AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ನೆಹರು ಓಲೇಕಾರ ಕುಟುಂಬದಿಂದ ದಬ್ಬಾಳಿಕೆ ಆರೋಪ: ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು

ಶಾಸಕ ನೆಹರು ಓಲೇಕಾರ ಕುಟುಂಬದ ವಿರುದ್ಧ ಜಮೀನಿಗಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದ ನಿವಾಸಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳಲಾರದೆ  ನಾಲ್ವರು ಗ್ರಾಮಸ್ಥರು ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಾಸಕ ನೆಹರು ಓಲೇಕಾರ ಕುಟುಂಬದಿಂದ ದಬ್ಬಾಳಿಕೆ ಆರೋಪ: ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು
ಶಾಸಕ ನೆಹರು ಓಲೆಕಾರImage Credit source: Vartha Bharthi
TV9 Web
| Edited By: |

Updated on:Jun 14, 2022 | 3:56 PM

Share

ಹಾವೇರಿ: ಶಾಸಕ ನೆಹರು ಓಲೇಕಾರ (MLA Neharu Olekar) ಕುಟುಂಬದ ವಿರುದ್ಧ ಜಮೀನಿಗಾಗಿ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ (Byadagi) ತಾಲೂಕಿನ ಶಿಡೇನೂರು ಗ್ರಾಮದ ನಿವಾಸಿಗಳ ಮೇಲೆ ದಬ್ಬಾಳಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಕಿರುಕುಳ ತಾಳಲಾರದೆ  ನಾಲ್ವರು ಗ್ರಾಮಸ್ಥರು ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಪಾಂಡಪ್ಪ ಲಮಾಣಿ (70), ಗುರುಚಪ್ಪ ಲಮಾಣಿ (72), ಗಂಗವ್ವ ಕಬ್ಬೂರು (65) ಮತ್ತು ಹನುಮಂತಪ್ಪ ಬಡಿಗೇರ (41) ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು ನಾಲ್ವರಿಗೆ   ಬ್ಯಾಡಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನು ಓದಿ: ರಾಹುಲ್, ಸೋನಿಯಾ ಗಾಂಧಿಯ ಆತ್ಮವಿಶ್ವಾಸ ಕುಗ್ಗಿಸಲು ಇಡಿ ದಾಳಿ; ಮಲ್ಲಿಕಾರ್ಜುನ ಖರ್ಗೆ ಆರೋಪ

ಗ್ರಾಮದ 29 ಕುಟುಂಬಗಳು ಅಕ್ರಮ ಸಕ್ರಮ ಜಮೀನು ಸಾಗುವಳಿ ಮಾಡುತ್ತಿದ್ದವು, ಈ ಸಂಬಂಧ ಎಲ್ಲರೂ ತಲಾ 15 ಗುಂಟೆ ಜಮೀನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕ ನೆಹರು ಓಲೇಕಾರ ಮತ್ತು ಮಕ್ಕಳಿಂದ ದಬ್ಬಾಳಿಕೆ ನಡೆಯುತ್ತಿತ್ತು.  ಈ 29 ಕುಟುಂಬಗಳ ಕೃಷಿಗೆ ಗ್ರಾಮದ ಜನರು ಸಹಕಾರ ಕೊಡದಂತೆ ಓಲೇಕಾರ ಕುಟುಂಬಸ್ಥರು ಮಾಡಿದ್ದರು ಎಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಸ್ಥರ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಆದರೆ ಈ ಆರೋಪವನ್ನು ಹಾವೇರಿ ಶಾಸಕ ನೆಹರು ಓಲೇಕಾರ ಅಲ್ಲೆಗೆಳದಿದ್ದಾರೆ.

ಈ ಸಂಬಂಧ ಮಾತನಾಡಿದ ಶಾಸಕ ನೆಹರು ಓಲೇಕಾರ ನಾವೆ ಹೊಲ ಕೊಡಿಸಿದ್ವಿ, ನಾವ್ಯಾಕೆ ಅವರಿಗೆ ಕೇಳೋಣ. ನಾವ್ಯಾರಿಗೂ ಬಿಟ್ಟು ಕೊಡಲು ಹೇಳಿಲ್ಲ. ‘ಕೈ’ ಮುಖಂಡರೊಬ್ಬರ ಕುಮ್ಮಕ್ಕಿನಿಂದ ಹೀಗೆ ಹೇಳುತ್ತಿದ್ದಾರೆ. ಊರಿನ ಅಭಿವೃದ್ಧಿ ಸಲುವಾಗಿ ಇಟ್ಟಿರುವ ಜಮೀನು ಒತ್ತುವರಿ ಮಾಡಲಾಗಿದೆ. ಅದಕ್ಕೆ ಊರಿನವರು ಅವಕಾಶ ಕೊಡುತ್ತಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Tue, 14 June 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ