AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದ ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ; ಐದು ದಿನದ ಹೆಣ್ಣು ಮಗು ಕರ್ಕೊಂಡು ಎಸ್ಪಿ ಕಚೇರಿಗೆ ಬಂದ ಬಾಣಂತಿ

ತನ್ನ ಗಂಡ ಎರಡು ಹೆಣ್ಣು ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ ಮಾಡಿದ್ದಾನೆ ಎಂದು ಆರೋಪಿಸಿದ ಬಾಣಂತಿ ಮಹಿಳೆಯೊಬ್ಬಳು ಐದು ದಿನದ ಹೆಣ್ಣು ಮಗುವನ್ನು ಕರೆದುಕೊಂಡು ಹಾವೇರಿ(Haveri) ಎಸ್ಪಿ ಕಚೇರಿಗೆ ಆಗಮಿಸಿದ ಘಟನೆ ನಡೆದಿದೆ.

ಗಂಡನಿಂದ ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ; ಐದು ದಿನದ ಹೆಣ್ಣು ಮಗು ಕರ್ಕೊಂಡು ಎಸ್ಪಿ ಕಚೇರಿಗೆ ಬಂದ ಬಾಣಂತಿ
ಬಾಣಂತಿ ಮಹಿಳೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 06, 2024 | 7:01 PM

Share

ಹಾವೇರಿ, ಜ.06: ತನ್ನ ಗಂಡ ಎರಡು ಹೆಣ್ಣು ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ ಮಾಡಿದ್ದಾನೆ ಎಂದು ಆರೋಪಿಸಿದ ಬಾಣಂತಿ ಮಹಿಳೆಯೊಬ್ಬಳು ಐದು ದಿನದ ಹೆಣ್ಣು ಮಗುವನ್ನು ಕರೆದುಕೊಂಡು ಹಾವೇರಿ(Haveri) ಎಸ್ಪಿ ಕಚೇರಿಗೆ ಆಗಮಿಸಿದ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಬಾಣಂತಿ ಗೀತಾ ಹುಲ್ಲುರು ಎಂಬುವವರು ಆರು ವರ್ಷದ ಹಿಂದೆ ಬ್ಯಾಡಗಿಯ ಸಿದ್ದಲಿಂಗಪ್ಪ ಎಂಬ ಯುವಕನ ಜೊತೆ ವಿವಾಹವಾಗಿದ್ದರು. ಇದೀಗ ತನ್ನ ಮಗುವನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ, ಗಂಡ ಸಿದ್ದಲಿಂಗಪ್ಪನ ವಿರುದ್ಧ ದೂರು ನೀಡಲು ಎಸ್ಪಿ ಕಛೇರಿಗೆ ಆಗಮಿಸಿದ್ದಾರೆ.

ಕಿಡ್ನಾಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಇನ್ನು ಮಂಗಳವಾರ ದಾಖಲಾದ ಕಿಡ್ನಾಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಠಾಣೆಯಲ್ಲಿ ನಾಲ್ಕು ವರ್ಷದ ಮಗಳನ್ನು ಕಿಡ್ನಾಫ್ ಮಾಡಿದ್ದಾರೆ ಸಿದ್ದಲಿಂಗಪ್ಪ ದೂರು ನೀಡಿದ್ದರು. ಸಿದ್ದಲಿಂಗಪ್ಪನ ದೂರಿನ ಮೇಲೆ ಇಬ್ಬರನ್ನು ಬ್ಯಾಡಗಿ ಪೊಲೀಸರು ಬಂಧನ ಮಾಡಿದ್ದರು. ಆದರೆ, ಈ ಪ್ರಕರಣಕ್ಕೆ ಇದೀಗ ಅಚ್ಚರಿ ಎಂಬಂತೆ ಆತನ ಪತ್ನಿಯೇ ಪ್ರತಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ:ಹಾವೇರಿ: ಕಳ್ಳತನವಾದ ನವಜಾತ ಶಿಶು ಎರಡು ದಿನದ ಬಳಿಕ ಹೆತ್ತಮ್ಮನ ಮಡಿಲಿಗೆ; ಏನಿದು ಅಂತೀರಾ? ಈ ಸ್ಟೋರಿ ನೋಡಿ

ಇನ್ನು ಕಳೆದ ಮಾರ್ಚನಲ್ಲಿ ಬ್ಯಾಡಗಿ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರ ಮಗು ಹೆರಿಗೆ ಆದ ಕೆಲವೇ ಗಂಟೆಯಲ್ಲಿ ನರ್ಸ್ ಸೂಗಿನಲ್ಲಿ ಬಂದ ಮಹಿಳೆಯೊಬ್ಬರು ಪ್ಲಾ‌ನ್ ಮಾಡಿ ಮಗುವನ್ನು ಕಿಡ್ನಾಪ್ ಮಾಡಿದ್ದರು. ಬಳಿಕ ಮಗು ಕಳ್ಳತನವಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಮಗುವಿನ ತಂದೆ ಹಾಗೂ ಅಜ್ಜ ಎಲ್ಲರೂ ಆಸ್ಪತ್ರೆ ಬಳಿ ದೌಡಾಯಿಸಿದ್ದರು. ಕೂಡಲೇ ಪೊಲೀಸ್​ ಕಂಪ್ಲೆಂಟ್​ ಕೊಟ್ಟಿದ್ದು, ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇನ್ನು ವಿಷಯ ತಿಳಿದ ಖರ್ತನಾಕ ಮಹಿಳೆ ಮಗುವನ್ನ ಪೊಲೀಸ್ ಠಾಣೆಗೆ ಒಪ್ಪಿಸಿದ್ದಳು. ತನಗೆ  ಮದುವೆ ಆಗಿ ಐದು ವರ್ಷ ಕಳೆದರೂ ಮಗು ಇಲ್ಲ ಎಂದು ಚಿಂತೆ ಇದ್ದ ಹಿನ್ನಲೆ. ಮಾನಸಿಕವಾಗಿ ನಾನು ಮಗುವನ್ನ ಕದ್ದೆ‌ ಎಂದಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 6 January 24

Follow Us
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು