗಿದ್ದಾರೆ. ಮನೆ ಸಮೀಪದ ಮುಳ್ಳುಕಂಟೆ ಬಳಿ ಬಾಲಕನ ಶವಕ್ಕೆ ಬೆಂಕಿ ಇಟ್ಟಿದ್ದಾರೆ. ಈ ಸಂಬಂಧ ಮಾರ್ಚ್ 8ರಂದು ಹಾವೇರಿ ಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕೇಸ್ ಸಂಬಂಧ ರಿತೇಶ ಮೇಟಿ ಎಂಬ 21 ವರ್ಷದ ಯುವಕ ಮತ್ತು ಓರ್ವ ಬಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಇವರಿಬ್ಬರ ವಿರುದ್ಧ ಕೊಲೆ ಮತ್ತು ಸಾಕ್ಷ್ಯನಾಶ ಪ್ರಕರಣ ದಾಖಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತೇಜಸ್​ಗೌಡನನ್ನು ಕೊಲೆ ಮಾಡಲು ಕಾರಣವೇನು? ಎಂಬ ಬಗ್ಗೆ ತನಿಖೆ ಬಳಿಕವೇ ಗೊತ್ತಾಗಲಿದೆ. ಸದ್ಯ ಯಾವುದೇ ಮಾಹಿತಿ ಸಿಕಿಲ್ಲ.

ಇದನ್ನೂ ಓದಿ: ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ