AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ಸರ್ಕಾರಿ ಈಜುಕೊಳ ಚರ್ಮರೋಗ ಅಂಟಿಸುವ ಅಡ್ಡಾ ಆಗಿದೆ! ಕ್ರೀಡಾಪಟುಗಳು ಕಂಗಾಲು

ಹಾವೇರಿ ಜಿಲ್ಲೆ 25ನೇ ವರ್ಷದ ರಜತ ಸಂಭ್ರಮ ಆಚರಿಸಿಕೊಂಡರು ಕ್ರೀಡಾ ಕ್ಷೇತ್ರದಲ್ಲಿ ನಿರಾಸೆಯ ಕಾರ್ಮೋಡ ಕವಿದಿದೆ. ಜಿಲ್ಲಾ ಮತ್ತು ತಾಲ್ಲೂಕು ಕ್ರೀಡಾಂಗಣಗಳಿಗೆ ಕಾಲಿಟ್ಟರೆ ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಗೋಚರಿಸುತ್ತವೆ. ಅನುದಾನದ ಕೊರತೆ, ಕಾಯಂ ಸಿಬ್ಬಂದಿ ಕೊರತೆ, ಸೌಲಭ್ಯಗಳ ಕೊರತೆ ಜೊತೆಗೆ ಕಳಪೆ ಕಾಮಗಾರಿಯಿಂದ ಕ್ರೀಡಾ ಇಲಾಖೆ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ.

ಹಾವೇರಿ ಸರ್ಕಾರಿ ಈಜುಕೊಳ ಚರ್ಮರೋಗ ಅಂಟಿಸುವ ಅಡ್ಡಾ ಆಗಿದೆ! ಕ್ರೀಡಾಪಟುಗಳು ಕಂಗಾಲು
ಹಾವೇರಿ ಸರ್ಕಾರಿ ಈಜುಕೊಳ ಚರ್ಮರೋಗ ಅಂಟಿಸುವ ಅಡ್ಡಾ ಆಗಿದೆ!
ಸಾಧು ಶ್ರೀನಾಥ್​
|

Updated on: Feb 10, 2024 | 5:39 PM

Share

ಯುವ ಕ್ರೀಡಾಪಟುಗಳಿಗೆ ವರದಾನವಾಗಬೇಕಾಗಿದ್ದ ಹಾವೇರಿ ಜಿಲ್ಲಾ ಕ್ರೀಡಾಂಗಣ ಶಾಪವಾಗಿ ಮಾರ್ಪಟ್ಟಿದೆ. ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿದ ಈಜು ಕೊಳ ಚರ್ಮ ರೋಗ ಅಂಟಿಸುವ ಅಡ್ಡಾ ಆಗಿದೆ. ದುರಸ್ತಿ ಮಾಡಿಸಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಕಂಡು ಕಾಣದಂತೆ ಕ್ರೀಡಾ ಪಟುಗಳಿಂದ ದುಡ್ಡು ಪಡೆದು ಸರ್ಕಾರಕ್ಕೆ ನೀಡದೇ ಜೇಬಿಗೆ ಇಳಿಸುತ್ತಿದ್ದಾರೆ

ಹೌದು ಹಾವೇರಿ ಜಿಲ್ಲೆಯ ಕ್ರೀಡಾಪಟುಗಳ ಪಾಡು ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಭವಿಷ್ಯದಲ್ಲಿ ಹತ್ತಾರು ಮನಸ್ಸು ಕಂಡು ಜಿಲ್ಲಾ ಕ್ರೀಡಾಂಗಣಕ್ಕೆ ಹೋಗುವ ಯುವಕ ಯುವತಿಯರು ರೋಗಕ್ಕೆ ತುತ್ತಾಗುವಂಥಾ ಸ್ಥಿತಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಸ್ಥಿತಿ ಇದೆ. 2010 ರಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಒಳಾಂಗಣ ಕ್ರೀಡಾಂಗಣದ ಸ್ಥಿತಿ ಸಮಸ್ಯೆಗಳ ಆಗರವಾಗಿದೆ. ಅದರಲ್ಲೂ ಈಜುಕೊಳದ ಸ್ಥಿತಿ ಅಯೋಮಯ, ಪಾಚಿಗಟ್ಟಿ ಗಬ್ಬು ನಾರುತ್ತಿರುವ ನೀರಿನಲ್ಲಿಯೇ ಈಜುಪಟುಗಳು ಈಜಾಡುತ್ತಿದ್ದಾರೆ. ಇದಕ್ಕೆ ಯಾವುದೇ ಕೆಮಿಕಲ್ ಬಳಸುತ್ತಿಲ್ಲಾ, ಜೊತೆಗೆ ಈಜುಕೊಳ ಸೋರಿಕೆಯಾಗುತ್ತಿದೆ. ಹೀಗಾಗಿ ಈಜುಪಟುಗಳಿಗೆ ನೀರಿಗೆ ಇಳಿದರೆ ಮೈ ನವೆ ಆಗುತ್ತಿದೆ. ಹೀಗೆಯೇ ಮುಂದುವರೆದರೆ ಚರ್ಮರೋಗ ಅಂಟಿಕೊಳ್ಳುವುದು ಗ್ಯಾರಂಟಿ.

ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಆವರಣ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಆದರೂ ಇಲ್ಲಿಯ ಸಿಬ್ಬಂದಿ ಕ್ರೀಡಾಪಟುಗಳಿಂದ ಹಣ ಪೀಕುವುದನ್ನು ಮಾತ್ರ ಬಿಟ್ಟಿಲ್ಲ. ಪುಕ್ಕಟೆಯಾಗಿಯೂ ಈಜಲು ಯೋಗ್ಯವಿಲ್ಲದ ಈಜುಕೊಳದಲ್ಲಿ ತಾಸಿಗೆ 50 ರೂ ದಂತೆ ವಸೂಲಿ ಮಾಡುತ್ತಿದ್ದಾರೆ. ಅದನ್ನು ಸರ್ಕಾರಕ್ಕೂ ನೀಡದೆ ಅಗತ್ಯ ಸಾಮಗ್ರಿ ಖರೀದಿ ಮಾಡಲು ಬಳಸದೆ ನಿತ್ಯ ಸಾವಿರಾರು ರೂಪಾಯಿ ಸಿಬ್ಬಂದಿಯ ಜೇಬಿಗೆ ಇಳಿಯುತ್ತಿದೆ. ಇದನ್ನು ಟಿವಿ9 ಪ್ರಶ್ನೆ ಮಾಡಿದಾಗ ಜಿಲ್ಲಾ ಕ್ರೀಡಾಂಗಣದ ಅಧಿಕಾರಿ, ಸಿಬ್ಬಂದಿ ಈಜುಕೊಳಕ್ಕೆ ಬೀಗ ಜಡಿದಿದ್ದಾರೆ.

ಒಟ್ಟಾರೆ ಹಾವೇರಿ ಜಿಲ್ಲೆ 25ನೇ ವರ್ಷದ ರಜತ ಸಂಭ್ರಮ ಆಚರಿಸಿಕೊಂಡರು ಕ್ರೀಡಾ ಕ್ಷೇತ್ರದಲ್ಲಿ ನಿರಾಸೆಯ ಕಾರ್ಮೋಡ ಕವಿದಿದೆ. ಜಿಲ್ಲಾ ಮತ್ತು ತಾಲ್ಲೂಕು ಕ್ರೀಡಾಂಗಣಗಳಿಗೆ ಕಾಲಿಟ್ಟರೆ ಹೆಜ್ಜೆ ಹೆಜ್ಜೆಗೂ ಸಮಸ್ಯೆಗಳು ಗೋಚರಿಸುತ್ತವೆ. ಅನುದಾನದ ಕೊರತೆ, ಕಾಯಂ ಸಿಬ್ಬಂದಿ ಕೊರತೆ, ಸೌಲಭ್ಯಗಳ ಕೊರತೆ ಜೊತೆಗೆ ಕಳಪೆ ಕಾಮಗಾರಿಯಿಂದ ಕ್ರೀಡಾ ಇಲಾಖೆ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಇದು ಯುವ ಕ್ರೀಡಾಪಟುಗಳ ನಿದ್ದೆಗೆಡಿಸಿರುವುದಂತೂ ನೂರಕ್ಕೆ ನೂರು ನಿಜ!

ವರದಿ: ಅಣ್ಣಪ್ಪ ಬಾರ್ಕಿ, ಟಿವಿ 9, ಹಾವೇರಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!