AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Human Interest Story: ಎಸ್ಸೆಸ್ಸೆಲ್ಸಿ ಪರೀಕ್ಷೆ ಒಟ್ಟಿಗೆ ಬರೆದ ಅಪ್ಪ-ಮಗಳು; ಮಗಳಿಗೆ 83 ಪರ್ಸೆಂಟ್, ತಂದೆ 57 ಪರ್ಸೆಂಟ್

ಹಾವೇರಿ ಜಿಲ್ಲೆಯಲ್ಲಿ ಅಪ್ಪ-ಮಗಳು ಇಬ್ಬರೂ ಒಟ್ಟಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ವಿಶೇಷ ಏನೆಂದರೆ, ಅಪ್ಪನಿಗಿಂತ ಮಗಳಿಗೆ ಹೆಚ್ಚು ಅಂಕ ಬಂದಿದೆ.

Human Interest Story: ಎಸ್ಸೆಸ್ಸೆಲ್ಸಿ ಪರೀಕ್ಷೆ ಒಟ್ಟಿಗೆ ಬರೆದ ಅಪ್ಪ-ಮಗಳು; ಮಗಳಿಗೆ 83 ಪರ್ಸೆಂಟ್, ತಂದೆ 57 ಪರ್ಸೆಂಟ್
ತಂದೆ ನಾಗರಾಜ (ಎಡಭಾಗದಲ್ಲಿ), ಮಗಳು ಚಂದ್ರಮ್ಮ (ಬಲ ಭಾಗದಲ್ಲಿ)
TV9 Web
| Edited By: |

Updated on: Aug 12, 2021 | 6:55 PM

Share

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಂದಾಗ ತಮ್ಮ ಮಕ್ಕಳ ಅಂಕ ಎಷ್ಟು ಎಂದು ತಂದೆ- ತಾಯಿಗಳು ಕುತೂಹಲಿಗಳಾಗಿರುತ್ತಾರೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾದಾಗ ತಾವೇ ಪಾಸ್​ ಆದಂತೆ ತಂದೆ- ತಾಯಿ ಸಕತ್ ಖುಷಿ ಆಗುತ್ತಾರೆ. ಇಂಥ ಸನ್ನಿವೇಶವನ್ನು ನಾವು ನೋಡಿರುತ್ತೇವೆ. ಆದರೆ ಮಗಳ ಜೊತೆಗೆ ತಂದೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಇಬ್ಬರೂ ಉತ್ತೀರ್ಣರಾದ ಆಸಕ್ತಿಕರ ಘಟನೆ ವರದಿ ಆಗಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ನಾಗರಾಜ ಹರಿಜನ ಎಂಬುವರು ಕುಡುಪಲಿ ಗ್ರಾಮ ಪಂಚಾಯಿತಿಯಲ್ಲಿ ಹಲವು ವರ್ಷಗಳಿಂದ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದಾರೆ. 1995ರಲ್ಲಿ ನಾಗರಾಜ ಅವರು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಶಾಲೆಯಲ್ಲಿ ಓದಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿದ್ದರು. ಅಂದು ಎಲ್ಲ ವಿಷಯಗಳಲ್ಲೂ ಫೇಲ್ ಆಗಿದ್ದರು. ಆಗಿನಿಂದಲೂ ನಾಗರಾಜ ಆರು ಬಾರಿ ಪರೀಕ್ಷೆಗೆ ಕುಳಿತಿದ್ದರು. ಆದರೆ ಕನ್ನಡ, ಹಿಂದಿ, ಸಮಾಜ ವಿಜ್ಞಾನ ಮೂರು ವಿಷಯದಲ್ಲಿ ಪಾಸಾಗಿ, ಗಣಿತ,‌ ಇಂಗ್ಲಿಷ್, ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರು. ಅದಾದ ನಂತರ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ವೀರಮಹೇಶ್ವರ ಪ್ರೌಢ ಶಾಲೆಯಿಂದ ಪರೀಕ್ಷೆ ಎದುರಿಸಿದ್ದರು. ಆಗಲೂ ಫಲಿತಾಂಶ ಮಾತ್ರ ಬದಲಾಗಲಿಲ್ಲ. ಅಷ್ಟರಲ್ಲಿ ಪರೀಕ್ಷೆ ಆಸೆಯನ್ನೇ ಬಿಟ್ಟ ಅವರು, ಹಾಜರಾಗುವುದನ್ನೇ ಬಿಟ್ಟಿದ್ದರು.

ಕುಡುಪಲಿ ಗ್ರಾಮದ ವೀರಮಹೇಶ್ವರ ಪ್ರೌಢ ಶಾಲೆಯಲ್ಲಿ ನಾಗರಾಜರ ಮಗಳು ಚಂದ್ರಮ್ಮ ಹರಿಜನ ಎಸ್ಸೆಸ್ಸೆಲ್ಸಿ ಓದುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಅಭ್ಯಾಸ ಮಾಡುತ್ತಿದ್ದದ್ದು ನೋಡಿದ ಮೇಲೆ ನಾಗರಾಜಗೆ ಪರೀಕ್ಷೆಗೆ ಮತ್ತೆ ಕೂರಬೇಕು ಎಂಬ ಆಸೆ ಹುಟ್ಟಿದೆ. ಸರಿ, ಇದೊಂದು ಬಾರಿ ಪರೀಕ್ಷೆ ಎದುರಿಸೋಣ ಎಂದುಕೊಂಡ ನಾಗರಾಜ, ಮಗಳ ಜತೆಗೆ ತಾವೂ ಪರೀಕ್ಷೆಗೆ ಸಿದ್ದತೆ ನಡೆಸಿದ್ದರು. ಈ ಬಾರಿ ಕೊನೆಗೂ‌‌ ಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪಾಸಾಗಿದ್ದಾರೆ ನಾಗರಾಜ. ಬಾಕಿ ಉಳಿದುಕೊಂಡಿದ್ದ ಗಣಿತ, ಇಂಗ್ಲಿಷ್ ಮತ್ತು ವಿಜ್ಞಾನ ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲ ವಿಷಯಗಳೂ ಸೇರಿ ನಾಗರಾಜಗೆ ಶೇ 57ರಷ್ಟು ಅಂಕ ಬಂದಿದೆ.

ಇನ್ನು ನಾಗರಾಜ ಅವರ ಮಗಳು ಚಂದ್ರಮ್ಮ ಹರಿಜನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 519 ಅಂಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಅಪ್ಪ ಮತ್ತು ಮಗಳು ಒಂದೇ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್ ಆಗಿರುವುದರ ಸಂಭ್ರಮಾಚರಣೆ ಮನೆ ಮಾಡಿದೆ.

“ನಮ್ಮ ಅಪ್ಪ ಸುಮಾರು ವರ್ಷಗಳಿಂದ ಪರೀಕ್ಷೆ ಬರೆದಿದ್ದರೂ ಪಾಸಾಗಿರಲಿಲ್ಲ. ಈ ವರ್ಷ ನನ್ನ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ ಪಾಸ್ ಆಗಿರುವುದು ಬಹಳ ಖುಷಿಯಾಗಿದೆ. ನಾನು ಮುಂದೆ ಚೆನ್ನಾಗಿ ಓದಿ, ಒಂದು ನೌಕರಿ ಪಡೆಯಬೇಕು ಎಂಬ ಆಸೆ ಇದೆ,” ಎನ್ನುತ್ತಾ ಕಣ್ಣು ತುಂಬಿಕೊಳ್ಳುತ್ತದೆ ಹದಿಹರೆಯದ ಹೆಣ್ಣುಮಗಳು ಚಂದ್ರಮ್ಮ. “1995ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದೆ. ಆದರೆ ಪಾಸಾಗಿರಲಿಲ್ಲ. ಈ ವರ್ಷ ಮಗಳು ಪರೀಕ್ಷೆ ಬರೆಯುತ್ತಿರುವುದರಿಂದ ಇನ್ನೊಂದು ಬಾರಿ ಪ್ರಯತ್ನ ಮಾಡೋಣ ಎಂದುಕೊಂಡು ಪರೀಕ್ಷೆ ಬರೆದೆ. ಆದರೆ ಈ ವರ್ಷ ಮಗಳ ಜೊತೆಗೆ ನಾನೂ ಎಸ್ಎಸ್ಎಲ್ಸಿ ಪಾಸಾಗಿದ್ದೇನೆ. ಎಷ್ಟೇ ಪ್ರಯತ್ನ ಪಟ್ಟಾದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದು ಮಗಳೊಂದಿಗೆ ಪರೀಕ್ಷೆ ಪಾಸ್ ಆಗುವ ಮೂಲಕ ಈ ವರ್ಷ ಈಡೇರಿದೆ,” ಎನ್ನುತ್ತಾರೆ ನಾಗರಾಜ.

ಇದನ್ನೂ ಓದಿ: ಒಂದೇ ವರ್ಷ ಎಸ್​ಎಸ್​ಎಲ್​ಸಿ ಪಾಸ್ ಆದ ಕೊಡಗಿನ ತಾಯಿ, ಮಗ!

ಇದನ್ನೂ ಓದಿ: ಹೃದಯ ಕಾಯಿಲೆಯಿಂದ ಬಳಲುತ್ತಿರುವ ಎಸ್​ಎಸ್​ಎಲ್​ಸಿ ಟಾಪರ್ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ

(Haveri Districts Father And Daughter Both Passed In SSLC Exam Here Is The Interesting Details )

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ