AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಧಿಕೃತ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಕ್ರಮ ಕೈಗೊಳ್ಳಿ. ಈಗಾಗಲೇ ಇರುವ ಇನ್ನೊಂದು ಪಟಾಕಿ ಗೊದಾಮು ತೆರವುಗೊಳಿಸಿ ಎಂದು ಆಲದಕಟ್ಟಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ
ಸುಟ್ಟು ಕರಕಲಾದ ಗೋದಾಮು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Aug 30, 2023 | 10:40 AM

Share

ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್​​ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ ವೀರೇಶ್, ವಿಜಯ್ ಯರೇಶೇಮಿ, ಕುಮಾರಪ್ಪ ಸಾತೇನಹಳ್ಳಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯತನದಿಂದ ಯಾವುದೇ ಸುರಕ್ಷತಾ ಕ್ರಮಕೈಗೊಂಡಿಲ್ಲ. ಅಲ್ಲದೇ ಕಾರ್ಮಿಕರಿಗೆ ಯಾವುದೇ ಸುರಕ್ಷತೆ ಒದಗಿಸದ ಹಿನ್ನೆಲೆಯಲ್ಲಿ ಅನಾಹುತ ಸಂಭವಿಸಿದೆ ಎಂದು ಮೃತ ಕಾರ್ಮಿಕ ದ್ಯಾಮಪ್ಪ ಓಲೇಕಾರ ಸಂಬಂಧಿಕ ಕಾಟೇನಹಳ್ಳಿ ಗ್ರಾಮದ ದುರಗಪ್ಪ ಓಲೆಕಾರ್ ದೂರು ನೀಡಿದ್ದಾರೆ.

ನಿನ್ನೆ (ಆ.29) ಆಲದಕಟ್ಟಿ ಗ್ರಾಮದ ಬಳಿ ಪಟಾಕಿ ದುರಂತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದರು. ದುರಂತದಲ್ಲಿ ಮೃತ ಹೊಂದಿದ ಕುಟುಂಬಗಳಿಗೆ ರಾಜ್ಯ ಬಿಜೆಪಿ ಘಟಕದಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪಟಾಕಿ ಗೋದಾಮು ದುರಂತ ಬಗ್ಗೆ ಸೂಕ್ತ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ನಾಲ್ವರ ಸಾವು: ಮಾಲೀಕ ಪೊಲೀಸರ ವಶ

ಅಪಾಯಕಾರಿ ಸ್ಥಳದಲ್ಲಿ ಅಗತ್ಯವಿರುವ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳಲ್ಲಿ ಪರಿಶೀಲನೆ ನಡೆಸಬೇಕು. ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಮ್ಮ ಗ್ರಾಮದಲ್ಲಿ ಪಟಾಕಿ ಗೋದಾಮಿಗೆ ಪರವಾನಗಿ ಕೊಡಬೇಡಿ. ಅನಧಿಕೃತ ಪಟಾಕಿ ಗೋದಾಮಿನ ಮಾಲಿಕರ ವಿರುದ್ಧ ಕ್ರಮ ಕೈಗೊಳ್ಳಿ. ಈಗಾಗಲೇ ಇರುವ ಇನ್ನೊಂದು ಪಟಾಕಿ ಗೊದಾಮು ತೆರವುಗೊಳಿಸಿ. ನಿನ್ನೆ ನಡೆದ ಘಟನೆಯಲ್ಲಿ ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡಿದ್ದೆವೆ. ಆದಷ್ಟು ಬೇಗ ಇನ್ನೊಂದು ಪಟಾಕಿ ಗೋದಾಮನ್ನು ಖಾಲಿ ಮಾಡಿ. ಪಟಾಕಿ ಗೋದಾಮಿಗೆ ಗ್ರಾಮ ಪಂಚಾಯತಿಯವರು ಈ ಬಾರಿ ಪರವಾನಿಗೆ ಕೊಟ್ಟಿರಲಿಲ್ಲ. ಜಿಲ್ಲಾಧಿಕಾರಿ ಕಚೇರಿಯಿಂದ ಪರವಾನಗಿ ತಂದಿದ್ದೆನಿ ಅಂತಾ ವಾದ ಮಾಡಿ ಪಟಾಕಿ ಸಂಗ್ರಹಣೆ ಮಾಡಿದ್ದರು ಎಂದು ಆಲದಕಟ್ಟಿ ಗ್ರಾಮಸ್ಥರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 30 August 23

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!