ಸಾಲಗಾರರ ಕಾಟಕ್ಕೆ ಹಾವೇರಿ ಸಂತೆಯಲ್ಲಿ ಜಾನುವಾರುಗಳನ್ನು ಮಾರುತ್ತಿರುವ ರೈತರು

ಹಾವೇರಿ ಜಿಲ್ಲೆ ರೈತರು ಬೆಳೆ ಕೈಗೆ ಸಿಗದೆ ಸಾಲಗಾರರ ಕಾಟಕ್ಕೆ ಬೇಸತ್ತು ಮನೆ, ಜಮೀನು ಮಾರಿ ಸಾಲ ಮರುಪಾವತಿ ಮಾಡುತ್ತಿದ್ದಾರೆ. ಈ ಬಾರಿ ಆರಂಭದಲ್ಲಿ ಮುಂಗಾರು ಅಬ್ಬರಿಸಿ ಬೊಬ್ಬಿರಿದು ಬಿತ್ತನೆಯಾದ ನಂತರ ಕೈಕೊಟ್ಟಿದೆ. ಹೀಗಾಗಿ ಸಾಲಗಾರರ ಕಾಟಕ್ಕೆ ತನ್ನ ಒಡನಾಡಿ ಎತ್ತುಗಳನ್ನು ಮಾರಿ ಕೆಲವರು ಸಾಲ ತೀರಿಸುತ್ತಿದ್ದಾರೆ.

ಸಾಲಗಾರರ ಕಾಟಕ್ಕೆ  ಹಾವೇರಿ ಸಂತೆಯಲ್ಲಿ ಜಾನುವಾರುಗಳನ್ನು ಮಾರುತ್ತಿರುವ ರೈತರು
ಸಾಲಗಾರರ ಕಾಟಕ್ಕೆ ಜಾನುವಾರುಗಳನ್ನು ಮಾರುತ್ತಿರುವ ಹಾವೇರಿ ರೈತರು
Follow us
| Updated By: ಸಾಧು ಶ್ರೀನಾಥ್​

Updated on: Jan 31, 2024 | 2:39 PM

ಮಳೆಯ ಕಣ್ಣಾಮುಚ್ಚಾಲೆ ಆಟಕ್ಕೆ ಹಾವೇರಿ ರೈತರರು ಅಕ್ಷರಶಃ ಕಂಗೆಟ್ಟಿದ್ದಾರೆ. ಬಿತ್ತಿದ ಬೆಳೆ ಕೈಗೆ ಸಿಗದೇ ಸಾಲಗಾರರ ಕಾಟಕ್ಕೆ ತನ್ನ ಒಡನಾಡಿ ಎತ್ತುಗಳನ್ನು ಅತಿ ಕಡಿಮೆ ದರಕ್ಕೆ ಮಾರಲು ಮುಂದಾಗಿದ್ದಾರೆ. ಉತ್ತರ ಕರ್ನಾಟಕದ ಅತಿ ದೊಡ್ಡ ಮಾರುಕಟ್ಟೆ ಹಾವೇರಿಯಲ್ಲಿ ಜಾನುವಾರು ಸಂತೆ ಜಿನುಗುಡುತ್ತಿದೆ. ಹೌದು ಈ ಬಾರಿ ರಾಜ್ಯದಲ್ಲಿ ಎದುರಾಗಿರು ಬರಗಾಲವನ್ನು ಎದುರಿಸಲು ರಾಜ್ಯದ ರೈತರು ಹೆಣಗಾಡುತ್ತಿದ್ದಾರೆ.

ಸಾಲಸೋಲ ಮಾಡಿದ ಬೆಳೆ ಕೈಗೆ ಸಿಗದೆ ಸಾಲಗಾರರ ಕಾಟಕ್ಕೆ ಬೇಸತ್ತು ಮನೆ, ಜಮೀನು ಮಾರಿ ಸಾಲ ಮರುಪಾವತಿ ಮಾಡುತ್ತಿದ್ದಾರೆ. ಇದಕ್ಕೆ ಹಾವೇರಿ ಜಿಲ್ಲೆ ಏನು ಹೊರತಾಗಿಲ್ಲ. ಈ ಬಾರಿ ಹಾವೇರಿ ಜಿಲ್ಲೆಯಾದ್ಯಂತ ಆರಂಭದಲ್ಲಿ ಮುಂಗಾರು ಅಬ್ಬರಿಸಿ ಬೊಬ್ಬಿರಿದು ಬಿತ್ತನೆಯಾದ ನಂತರ ಕೈಕೊಟ್ಟಿದೆ. ಹೀಗಾಗಿ ರೈತರು ಸಾಲ ತೀರಿಸಲಾಗದೆ ಪರದಾಡುತ್ತಿದ್ದಾರೆ. ಕೊನೆಗೆ ಸಾಲಗಾರರ ಕಾಟಕ್ಕೆ ತನ್ನ ಒಡನಾಡಿ ಎತ್ತುಗಳನ್ನು ಮಾರಿ ಕೆಲವರು ಸಾಲ ತೀರಿಸುತ್ತಿದ್ದಾರೆ. ಇನ್ನೂ ಕೆಲವರು ಮಳೆ ಕೈ ಕೊಟ್ಟಿದ್ದರಿಂದ ಜಾನುವಾರುಗಳಿಗೆ ಮೇವು ಇಲ್ಲಾ ಈ ಕಾರಣದಿಂದ ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.

ಆರಂಭದಲ್ಲಿ ಮುಂಗಾರು ಚೆನ್ನಾಗಿ ಆಗಿದ್ದರಿಂದ ಹಾವೇರಿ ರೈತರು ಮೆಕ್ಕೆಜೋಳ, ಭತ್ತ, ಸೋಯಾಬಿನ್, ಶೇಂಗಾ , ಹತ್ತಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದರು. ಆದರೆ, ಅಗಸ್ಟ್ ತಿಂಗಳು ಮುಗಿದು ಸೆಪ್ಟಂಬರ್ ಆರಂಭವಾದರು ಸಹ ಮಳೆರಾಯ ಮುನಿಸು ಶಮನವಾಗಿಯೇ ಇಲ್ಲಾ. ಪರಿಣಾಮ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ಒಣಗಿ ಹೋಗಿದ್ದಾವೆ.

ಹೀಗಾಗಿ ಮೇವು ಇಲ್ಲದೇ ಎತ್ತು, ಹಸು, ಎಮ್ಮೆಗಳನ್ನು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ತರಲಾಗುತ್ತಿದೆ. ಒಂದು ಕಡೆ ಕೈಯಲ್ಲಿ ದುಡ್ಡಿಲ್ಲದೆ ರೈತರು ಜಾನುವಾರು ಮಾರಲು ಬಂದರೆ, ಇನ್ನೊಂದು ಕಡೆ ಅವುಗಳನ್ನು ಕೊಳ್ಳಬೇಕಾಗಿದ್ದ ರೈತರ ಕಡೆ ಸಹ ಹಣ ಇಲ್ಲ. ಪರಿಣಾಮ ಮಾರುಕಟ್ಟೆಯಲ್ಲಿ ದನಗಳು ಕೊಳ್ಳುವವರೇ ಇಲ್ಲದಂತಾಗಿದೆ. ಆದರಿಂದ ರೈತರು ಒಂದು ಲಕ್ಷ ಬೆಲೆ ಬಾಳುವ ಎತ್ತುಗಳನ್ನು ಐವತ್ತು ಸಾವಿರಕ್ಕೆ ಅನಿವಾರ್ಯವಾಗಿ ಮಾರಾಟ ಮಾಡುತ್ತಿದ್ದಾರೆ.

ಒಟ್ಟಾರೆ ಹಾವೇರಿಯಲ್ಲಿ ಬರ ತಾಂಡವವಾಡುತ್ತಿದೆ. ಬರಪಿಡಿತ ಜಿಲ್ಲೆ ಎಂದು ಘೋಷಣೆಯಾಗಿದೆ ಆದರೆ ಸೂಕ್ತ ಪರಿಹಾರ ಸಿಕ್ಕಿಲ್ಲಾ. ರೈತರು ಬೀದಿಗೆ ಇಳಿದು ಹೋರಾಟ ಮಾಡಿದರು ಸರ್ಕಾರ ಗ್ಯಾರಂಟಿ ಯೋಜನೆ ನಡುವೆ ರೈತರಿಗೆ ಪರಿಹಾರ ನೀಡಲು ಹೆಣಗಾಡುತ್ತಿದೆ. ಒಟ್ಟಾರೆ ದೇಶಕ್ಕೆ ಅನ್ನಕೊಡುವ ರೈತರ ಪಾಡು ದೇವರಿಗೆ ಪ್ರೀತಿ ಅನ್ನುವಂತಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ 9, ಹಾವೇರಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ