AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ!

ವಿಶ್ವವಿಖ್ಯಾತ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರೊಬ್ಬರಿಗೆ ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದ ಸುಮಾರು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿ ಮಾರಾಟ ಮಾಡಲಾಗಿದೆ. ಸದ್ಯ ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ರೈತ ಕುಟುಂಬ ಹೋರಾಡುತ್ತಿದೆ.

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ!
ಬ್ಯಾಡಗಿ ಮೆಣಸಿನಕಾಯಿImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 06, 2026 | 9:33 PM

Share

ಹಾವೇರಿ, ಮೇ 06: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ (Byadagi Chilli) ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ (Farmer) ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ ಮಾಡಲು ಬಂದ ರೈತನಿಗೆ, ಅತ್ತ ಮೆಣಸಿನಕಾಯಿಯೂ ಇಲ್ಲ, ಹಣವೂ ಇಲ್ಲದಂತಾಗಿದೆ. ದಲ್ಲಾಳಿ ನಮ್ಮ ಗಮನಕ್ಕೆ ಬಾರದೆ ಮೆಣಸಿನಕಾಯಿಯನ್ನು ಮಾರಾಟ ಮಾಡಿದ್ದಾನೆ ಎಂದು ರೈತ ಕುಟುಂಬ ಆರೋಪಿಸಿದೆ.

ಮುಖ್ಯಾಂಶಗಳು

  • 2023ರಲ್ಲಿ ದಾಸ್ತಾನು ಮಾಡಿದ್ದ 363 ಚೀಲ ಮೆಣಸಿನಕಾಯಿ ನಾಪತ್ತೆ
  • ಅಂದಾಜು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿ ಮಾರಾಟ ಮಾಡಿ ವಂಚನೆ ಆರೋಪ
  • ಸಂತ್ರಸ್ತ ರೈತನಿಂದ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಡೆದಿದ್ದೇನು?

ರೈತ ಮಹಾದೇವಪ್ಪ ಅವರು 2023ರಲ್ಲಿ ದರ ಕಡಿಮೆ ಇದ್ದಿದ್ದರಿಂದ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟು ಹೋಗಿದ್ದರು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಬಂದಿದ್ದರಿಂದ, ಅದನ್ನು ಮಾರಾಟ ಮಾಡಲು ಬಂದಾಗ ಮೆಣಸಿನಕಾಯಿ ಚೀಲಗಳು ನಾಪತ್ತೆಯಾಗಿರುವುದು ಕಂಡು ಶಾಕ್​​ ಆಗಿದ್ದಾರೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ರಫ್ತಿನ ದರದಲ್ಲಿ ಗಣನೀಯ ಏರಿಕೆ

ತಿಪ್ಪೇಸ್ವಾಮಿ ಮೆಣಸಿನಕಾಯಿ ಏಜೆನ್ಸಿಯವರು ರೈತನಿಗೆ ಆರಂಭದಲ್ಲಿ ಕೂಲಿ ಕಾರ್ಮಿಕರಿಗೆ ನೀಡುವ ನೆಪದಲ್ಲಿ ಸ್ವಲ್ಪ ಹಣ ನೀಡಿದ್ದರೂ, ನಂತರದ ದಿನಗಳಲ್ಲಿ ರೈತನ ಹೆಸರಿನಲ್ಲಿರುವ ಸುಮಾರು 50 ಲಕ್ಷ ರೂ ಮೌಲ್ಯದ ಮೆಣಸಿನಕಾಯಿಯನ್ನು ರೈತನ ಅನುಮತಿಯಿಲ್ಲದೆ ಮಾರಾಟ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಮೂಲ ದಾಖಲೆಗಳನ್ನ ತೆಗೆದುಕೊಂಡು ನಮಗೆ ಮೋಸ ಮಾಡಿದ್ದಾರೆ. ನ್ಯಾಯ ಬೇಕು ಅಂತಾ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ರೈತ ಮಹಾದೇವಪ್ಪ ಪ್ರಕರಣ ದಾಖಲಿಸಿದ್ದಾರೆ.

ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್​​​ಪಿ ಯಶೋಧಾ ವಂಟಗೋಡಿ, ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ರೈತ ನೀಡಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣವು ತನಿಖಾ ಹಂತದಲ್ಲಿದ್ದು, ತಪ್ಪು ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯ ರೈತನಿಗೆ ನ್ಯಾಯ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:33 pm, Wed, 6 May 26

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ