AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರೇ ಟಾರ್ಗೆಟ್: ಕುಬೇರಯಂತ್ರ ಪೂಜೆ ಹೆಸರಿನಲ್ಲಿ ಕುಬೇರರಾಗಲು ಹೋದವರು ಜೈಲುಪಾಲಾದರು

ಅಸ್ಟ್ರೋಟಾಕ್ ಆ್ಯಪ್ ಮೂಲಕ ಪರಿಚಯವಾದ ನಕಲಿ ಜ್ಯೋತಿಷಿಗಳು ಓರ್ವ ಯುವತಿಯನ್ನು ವಂಚಿಸಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವಂತಹ ಘಟನೆ ಹಾವೇರಿಯಲ್ಲಿ ನಡೆದಿದೆ. ಸದ್ಯ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಯುವತಿಯರೇ ಟಾರ್ಗೆಟ್ ಮಾಡಲಾಗಿದೆ.

ಯುವತಿಯರೇ ಟಾರ್ಗೆಟ್: ಕುಬೇರಯಂತ್ರ ಪೂಜೆ ಹೆಸರಿನಲ್ಲಿ ಕುಬೇರರಾಗಲು ಹೋದವರು ಜೈಲುಪಾಲಾದರು
ಬಂಧಿತರಿಂದ ವಶಕ್ಕೆ ಪಡೆದ ಚಿನ್ನಾಭರಣಗಳು
ಗಂಗಾಧರ​ ಬ. ಸಾಬೋಜಿ
|

Updated on: Jul 07, 2025 | 9:17 PM

Share

ಹಾವೇರಿ, ಜುಲೈ 07: ನಿಮ್ಮ ಜೀವನದಲ್ಲಿ ತೊಂದರೆ ಇದೆ. ಮುಂದೆ ದೊಡ್ಡ ಗಂಡಾಂತರ ಕಾದಿದೆ. ನೀವು ವಿಶೇಷ ಪೂಜೆ ಮಾಡಿಸಬೇಕು ಅಂತಾ ಹೇಳಿ ಕುಬೇರಯಂತ್ರ ಪೂಜೆ ಹೆಸರಿನಲ್ಲಿ ಓರ್ವ ಯುವತಿಗೆ (Girl)  ನಕಲಿ ಜ್ಯೋತಿಷಿಗಳು (Fake Astrologers) ಲಕ್ಷಾಂತರ ರೂ ಚಿನ್ನಾಭರಣ ದೋಚಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಪ್ರಕರಣವನ್ನು ಭೇದಿಸಿರುವ ಹಾವೇರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಮೇಶ ಶಾಸ್ತ್ರಿ, ಗೋಪಾಲ ಶಾಸ್ತ್ರಿ ಮತ್ತು ಕಾರು ಚಾಲಕ ಬಂಧಿತರು.

ಆಗಿದ್ದೇನು?

ಓರ್ವ ಯುವತಿಗೆ ಅಸ್ಟ್ರೋಟಾಕ್ ಆಪ್ಯ್ ಮೂಲಕ ಜ್ಯೋತಿಷಿಗಳ ಎಂಬುವವರು ಪರಿಚಯವಾಗಿದ್ದಾರೆ. ಮನೆಗೆ ತೊಂದರೆ ಆಗದಂತೆ ಕುಂಕುಮ, ಭಂಡಾರ ತಾಯತ ಮತ್ತು ಕುಬೇರಯಂತ್ರ ಪೂಜೆ ಮೂಲಕ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನು ನಂಬಿದ ಯುವತಿ ಯಾರಿಗೂ ಗೊತ್ತಾಗದೆ ಮನೆಯಲ್ಲಿದ್ದ 20 ಲಕ್ಷ ರೂ ಮೌಲ್ಯದ 227 ಗ್ರಾಂ ಚಿನ್ನಾಭರಣಗಳನ್ನು ನಕಲಿ ಜ್ಯೋತಿಷಿಗೆ ನೀಡಿದ್ದಾಳೆ.

ಇದನ್ನೂ ಓದಿ: ನೊಂದ ಬಾಲಕಿಯರೇ ಈಕೆಯ ಟಾರ್ಗೆಟ್: ಕೆಲಸ ಕೊಡಿಸುವುದಾಗಿ ಕರೆತಂದು ಹಣಕ್ಕೆ ಮಾರಾಟ

ಬಳಿಕ ಯುವತಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ನಕಲಿ ಜ್ಯೋತಿಷಿಗಳ ಜಾಡು ಹಿಡಿದು ಮೈಸೂರಿನಲ್ಲಿ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದೇವರಗುಡಿ ನಿವಾಸಿಗಳು. ಬಂಧಿತರಿಂದ 227 ಗ್ರಾಂ ಚಿನ್ನಾಭರಣ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಮೂರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಯುವತಿಯರೇ ಟಾರ್ಗೆಟ್

ಈ ನಕಲಿ ಜ್ಯೋತಿಷಿಗಳ ಗ್ಯಾಂಗ್​ ಅಸ್ಟ್ರೋಟಾಕ್ ಆಪ್ಯ್ ಮೂಲಕ ಯುವತಿಯರನ್ನ ಟಾರ್ಗೆಟ್ ಮಾಡಿ ಸಂದೇಶ ಕಳಿಸುತ್ತಾರೆ. ಮುಂದೆ ನಿಮಗೆ ಉತ್ತಮ ಭವಿಷ್ಯವಿದೆ. ಕುಬೇರಯಂತ್ರ ಪೂಜೆ ಮಾಡುತ್ತೇವೆ ಅಂತಾ ಹೇಳಿ ನಂಬಿಸಿ ಹಣ ಪೀಕುತ್ತಾರೆ. ಈ ರೀತಿ ಆನ್​ ಲೈನ್​ನಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಯಾರು ಸಹ ಆನ್ ಲೈನ್ ಅಸ್ಟ್ರೋಟಾಕ್ ಆಪ್ಯ್ ನಂಬಿ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತನ್ನ ವಯಸ್ಸಿನ ಎಲ್ಲರಿಗೂ ಮದ್ವೆಯಾದರೂ ನನಗೆ ಇನ್ನೂ ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ

ಆನ್​ ಲೈನ್​ನಲ್ಲಿ ಜ್ಯೋತಿಷ್ಯ ಮತ್ತು ಭವಿಷ್ಯ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಯುವಕ, ಯುವತಿಯರು ಸೇರಿದಂತೆ ಜನರು ಜಾಗೃತರಾಗಿರುವಂತೆ ಪೊಲೀಸ್ ಇಲಾಖೆ ಮನವಿ‌ ಮಾಡಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ 9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು