ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ವಾಪಸಾದ ಯೋಧರಿಗೆ ಭರ್ಜರಿ ವೆಲ್​ಕಮ್

ಹಾವೇರಿ: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ಮೂವರು ನಿವೃತ್ತ ಯೋಧರಿಗೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಅದ್ಧೂರಿ ಸ್ವಾಗತ‌ ಸಿಕ್ಕಿದೆ. ದೇವಗಿರಿ ಗ್ರಾಮದ ಜಗದೀಶ, ಅಗಡಿ ಗ್ರಾಮದ ನಜೀರ್ ಅಹಮದ್ ಮತ್ತು ಲಕ್ಷ್ಮಣಗೆ ಊರಿನ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾಗಿ ಸೈನಿಕರು ಊರಿಗೆ ಮರಳಿದ್ದಾರೆ. ಹಾವೇರಿ ನಗರಕ್ಕೆ ಎಂಟ್ರಿಯಾಗ್ತಿದ್ದಂತೆ ನಿವೃತ್ತ ಯೋಧರಿಗೆ ಹೂಗುಚ್ಛ ನೀಡಿ ಮಕ್ಕಳು ಬರಮಾಡಿಕೊಂಡರು. ಬಳಿಕ ತೆರೆದ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ವಾಪಸಾದ ಯೋಧರಿಗೆ ಭರ್ಜರಿ ವೆಲ್​ಕಮ್
ಸಾಧು ಶ್ರೀನಾಥ್​

Updated on: Mar 03, 2020 | 7:19 PM

ಹಾವೇರಿ: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ಊರಿಗೆ ಮರಳಿದ ಮೂವರು ನಿವೃತ್ತ ಯೋಧರಿಗೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಅದ್ಧೂರಿ ಸ್ವಾಗತ‌ ಸಿಕ್ಕಿದೆ. ದೇವಗಿರಿ ಗ್ರಾಮದ ಜಗದೀಶ, ಅಗಡಿ ಗ್ರಾಮದ ನಜೀರ್ ಅಹಮದ್ ಮತ್ತು ಲಕ್ಷ್ಮಣಗೆ ಊರಿನ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಹಲವೆಡೆ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾಗಿ ಸೈನಿಕರು ಊರಿಗೆ ಮರಳಿದ್ದಾರೆ. ಹಾವೇರಿ ನಗರಕ್ಕೆ ಎಂಟ್ರಿಯಾಗ್ತಿದ್ದಂತೆ ನಿವೃತ್ತ ಯೋಧರಿಗೆ ಹೂಗುಚ್ಛ ನೀಡಿ ಮಕ್ಕಳು ಬರಮಾಡಿಕೊಂಡರು. ಬಳಿಕ ತೆರೆದ ವಾಹನದಲ್ಲಿ ದೇಶಪ್ರೇಮ ಸಾರೋ ಗೀತೆಗಳನ್ನು ಹಾಕಿ ಹಾವೇರಿಯಿಂದ ಸೈನಿಕರ ಗ್ರಾಮದವರೆಗೆ ಮೆರವಣಿಗೆ ಮಾಡಿದರು.




sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us