AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ

ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ
ಜಿಲ್ಲಾಧಿಕಾರಿ ರಘುನಂದನ್​ ಮೂರ್ತಿ
ಸೂರಜ್​, ಮಹಾವೀರ್​ ಉತ್ತರೆ
| Edited By: ವಿವೇಕ ಬಿರಾದಾರ|

Updated on: Sep 02, 2023 | 12:57 PM

Share

ಹಾವೇರಿ: ಜಿಲ್ಲೆಯ ಆಲದಕಟ್ಟಿ ಗ್ರಾಮದ ಬಳಿಯ ಪಟಾಕಿ (Firecracker) ಗೋಡೌನ್​​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಪಟಾಕಿ ಅಂಗಡಿಗಳನ್ನು ಜಪ್ತಿ ಮಾಡಿದ್ದೇವೆ. ಅಂಗಡಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕವೇ ರೀ ಓಪನ್​ ಮಾಡಲು ಅವಕಾಶ ನೀಡುತ್ತೇವೆ. ದಾಖಲೆ ಸರಿ ಇದ್ದರೇ ಪಟಾಕಿ ಮಾರಲು ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ಹಾವೇರಿಯಲ್ಲಿ (Haveri) ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಎಸ್​ಪಿ ಶಿವಕುಮಾರ ಗುಣಾರೆ, ಸಿಇಒ ಅಕ್ಷಯ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ನಾಲ್ವರ ಸಾವು: ಮಾಲೀಕ ಪೊಲೀಸರ ವಶ

ಈ ಘಟನೆ ಕುರಿತು ಎಡಿಸಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದೇವೆ. ಅವರು ಪರಿಶೀಲನೆ ಮಾಡಿದ ಬಳಿಕ ಅವರು ವರದಿ ನೀಡುತ್ತಾರೆ. ಈ ವರದಿ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ. ಪಟಾಕಿ ದಾಸ್ತಾನು, ಸೇಪ್ಟಿ ಕ್ರಮಗಳು ಸೇರಿದಂತೆ ಏನೇನು ಲೋಪಗಳಿದ್ದವು ಅಂತ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಒಂದು ವಾರದಲ್ಲಿ ವರದಿ ನೀಡುವಂತೆ ಎಡಿಸಿಯವರ ನೇತೃತ್ವದ ಕಮಿಟಿಗೆ ಹೇಳಿದ್ದೇನೆ ಎಂದು ಹೇಳಿದರು.

ಗಣೇಶ ಹಬ್ಬಕ್ಕೆ ಒಂದು ಜಾಗ ನಿಗಧಿ ಮಾಡಿ ಪಟಾಕಿ ಮಾರಲು ಅವಕಾಶ ನೀಡುತ್ತೇವೆ. ಮೇಡ್ಲೇರಿ ಗ್ರಾಮದಲ್ಲಿ ಪಟಾಕಿ ಗೋದಾಮುಗಳಿದೆ, ಅವರಿಗೂ ನೋಟೀಸ್ ಕೊಟ್ಟಿದ್ದೇವೆ. ದಾಖಲ ಪರಿಶೀಲನೆ ಬಳಿಕವೇ ಪಟಾಕಿ ಮಾರಾಟಕ್ಕೆ ಅವಕಾಶ ನೀಡುತ್ತೇವೆ. ಎಡಿಸಿ ಕಮಿಟಿ ವರದಿ ನೀಡುತ್ತದೆ, ಅದನ್ನು ಆಧರಿಸಿ ಸೂಕ್ತ ಕ್ರಮ ತಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?