AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ

ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಹಾವೇರಿ ಪಟಾಕಿ ಗೋಡೌನ್ ಬೆಂಕಿ ದುರಂತ; ಜಿಲ್ಲೆಯಾದ್ಯಂತ 27 ಪಟಾಕಿ ಅಂಗಡಿಗಳು ಜಪ್ತಿ
ಜಿಲ್ಲಾಧಿಕಾರಿ ರಘುನಂದನ್​ ಮೂರ್ತಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 02, 2023 | 12:57 PM

Share

ಹಾವೇರಿ: ಜಿಲ್ಲೆಯ ಆಲದಕಟ್ಟಿ ಗ್ರಾಮದ ಬಳಿಯ ಪಟಾಕಿ (Firecracker) ಗೋಡೌನ್​​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಪಟಾಕಿ ಅಂಗಡಿಗಳನ್ನು ಜಪ್ತಿ ಮಾಡಿದ್ದೇವೆ. ಅಂಗಡಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕವೇ ರೀ ಓಪನ್​ ಮಾಡಲು ಅವಕಾಶ ನೀಡುತ್ತೇವೆ. ದಾಖಲೆ ಸರಿ ಇದ್ದರೇ ಪಟಾಕಿ ಮಾರಲು ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ಹಾವೇರಿಯಲ್ಲಿ (Haveri) ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಎಸ್​ಪಿ ಶಿವಕುಮಾರ ಗುಣಾರೆ, ಸಿಇಒ ಅಕ್ಷಯ್ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ ಹಾವೇರಿ ಜಿಲ್ಲೆ ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ಗೋಡೌನ್​ನಲ್ಲಿ ದುರಂತ ಸಂಭವಿಸಿತ್ತು. ಈಗಾಗಲೇ ಘಟನೆ ಸಂಬಂಧ, ಎಫ್​ಐಆರ್ ದಾಖಲಾಗಿದೆ. ದುರಂತದಲ್ಲಿ ನಾಲ್ವರ ಸಾವಾಗಿದೆ. ವೆಲ್ಡಿಂಗ್ ಮಾಡಿಸುವಾಗ ನಡೆದ ನಿರ್ಲಕ್ಷ್ಯದಿಂದ ಪಟಾಕಿ ಸಿಡಿದು ಅನಾಹುತ ಸಂಭವಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ನಾಲ್ವರ ಸಾವು: ಮಾಲೀಕ ಪೊಲೀಸರ ವಶ

ಈ ಘಟನೆ ಕುರಿತು ಎಡಿಸಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದೇವೆ. ಅವರು ಪರಿಶೀಲನೆ ಮಾಡಿದ ಬಳಿಕ ಅವರು ವರದಿ ನೀಡುತ್ತಾರೆ. ಈ ವರದಿ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುತ್ತದೆ. ಪಟಾಕಿ ದಾಸ್ತಾನು, ಸೇಪ್ಟಿ ಕ್ರಮಗಳು ಸೇರಿದಂತೆ ಏನೇನು ಲೋಪಗಳಿದ್ದವು ಅಂತ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಒಂದು ವಾರದಲ್ಲಿ ವರದಿ ನೀಡುವಂತೆ ಎಡಿಸಿಯವರ ನೇತೃತ್ವದ ಕಮಿಟಿಗೆ ಹೇಳಿದ್ದೇನೆ ಎಂದು ಹೇಳಿದರು.

ಗಣೇಶ ಹಬ್ಬಕ್ಕೆ ಒಂದು ಜಾಗ ನಿಗಧಿ ಮಾಡಿ ಪಟಾಕಿ ಮಾರಲು ಅವಕಾಶ ನೀಡುತ್ತೇವೆ. ಮೇಡ್ಲೇರಿ ಗ್ರಾಮದಲ್ಲಿ ಪಟಾಕಿ ಗೋದಾಮುಗಳಿದೆ, ಅವರಿಗೂ ನೋಟೀಸ್ ಕೊಟ್ಟಿದ್ದೇವೆ. ದಾಖಲ ಪರಿಶೀಲನೆ ಬಳಿಕವೇ ಪಟಾಕಿ ಮಾರಾಟಕ್ಕೆ ಅವಕಾಶ ನೀಡುತ್ತೇವೆ. ಎಡಿಸಿ ಕಮಿಟಿ ವರದಿ ನೀಡುತ್ತದೆ, ಅದನ್ನು ಆಧರಿಸಿ ಸೂಕ್ತ ಕ್ರಮ ತಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ