ಈಶ್ವರಪ್ಪರ ಮಕ್ಕಳಾಟವೇ ಬಿಜೆಪಿಯಲ್ಲಿ ಅಶಿಸ್ತಿಗೆ ಕಾರಣವಾಗಿದೆ, ವಲಸಿಗರಿಂದಲ್ಲ: ಬಿಸಿ ಪಾಟೀಲ್, ಮಾಜಿ ಶಾಸಕ

ವಲಸೆ ಬಂದ ಕಾಂಗ್ರೆಸ್ ಶಾಸಕರಿಂದಲೇ ಬಿಜೆಪಿಯಲ್ಲಿ ಅಶಿಸ್ತು ಉಂಟಾಗಿದೆ ಎಂದು ಎರಡೆರಡು ಬಾರಿ ಹೇಳಿರುವ ಈಶ್ವರಪ್ಪ ನಂತರ ತನಗೆ ಫೋನ್ ಮಾಡಿ, ಇಲ್ಲ ನಾನು ಹಾಗೆ ಹೇಳಿಲ್ಲ ಅನ್ನುತ್ತಾರೆ ಎಂದು ಪಾಟೀಲ್ ಹೇಳಿದರು.

ಈಶ್ವರಪ್ಪರ ಮಕ್ಕಳಾಟವೇ ಬಿಜೆಪಿಯಲ್ಲಿ ಅಶಿಸ್ತಿಗೆ ಕಾರಣವಾಗಿದೆ, ವಲಸಿಗರಿಂದಲ್ಲ: ಬಿಸಿ ಪಾಟೀಲ್, ಮಾಜಿ ಶಾಸಕ
|

Updated on: Aug 22, 2023 | 2:58 PM

ಹಾವೇರಿ: ಬಿಜೆಪಿಗೆ ವಲಸೆ ಹೋದ ಕಾಂಗ್ರೆಸ್ ನಾಯಕರು ಪಕ್ಷದ ವರಿಷ್ಠ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ನಾವು ಈಗಾಗಲೇ ವರದಿ ಮಾಡಿರುವಂತೆ ಎಸ್ ಟಿ ಸೋಮಶೇಖರ್ (ST Somashekhar), ಶಿವರಾಂ ಹೆಬ್ಬಾರ್ (Shivaram Hebbar) ತಮ್ಮ ಕೋಪವನ್ನು ಬಹಿರಂಗಗೊಳಿಸಿದ್ದಾರೆ. ಅವರಿಬ್ಬರು ಇಷ್ಟರಲ್ಲೇ ವಾಪಸ್ಸು ಕಾಂಗ್ರೆಸ್ ಗೆ ಹೋದರೆ ಆಶ್ವರ್ಯವಿಲ್ಲ. ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಶಾಸಕ ಬಿಸಿ ಪಾಟೀಲ್ (BC Patil) ಸಹ ಈಶ್ವರಪ್ಪ ವಿರುದ್ಧ ಕಿಡಿಕಾರಿದರು. ವಲಸೆ ಬಂದ ಕಾಂಗ್ರೆಸ್ ಶಾಸಕರಿಂದಲೇ ಬಿಜೆಪಿಯಲ್ಲಿ ಅಶಿಸ್ತು ಉಂಟಾಗಿದೆ ಎಂದು ಎರಡೆರಡು ಬಾರಿ ಹೇಳಿರುವ ಈಶ್ವರಪ್ಪ ನಂತರ ತನಗೆ ಫೋನ್ ಮಾಡಿ, ಇಲ್ಲ ನಾನು ಹಾಗೆ ಹೇಳಿಲ್ಲ ಅನ್ನುತ್ತಾರೆ ಎಂದು ಪಾಟೀಲ್ ಹೇಳಿದರು. ಹೇಳೋದನ್ನು ಹೇಳಿದ ನಂತರ, ತನ್ನಿಂದ ತಪ್ಪಾಯಿತು ಅನ್ನುವ ಈಶ್ವರಪ್ಪನವರ ಹುಡುಗಾಟವೇ ಬಿಜೆಪಿಯಲ್ಲಿ ಅಶಿಸ್ತಿಗೆ ಕಾರಣವಾಗಿದೆ, ಅವರು ತಮ್ಮ ಹಿರಿತನಕ್ಕೆ ತಕ್ಕ ಮತಾಡಬೇಕು ಎಂದು ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ