AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಗಾಯದ ಮೇಲೆ ಗೊಬ್ಬರ ಕೊರತೆ ಬರೆ, ಅಳಿದುಳಿದ ಬೆಳೆ ರಕ್ಷಣೆಗೂ ಅನ್ನದಾತನ ಪರದಾಟ

ಉತ್ತರಕರ್ನಾಟಕ ಪ್ರವಾಹದ ಅಬ್ಬರಕ್ಕೆ ರೈತರು ಈಗಾಗಲೇ ಕಂಗಾಲಾಗಿ ಹೋಗಿದ್ದಾರೆ. ಹೊಲ-ಗದ್ದೆಗಳಲ್ಲಿ ನೀರು ನಿಂತ ಪರಿಣಾಮ ಬೆಳೆಗಳು ಕೊಳೆಯುತ್ತಿವೆ. ಆದ್ರೆ ಪ್ರವಾಹಕ್ಕೆ ತುತ್ತಾಗದೆ ಉಳಿದಿರೋ ಬೆಳೆಗಳ ರಕ್ಷಣೆಗಾಗಿ ಅನ್ನದಾತರು ಪರದಾಡ್ತಿದ್ದಾರೆ. ಯಾಕಂದ್ರೆ ಬೆಳೆ ರಕ್ಷಣೆಗೆ ಬೇಕಾದ ಗೊಬ್ಬರದ ದರ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಪ್ರವಾಹದ ಗಾಯದ ಮೇಲೆ ಗೊಬ್ಬರ ಕೊರತೆ ಬರೆ, ಅಳಿದುಳಿದ ಬೆಳೆ ರಕ್ಷಣೆಗೂ ಅನ್ನದಾತನ ಪರದಾಟ
ಪ್ರವಾಹದ ಗಾಯದ ಮೇಲೆ ಗೊಬ್ಬರ ಕೊರತೆ ಬರೆ
TV9 Web
| Edited By: |

Updated on:Aug 01, 2021 | 8:32 AM

Share

ಹಾವೇರಿ: ಜಿಲ್ಲೆಯಲ್ಲಿ ಕಳೆದ ಎಂಟತ್ತು ದಿನಗಳ ಹಿಂದೆ ನಿರಂತರ ಮಳೆ ಆಗಿತ್ತು. ನಿರಂತರ ಮಳೆಯ ಬೆನ್ನಲ್ಲೇ ನಾಲ್ಕು ನದಿಗಳ ಪ್ರವಾಹದ ನೀರು ರೈತರ ಜಮೀನುಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತ್ತು. ರೈತರ ಜಮೀನಿನಲ್ಲಿದ್ದ ಮೆಕ್ಕೆಜೋಳ, ಶೇಂಗಾ, ಸೋಯಾಬಿನ್, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ನೀರಲ್ಲಿ ನಿಂತು ಹಾಳಾಗಿದ್ದವು. ನದಿ ಪಾತ್ರದ ರೈತರ ಜಮೀನುಗಳಲ್ಲಿನ‌ ಬೆಳೆಗಳು ಅಕ್ಷರಶಃ ಜಲಾವೃತ ಆಗಿದ್ದು, ಕೊಳೆತು ಹೋಗಿವೆ. ನದಿ ಪಾತ್ರದಿಂದ ದೂರವಿರೋ ಜಮೀನುಗಳಲ್ಲಿರೋ ಬೆಳೆಗಳು ನಿರಂತರ ಮಳೆಗೆ ಹಾಳಾಗೋ ಸ್ಥಿತಿಯಲ್ಲಿವೆ.

ಜಿಲ್ಲೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಯಾಗಿವೆ ಅಂತಾ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ. ನದಿ ಪಾತ್ರದಿಂದ ಸ್ವಲ್ಪ ದೂರವಿರೋ ಜಮೀನುಗಳಲ್ಲಿನ ಬೆಳೆಗಳು ಅಲ್ಪಸ್ವಲ್ಪ ಉಳಿದಿದ್ರೂ ಅವುಗಳನ್ನ ಉಳಿಸಿಕೊಳ್ಳೋಕೆ ರೈತರಿಗೆ ಯೂರಿಯಾ ಗೊಬ್ಬರ ಅನಿವಾರ್ಯ ಎಂಬಂಥಾ ಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ ರೈತರು ಗೊಬ್ಬರಕ್ಕಾಗಿ ನೂಕು ನುಗ್ಗಲು ಮಾಡೋ ಸ್ಥಿತಿ ನಿರ್ಮಾಣ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರೋ ಖಾಸಗಿ ಗೊಬ್ಬರದ ಅಂಗಡಿಗಳವರು ಸರಕಾರದ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡ್ತಿದ್ದಾರೆ ಅನ್ನೋ ಆರೋಪ ಸಹ ಕೇಳಿ ಬಂದಿದೆ.

ಒಂದೆಡೆ ನದಿಗಳ ಆರ್ಭಟ, ಮತ್ತೊಂದೆಡೆ ನಿರಂತರ‌‌ ಮಳೆಯಿಂದ ರೈತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ನೆರೆ ಹೊಡೆತಕ್ಕೆ ಸಿಲುಕಿರೋ ಬಹುತೇಕ ಬೆಳೆಗಳು ಅಕ್ಷರಶಃ ಹಾಳಾಗಿದ್ರೆ, ನಿರಂತರ ಮಳೆಗೆ ಸಿಕ್ಕಿರೋ ನದಿ ಪಾತ್ರದಿಂದ ದೂರವಿರೋ ಜಮೀನುಗಳಲ್ಲಿನ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿವೆ. ಆದ್ರೆ ಉಳಿದಿರೋ ಬೆಳೆ ರಕ್ಷಣೆ ಮಾಡಿ ಖರ್ಚಾಗಿರೋ ದುಡ್ಡು ಆದ್ರೂ ಬರ್ಲಿ ಅಂತಾ ರೈತರು ಯೂರಿಯಾ ಗೊಬ್ಬರದ ಮೊರೆ ಹೋಗಿದ್ದಾರೆ. ಆದ್ರೆ ಅಲ್ಲೂ ಅನ್ನದಾತನನ್ನು ಸುಲಿಗೆ ಮಾಡೋ ಮೂಲಕ ಬೆಳೆ ನಷ್ಟದ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ. ಕೂಡಲೇ ಕೃಷಿ ಇಲಾಖೆ ಹಾಗೂ ಸರ್ಕಾರ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡೋರ ಮೇಲೆ ಕಠಿಣ ಕ್ರಮ ಕೈಗೊಂಡು ರೈತರಿಗೆ ಅನುಕೂಲ ಕಲ್ಪಿಸಬೇಕಿದೆ.

ಇದನ್ನೂ ಓದಿ: ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?

Published On - 8:27 am, Sun, 1 August 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ