AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೋಲಿಸ್ ಪೇದೆ ಹುದ್ದೆಗೆ ಆಯ್ಕೆ ಆಗಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ಕೋರ್ಟ್​

ಸುಳ್ಳು ಜಾತಿ ಪ್ರಮಾಣ ಪತ್ರ(False caste certificate) ಪಡೆದು ಸಶಸ್ತ್ರ ಪೋಲಿಸ್ ಪೇದೆ ಹುದ್ದೆಗೆ ಆಯ್ಕೆ ಆಗಿದ್ದ ಆರೋಪಿಗೆ ಹಾವೇರಿ (Haveri)ಯ ಒಂದನೆಯ ಅಧಿಕ ಜಿಲ್ಲಾ ಸತ್ರ ನ್ಯಾಯಲಯ ಏಳು ವರ್ಷ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂ. ದಂಡ ವಿಧಿಸಿದೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೋಲಿಸ್ ಪೇದೆ ಹುದ್ದೆಗೆ ಆಯ್ಕೆ ಆಗಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ಕೋರ್ಟ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 20, 2023 | 7:16 PM

Share

ಹಾವೇರಿ, ಡಿ.20: ಸುಳ್ಳು ಜಾತಿ ಪ್ರಮಾಣ ಪತ್ರ(False caste certificate) ಪಡೆದು ಸಶಸ್ತ್ರ ಪೋಲಿಸ್ ಪೇದೆ ಹುದ್ದೆಗೆ ಆಯ್ಕೆ ಆಗಿದ್ದ ಆರೋಪಿಗೆ ಹಾವೇರಿ (Haveri)ಯ ಒಂದನೆಯ ಅಧಿಕ ಜಿಲ್ಲಾ ಸತ್ರ ನ್ಯಾಯಲಯ ಏಳು ವರ್ಷ ಶಿಕ್ಷೆ ಹಾಗೂ ಮೂವತ್ತು ಸಾವಿರ ರೂ. ದಂಡ ವಿಧಿಸಿದೆ. ಹಿರೆಕೆರೂರ ತಾಲೂಕಿನ ಬೊಗಾವಿ ಗ್ರಾಮದ ಸೋಮಶೇಖರ್ ಶಿಕ್ಷೆಗೊಳಗಾದ ಪೇದೆ. ಇನ್ನು ಈ ಘಟನೆ ಕುರಿತು ದಾವಣಗೆರೆ ನಾಗರಿಕ ಜಾರಿ ನಿರ್ದೇಶನಾಲಯದ ತನಿಖಾಧಿಕಾರಿ ಡಿಎಸ್ಪಿ ಜಯರತ್ನಮ್ಮ ಅವರು ತನಿಖೆ ನಡೆಸಿ ದೋಷಾರೊಪಣ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ಬಳಿಕ ನ್ಯಾಯಾದೀಶರಾದ ಜಿ.ಎಲ್ ಲಕ್ಷೀನಾರಾಯಣ ಅವರು ತಿರ್ಪು ನೀಡಿ ಆದೇಶಿಸಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದ ಸರ್ಕಾರ

ಕೆಲ ತಿಂಗಳುಗಳ ಹಿಂದೆ ಬೇಡ ಜಂಗಮ ಜಾತಿ ಹೆಸರಿನಲ್ಲಿ ಎಸ್ಸಿ ಜಾತಿ‌ ಪ್ರಮಾಣ ಪತ್ರ ಪಡೆದವರಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿತ್ತು. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ‌ಪಿ‌ ರೇಣುಕಾಚಾರ್ಯ ಕುಟುಂಬ ಸಂಕಷ್ಟದಲ್ಲಿತ್ತು. ರಾಜ್ಯದಲ್ಲಿ 2010 ರಿಂದ ಬೇಡ ಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದವರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಪ್ರಾದೇಶಿಕ ಆಯುಕ್ತರಿಗೆ ಪತ್ರ ರವಾನಿಸಲಾಗಿದೆ. ಸುಳ್ಳು ಬೇಡ, ಜಂಗಮ, ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನ ತಕ್ಷಣಕ್ಕೆ ಸೇವೆಯಿಂದ ಅಮಾನತು ಅಥವಾ ವಾರ್ಷಿಕ ವೇತನ ಕಡಿತಗೊಳಿಸಿ ಸೇವಾ ಪುಸ್ತಕದಲ್ಲಿ ದಾಖಲು ಮಾಡಲು ನಿರ್ಧಾರ ಮಾಡಿತ್ತು.

ಇದನ್ನೂ ಓದಿ:ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಪ್ರಾದೇಶಿಕ ಆಯುಕ್ತರ ಮೂಲಕ ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಕಂದಾಯ ಇಲಾಖೆ ನಿರ್ಧಾರ ಮಾಡಿದ್ದು, ರಾಜ್ಯದಲ್ಲಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದವರು ಹಾಗೂ ಅವರ ಮೂಲ ಶಾಲಾ ದಾಖಲಾತಿ ಪರಿಶೀಲನೆ ಮಾಡಿ ವರದಿ ನೀಡುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಾದೇಶಿಕ ಅಸಯುಕ್ತರಿಗೆ ಪತ್ರ ಬರೆಯಲಾಗಿತ್ತು. ಹೀಗಾಗಿ ಸರ್ಕಾರದ ನಿರ್ಧಾರದಿಂದಾಗಿ ರೇಣುಕಾಚಾರ್ಯ ಕುಟುಂಬಕ್ಕೆ ಸಂಕಷ್ಟಕ್ಕೆ ಸಿಲುಕಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?