AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಜಗಳ; ತ್ರಿಶೂಲದಿಂದ ಹಲ್ಲೆಗೆ ಯತ್ನ, ಅವಾಚ್ಯ ಪದಗಳಿಂದ ‘ಪೂಜೆ’

ಎಂದಿನಂತೆ ನಿನ್ನೆ ಕೂಡ ದೇವಾಲಯದಲ್ಲಿ ಪೂಜೆ ನಡೆಯುತ್ತಿತ್ತು. ಆದ್ರೆ ಆರತಿ ತಟ್ಟೆ ಹಿಡಿದು ಪೂಜೆ ಮಾಡ್ತಿದ್ದ ಪೂಜಾರಿಯ ಚಿಕ್ಕಪ್ಪ ಮತ್ತು ಪೂಜಾರಿಯ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೂಜಾರಿಯನ್ನು ತಳ್ಳಿ ಆತನ ಚಿಕ್ಕಪ್ಪ ತ್ರಿಶೂಲ ಕಿತ್ತುಕೊಂಡು ಹಲ್ಲೆ ಮಾಡಲು ಯತ್ನಿಸಿದ್ದಾರೆ.

ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಜಗಳ; ತ್ರಿಶೂಲದಿಂದ ಹಲ್ಲೆಗೆ ಯತ್ನ, ಅವಾಚ್ಯ ಪದಗಳಿಂದ ‘ಪೂಜೆ’
ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಜಗಳ; ತ್ರಿಶೂಲದಿಂದ ಹಲ್ಲೆಗೆ ಯತ್ನ, ಅವಾಚ್ಯ ಪದಗಳಿಂದ ‘ಪೂಜೆ’
Follow us
TV9 Web
| Updated By: ಆಯೇಷಾ ಬಾನು

Updated on: Jan 11, 2022 | 11:26 AM

ಹಾವೇರಿ: ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿರುವ ಐತಿಹಾಸಿಕ ಮಾಲತೇಶ ದೇಗುಲದಲ್ಲಿ ಪೂಜೆ ವೇಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಪರಸ್ಪರ ಹಲ್ಲೆ ನಡೆದಿದ್ದು ಪೂಜೆ ಮಾಡುತ್ತಿದ್ದ ಪೂಜಾರಿಯ ಚಿಕ್ಕಪ್ಪ, ಪೂಜಾರಿಯನ್ನು ತಳ್ಳಿ ತ್ರಿಶೂಲ ಕಿತ್ತುಕೊಂಡು ಹಲ್ಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಸಂತೋಷ ಭಟ್ ಪೂಜಾರರಿಂದ 7 ಜನರ ವಿರುದ್ಧ ದೂರು ದಾಖಲಾಗಿದೆ.

ಎಂದಿನಂತೆ ನಿನ್ನೆ ಕೂಡ ದೇವಾಲಯದಲ್ಲಿ ಪೂಜೆ ನಡೆಯುತ್ತಿತ್ತು. ಆದ್ರೆ ಆರತಿ ತಟ್ಟೆ ಹಿಡಿದು ಪೂಜೆ ಮಾಡ್ತಿದ್ದ ಪೂಜಾರಿಯ ಚಿಕ್ಕಪ್ಪ ಮತ್ತು ಪೂಜಾರಿಯ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೂಜಾರಿಯನ್ನು ತಳ್ಳಿ ಆತನ ಚಿಕ್ಕಪ್ಪ ತ್ರಿಶೂಲ ಕಿತ್ತುಕೊಂಡು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಪರಸ್ಪರರ ನಡುವೆ ನಡೆದ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟದ ದೃಶ್ಯಗಳು ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಸದ್ಯ ಘಟನೆ ಸಂಬಂಧ ಸಂತೋಷ ಭಟ್ ಪೂಜಾರರಿಂದ ಏಳು ಜನರ ವಿರುದ್ಧ ದೂರು ದಾಖಲಾಗಿದೆ. ಉಪ್ಪಾರ ಉರ್ಫ್ ಬಣಕಾರ ಹಾಗೂ ಪೂಜಾರ ಕುಟುಂಬದವರ ನಡುವೆ ಪೂಜೆಗಾಗಿ ಕಿತ್ತಾಟ ನಡೆದಿದೆ. ಶಿವಪ್ಪ ಉಪ್ಪಾರ ಉರ್ಫ್ ಬಣಕಾರ, ಪ್ರಕಾಶ ಉಪ್ಪಾರ, ಸುನೀಲ ಉಪ್ಪಾರ, ಮಹಾದೇವಪ್ಪ ಉಪ್ಪಾರ, ಗುರುರಾಜ ಉಪ್ಪಾರ, ಮೃತ್ಯುಂಜಯ ಉಪ್ಪಾರ ಮತ್ತು ಸುಭಾಸ ಉಪ್ಪಾರ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ನಿನ್ನೆ ಬೆಳಿಗ್ಗೆ 7.22 ಗಂಟೆಗೆ ದೇವಸ್ಥಾನದಲ್ಲಿ ಪೂಜೆ ವೇಳೆ ಗಲಾಟೆ ನಡೆದಿದೆ. ನಾವು ಪೂಜೆ ಮಾಡುತ್ತೇವೆ, ನಾವು ಪೂಜೆ ಮಾಡುತ್ತೇವೆ ಅಂತಾ ಕಿತ್ತಾಟ ಶುರುವಾಗಿದೆ. ದೇವಸ್ಥಾನಕ್ಕೆ ಹೋದಾಗ ನನ್ನ ಗಂಡ ಮೃತ್ಯುಂಜಯ ಬಣಕಾರ ಹಾಗೂ ಮೈದುನನ್ನ ಸಂತೋಷ ಭಟ್ ಹಾಗೂ ಇತರರು ಸೇರಿಕೊಂಡು ಕೊಲೆ ಮಾಡಲು ಯತ್ನಿಸಿದ್ದಲ್ಲದೇ ಆರೋಪಿಗಳು ಮೈಕೈ ಮುಟ್ಟಿ, ಅವಾಚ್ಯವಾಗಿ ಬೈದಾಡಿ ಜೀವಬೆದರಿಕೆ ಹಾಕಿದ್ದಾರೆ ಅಂತಾ ಸಂತೋಷ ಭಟ್ ಸೇರಿದಂತೆ ಒಂಬತ್ತು ಜನರು ವಿರುದ್ಧ ಬಣಕಾರ ಕುಟುಂಬದ ಮಹಿಳೆ ಪ್ರತಿದೂರು ದಾಖಲಿಸಿದ್ದಾಳೆ. ಕಳೆದ ಹಲವು ವರ್ಷಗಳಿಂದ ಉಪ್ಪಾರ ಉರ್ಫ್ ಬಣಕಾರ ಹಾಗೂ ಪೂಜಾರ ಕುಟುಂಬದ ನಡುವೆ ಮಾಲತೇಶ ದೇವಸ್ಥಾನದ ಪೂಜೆ ವಿಚಾರವಾಗಿ ನಡೆಯುತ್ತಿರುವ ಜಗಳ ನಿನ್ನೆ ಕೊಲೆ ಯತ್ನದವರೆಗೂ ಹೋಗಿದೆ.

ಇದನ್ನೂ ಓದಿ: ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್​​ರನ್ನು ಕೊಂದೇಬಿಡುತ್ತೇನೆ ಎಂದು 2020ರಿಂದ ಬೆನ್ನತ್ತಿದ್ದ 72ವರ್ಷದ ವೃದ್ಧ ಅರೆಸ್ಟ್ !

ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ