AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಜ್ ಖರೀದಿಸಿದ ಮಹಿಳೆ

ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ ಪ್ರತಿ ಕುಟುಂಬದ ಮನೆ ಯಜಮಾನಿಗೆ ಎರಡೂ ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಹಣ ಹಲವರಿಗೆ ಹಲವು ರೀತಿಯಾಗಿ ಸಹಾಯಕವಾಗಿದೆ. ಅದರಂತೆ ಹಾವೇರಿಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಫ್ರಿಜ್ ಖರೀದಿ ಮಾಡಿದ್ದಾರೆ.

ಹಾವೇರಿ: ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಜ್ ಖರೀದಿಸಿದ ಮಹಿಳೆ
ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರೀಜ್ ಖರೀದಿಸಿದ ಮಹಿಳೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Apr 09, 2024 | 4:55 PM

Share

ಹಾವೇರಿ, ಏ.09: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​(Congress) ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಫ್ರಿಜ್(fridge) ತೆಗೆದುಕೊಂಡಿದ್ದಾರೆ.

ಯುಗಾದಿ ಹಬ್ಬದಂದು ಹೊಸ ಫ್ರಿಜ್​ಗೆ ಮನೆಯಲ್ಲಿ ಭರ್ಜರಿ ಪೂಜೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬವವರು ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಜ್​ವೊಂದನ್ನು ಖರೀದಿ ಮಾಡಿದ್ದಾರೆ. ಹೌದು, ಬರೊಬ್ಬರಿ 17,500 ರೂಪಾಯಿ ಕೊಟ್ಟು ಫ್ರಿಜ್ ಖರೀದಿಸುವ ಮೂಲಕ ಯುಗಾದಿ ಹಬ್ಬಕ್ಕೆ ಹೊಸ ವಸ್ತುವನ್ನ ಮನೆಗೆ ತಂದಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಜ್ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ:Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಇನ್ನು ಕಳೆದ 2023 ಜುಲೈ 19ರಿಂದ ಬಹುನಿರೀಕ್ಷಿತ ಗೃಹ ಲಕ್ಷ್ಮೀ ಯೋಜನೆ ಆರಂಭವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನಿಡಿದ್ದರು. ಫಲಾನುಭವಿಗಳು ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಬಾಬುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬಹುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 9 April 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More