AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೇ ಗೆಲ್ತಾರೆ ಎಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ ಮಾನೆ ಅಭಿಮಾನಿ! ಫಲಿತಾಂಶ ಏನಿದೆ?

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೇ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿಯೊಬ್ಬರು ಒಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೇ ಗೆಲ್ತಾರೆ ಎಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ ಮಾನೆ ಅಭಿಮಾನಿ! ಫಲಿತಾಂಶ ಏನಿದೆ?
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೇ ಗೆಲ್ತಾರೆ ಎಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ ಮಾನೆ ಅಭಿಮಾನಿ
TV9 Web
| Edited By: |

Updated on:Nov 02, 2021 | 11:29 AM

Share

ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ (Srinivas Vishnurav Mane) ಜಯಭೇರಿ ಬಾರಿಸೋದತ್ತ ಮುನ್ನುಗ್ಗುತ್ತಿದ್ದಾರೆ. ಸದ್ಯ ಈಗ ಅವರ ಅಭಿಮಾನಿಗಳು ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟುತಿದ್ದಾರೆ. ಕ್ಷೇತ್ರದಲ್ಲಿ ಬೆಟ್ಟಿಂಗ್ ಆಟ ಜೋರಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದೇ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿಯೊಬ್ಬರು ಒಂದು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅಭಿಮಾನಿ ಬಿಜೆಪಿಯವರು ಒಂದು ಮತಕ್ಕೆ 2,500 ರೂಪಾಯಿ ಕೊಟ್ಟಿದ್ದಾರೆ. ಕಾಂಗ್ರೆಸ್ ಪ್ರಾಮಾಣಿಕವಾಗಿ ಗೆಲ್ಲುತ್ತದೆ ಎಂದು ಶ್ರೀನಿವಾಸ ಮಾನೆ ಅಭಿಮಾನಿ ತಮ್ಮ ನಾಯಕ ಗೆಲ್ಲುವುದಾಗಿ ಟಿವಿ9 ಬಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 12 ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ನಾಗಾಲೋಟದಲ್ಲಿದ್ದು, 10,460 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಂದಿದ್ದರೆ, ಸಿಂದಗಿಯಲ್ಲಿ ಬಿಜೆಪಿ ಜಯಭೇರಿ ಬಾರಿಸುವತ್ತ ಸಾಗಿದೆ. ಇನ್ನು ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲಿನತ್ತ ಮುಖ ಮಾಡಿದ್ದಾರೆ.​

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಐದನೇ ಸುತ್ತಿನಲ್ಲಿ ಪಡೆದ ಮತಗಳ ವಿವರ ಬಿಜೆಪಿ-22024, ಕಾಂಗ್ರೆಸ್-23344, ಜೆಡಿಎಸ್-204

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಸಿಂದಗಿಯಲ್ಲಿ 7ನೇ ಸುತ್ತಿನಲ್ಲಿ ಪಡೆದ ಮತಗಳ ವಿವರ ಬಿಜೆಪಿ-32487, ಕಾಂಗ್ರೆಸ್-19162, ಜೆಡಿಎಸ್-1173

ಸಿಂದಗಿಯಲ್ಲಿ 14ನೇ ಸುತ್ತಿನಲ್ಲಿ ಪಡೆದ ಮತಗಳ ವಿವರ ಬಿಜೆಪಿ-60478, ಕಾಂಗ್ರೆಸ್-42177, ಜೆಡಿಎಸ್-2736

ಸದ್ಯಕ್ಕೆ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಂದಿದೆ. ಆದ್ರೆ ಇಲ್ಲಿ ಬಿಜೆಪಿ ಗೆಲ್ಲುತ್ತದೆ‌ 15 ರಿಂದ 20 ಸಾವಿರ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಮತ ಎಣಿಕೆ ಕೇಂದ್ರದ ಎದುರು ಬಿಜೆಪಿ ಅಭಿಮಾನಿಗಳು ವಿಶ್ವಾಸ ಹೊರ ಹಾಕಿದ್ದಾರೆ. ಬಿಜೆಪಿ ಬೆಂಬಲಿಗರು ಮೋದಿ ಮೋದಿ ಎಂದು ಘೋಷಣೆ ಹಾಕುತ್ತಿದ್ದಾರೆ.

ಇದನ್ನೂ ಓದಿ ನೋಡಿ: ಹಾನಗಲ್​ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ 1 ಎಕರೆ ಜಮೀನು ಬೆಟ್ಟಿಂಗ್ ಕಟ್ಟಿದ ಅಭಿಮಾನಿ

ಇದನ್ನೂ ಓದಿ: Karnataka ByElection Results 2021 Counting LIVE: ಇಂದು ಹಾನಗಲ್​, ಸಿಂದಗಿ ಉಪಚುನಾವಣೆ ಫಲಿತಾಂಶ

Published On - 10:39 am, Tue, 2 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ