AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ

ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ
ಜಿಲ್ಲಾಧಿಕಾರಿ ರಘುನಂದನ್​ ಮೂರ್ತಿ
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ|

Updated on: Sep 02, 2023 | 12:57 PM

Share

ಹಾವೇರಿ: ಜಿಲ್ಲೆಯ ಆಲದಕಟ್ಟಿ ಗ್ರಾಮದ ಬಳಿಯ ಪಟಾಕಿ (Firecracker) ಗೋಡೌನ್​​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಪಟಾಕಿ ಅಂಗಡಿಗಳನ್ನು ಜಪ್ತಿ ಮಾಡಿದ್ದೇವೆ. ಅಂಗಡಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕವೇ ರೀ ಓಪನ್​ ಮಾಡಲು ಅವಕಾಶ ನೀಡುತ್ತೇವೆ. ದಾಖಲೆ ಸರಿ ಇದ್ದರೇ ಪಟಾಕಿ ಮಾರಲು ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ಹಾವೇರಿಯಲ್ಲಿ (Haveri) ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಎಸ್​ಪಿ ಶಿವಕುಮಾರ ಗುಣಾರೆ, ಸಿಇಒ ಅಕ್ಷಯ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ನಾಲ್ವರ ಸಾವು: ಮಾಲೀಕ ಪೊಲೀಸರ ವಶ

ಈ ಘಟನೆ ಕುರಿತು ಎಡಿಸಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದೇವೆ. ಅವರು ಪರಿಶೀಲನೆ ಮಾಡಿದ ಬಳಿಕ ಅವರು ವರದಿ ನೀಡುತ್ತಾರೆ. ಈ ವರದಿ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ. ಪಟಾಕಿ ದಾಸ್ತಾನು, ಸೇಪ್ಟಿ ಕ್ರಮಗಳು ಸೇರಿದಂತೆ ಏನೇನು ಲೋಪಗಳಿದ್ದವು ಅಂತ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಒಂದು ವಾರದಲ್ಲಿ ವರದಿ ನೀಡುವಂತೆ ಎಡಿಸಿಯವರ ನೇತೃತ್ವದ ಕಮಿಟಿಗೆ ಹೇಳಿದ್ದೇನೆ ಎಂದು ಹೇಳಿದರು.

ಗಣೇಶ ಹಬ್ಬಕ್ಕೆ ಒಂದು ಜಾಗ ನಿಗಧಿ ಮಾಡಿ ಪಟಾಕಿ ಮಾರಲು ಅವಕಾಶ ನೀಡುತ್ತೇವೆ. ಮೇಡ್ಲೇರಿ ಗ್ರಾಮದಲ್ಲಿ ಪಟಾಕಿ ಗೋದಾಮುಗಳಿದೆ, ಅವರಿಗೂ ನೋಟೀಸ್ ಕೊಟ್ಟಿದ್ದೇವೆ. ದಾಖಲ ಪರಿಶೀಲನೆ ಬಳಿಕವೇ ಪಟಾಕಿ ಮಾರಾಟಕ್ಕೆ ಅವಕಾಶ ನೀಡುತ್ತೇವೆ. ಎಡಿಸಿ ಕಮಿಟಿ ವರದಿ ನೀಡುತ್ತದೆ, ಅದನ್ನು ಆಧರಿಸಿ ಸೂಕ್ತ ಕ್ರಮ ತಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್