AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಘಟನೆಯೊಂದು ನಿನ್ನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಿಎಜೆಎಸ್​​ಎಸ್​ ಕಾಲೇಜು ಆವರಣದಲ್ಲಿರುವ ಪಿಯುಸಿ ಡಿಬಿಎಸ್ ಮೆಡಿಕಲ್ ನೀಟ್ ಅಕಾಡೆಮಿ ಕಾಲೇಜ್​​​ನಲ್ಲಿ ನಡೆದಿದೆ. ಮಧ್ಯಸ್ಥಿಕೆ ವಹಿಸಿದವರ ಬೈಕ್ ಅಡವಿಟ್ಟಿಕೊಂಡು ಹಾಲ್ ಟಿಕೆಟ್​ ನೀಡಲಾಗಿದೆ. ಸದ್ಯ ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ.

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು
ಶುಲ್ಕ ಬಾಕಿ ಆರೋಪ
ಗಂಗಾಧರ​ ಬ. ಸಾಬೋಜಿ
|

Updated on: Mar 01, 2026 | 7:38 PM

Share

ಹಾವೇರಿ, ಮಾರ್ಚ್​​ 01: ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ.  ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ ಆರೋಪಿಸಿ ವಿದ್ಯಾರ್ಥಿನಿಗೆ ಪ್ರವೇಶ ಪತ್ರ ನೀಡಿಲ್ಲ.‌ ಅಷ್ಟೇ ಅಲ್ಲದೆ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯ ಬೈಕ್​​ ಅನ್ನು ಅಡವಿಟ್ಟುಕೊಂಡು ಬಳಿಕ ಹಾಲ್​ ಟಿಕೆಟ್​ (hall ticket) ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕಿಯಿಂದ ದರ್ಪ 

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬಿಎಜೆಎಸ್​​ಎಸ್​ ಕಾಲೇಜು ಆವರಣದಲ್ಲಿರುವ ಪಿಯುಸಿ ಡಿಬಿಎಸ್ ಮೆಡಿಕಲ್ ನೀಟ್ ಅಕಾಡೆಮಿ ಕಾಲೇಜ್​​​ನಲ್ಲಿ ಘಟನೆ ನಡೆದಿದೆ. ಸಾರಾ ಜೆಸ್ಸಿಕಾ ಪಿಯುಸಿ ವಿಜ್ಞಾನ ಭಾಗದಲ್ಲಿ ಓದುತ್ತಿದ್ದು, ಪರೀಕ್ಷೆ ಹಾಲ್ ಟಿಕೆಟ್ ನೀಡದೆ ಕಳೆದ ಒಂದು ವಾರದಿಂದ ಆಡಳಿತದ ಮಂಡಳಿ ಸತಾಯಿಸಿದೆ. ವಿದ್ಯಾರ್ಥಿನಿ ಭವಿಷ್ಯ ಹಾಳಾಗುತ್ತೆ, ಹಾಲ್ ಟಿಕೆಟ್ ನೀಡುವಂತೆ ಕೇಳಿದಾಗ ಸುನೀತಾ ಮೇಡಂ ಎನ್ನುವವರು ಎಲ್ಲಾ ಕಾಲೇಜಿನವರು ಪುಗಸಟ್ಟೆ ಕಲಿಸುತ್ತಾರಾ ಎಂದು ದರ್ಪ ತೋರಿದ್ದಾರೆ.

ಅಲ್ಲದೆ ಪ್ರಕರಣ ಮಧ್ಯಸ್ಥಿಕೆ ವಹಿಸಿದ ಶಿವಪುತ್ರ ಎಂಬುವವರ ಬೈಕ್ ಮತ್ತು ಮೊಬೈಲ್ ತೆಗೆದುಕೊಂಡಿದ್ದಾರೆ. ಕೊನೆಗೆ ಮೊಬೈಲ್ ಕೊಟ್ಟು ಬೈಕ್ ಇಟ್ಟುಕೊಂಡಿದ್ದಾರೆ. ಬಳಿಕ ಆಡಳಿತ ಮಂಡಳಿ ಸದಸ್ಯರು ವಿದ್ಯಾರ್ಥಿಗೆ ಹಾಲ್​ ಟಿಕೆಟ್ ನೀಡಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.

ಇದನ್ನೂ ಓದಿ: ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು

ಸುನೀತಾ ಡಿಬಿ ಮೇಡಂ ಸರ್ಕಾರಿ ಹಿರಿಯ ಉನ್ನತ್ತೀಕರಣ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಖಾಸಗಿ ಶಾಲೆಯಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. 30 ಸಾವಿರ ಶುಲ್ಕಕ್ಕಾಗಿ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದು, ಸರ್ಕಾರಿ ಶಾಲೆಯ ಶಿಕ್ಷಕಿಗೆ ಖಾಸಗಿ ಶಾಲೆಯಲ್ಲಿ ಏನು ಕೆಲಸ ಎಂದು ಆಕ್ರೋಶ ವ್ಯಕ್ತವಾಗಿದೆ.

ಅಲ್ಲದೆ ಈ ಹಿಂದೆ ಈ ಶಾಲೆಯಲ್ಲಿ ಕೆಲಸ ಮಾಡಿದ ಶಿಕ್ಷಕರಿಗೆ ಸಂಬಳ ನೀಡಿಲ್ಲ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಲು ಸುನೀತಾ ‌ಮೇಡಂ ನಿರಾಕರಿಸಿದರು. ವಿದ್ಯಾರ್ಥಿನಿ ಸಾರಾ ತಂದೆ ರಾಜು ಪ್ರತಿಕ್ರಿಯಿಸಿದ್ದು, ಶುಲ್ಕವನ್ನ ಕಟ್ಟಿದ್ದೇನೆ. ಅದಕ್ಕೆ ಸರಿಯಾದ ರಸೀದಿ ನೀಡಲ್ಲ‌ ಎಂದರು. ಇನ್ನು ಈ ವಿಚಾರ ಬಿಇಒ ಶ್ಯಾಮಸುಂದರ್ ಗಮನಕ್ಕೆ ತರಲಾಗಿದ್ದು, ನೋಟಿಸ್ ನೀಡಿ ತನಿಖೆ ಮಾಡುತ್ತೇವೆ ಅಂದಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!

ಒಟ್ಟಿನಲ್ಲಿ ಖಾಸಗಿ ಶಾಲೆಯ ಧನದಾಯಿ ಆಸೆಗಾಗಿ ವಿದ್ಯಾರ್ಥಿನಿ ಪ್ರವೇಶ ಪತ್ರ ನೀಡಿದೆ ಸತಾಯಿಸುತ್ತಿದ್ದಾರೆ. ಸ್ಥಳೀಯರು ಸುನೀತಾ ಮೇಡಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದು, ಸರ್ಕಾರಿ ಶಾಲೆಯ ಶಿಕ್ಷಕಿಯ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು