AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್

ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ಇದೀಗ ಗ್ಯಾಂಗ್​ ರೇಪ್ ಅಡಿ ಕೇಸ್​ ದಾಖಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ 164 ಹೇಳಿಕೆ ನೀಡದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ನೈತಿಕ ಪೊಲೀಸ್​ಗಿರಿ ನಡೆಸಿದ್ದ ಆರೋಪಿಗಳ ವಿರುದ್ಧ ಈಗ ಪೊಲೀಸರು ಗ್ಯಾಂಗ್ ರೇಪ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್
ನೈತಿಕ ಪೊಲೀಸ್​ಗಿರಿ ಕೇಸ್​
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 11, 2024 | 10:30 PM

Share

ಹಾವೇರಿ, ಜನವರಿ 11: ಜಿಲ್ಲೆಯ ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ (Moral Police)  ಪ್ರಕರಣ ಇದೀಗ ಗ್ಯಾಂಗ್​ ರೇಪ್ ಅಡಿ ಕೇಸ್​ ದಾಖಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ 164 ಹೇಳಿಕೆ ನೀಡದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ನೈತಿಕ ಪೊಲೀಸ್​ಗಿರಿ ನಡೆಸಿದ್ದ ಆರೋಪಿಗಳ ವಿರುದ್ಧ ಈಗ ಪೊಲೀಸರು ಗ್ಯಾಂಗ್ ರೇಪ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಂದು ಜಡ್ಜ್​ ಮುಂದೆ ಹಾಜರುಪಡಿಸಿದ್ದಾರೆ.

ಅಫ್ತಾಬ್, ಮಾದರಸಾಬ್, ಅಬ್ದುಲ್ ಖಾದರ್​ನನ್ನು ಹಾನಗಲ್​ನ CJ&JMFC ಕೋರ್ಟ್​ಗೆ ಪೊಲೀಸರು ಹಾಜರುಪಡಿಸಿದ್ದು, ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿ, ಜಡ್ಜ್ ಅನಿತಾ ಆದೇಶ ಹೊರಡಿಸಿದ್ದಾರೆ. ಕೆರೆಮತ್ತಿಹಳ್ಳಿಯ ಸಬ್​ ಜೈಲಿಗೆ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿದೆ.

ಗ್ಯಾಂಗ್​​ರೇಪ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ: ಎಸ್​ಪಿ ಅಂಶುಕುಮಾರ್

ಎಸ್​ಪಿ ಅಂಶುಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆ ಸಿಆರ್​ಪಿಸಿ ಸೆಕ್ಷನ್ 164ರಡಿ ನ್ಯಾಯಾಧೀಶರು ಎದುರು ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಸಂತ್ರಸ್ತೆ ಹೇಳಿಕೆ ಪ್ರಕಾರ ಐಪಿಸಿ ಸೆಕ್ಷನ್​ 376D ಸೇರಿಸುತ್ತೇವೆ. ಗ್ಯಾಂಗ್​​ರೇಪ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಗ್ಯಾಂಗ್ ರೇಪ್ ಆರೋಪ

ಸಂತ್ರಸ್ತೆ ಹೇಳಿಕೆಯಲ್ಲಿ 7 ಜನರ ವಿರುದ್ಧ ಆರೋಪವಿದೆ. ಮೂವರನ್ನು ಬಂಧಿಸಲಾಗಿದೆ, ಉಳಿದವರನ್ನೂ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

ನಿನ್ನೆ ಸಂತ್ರಸ್ಥೆಯ 161 ಹೇಳಿಕೆಯಲ್ಲಿ ಯಾವುದೇ ಗ್ಯಾಂಗ್ ರೇಪ್ ಆಗಿಲ್ಲ ಎಂದು ಹೇಳಿದ್ದರು. ಲಿಖಿತ ಹೇಳಿಕೆ ಕೂಡ ಮಾಡಿದ್ದೇವೆ. ಮೆಡಿಕಲ್‌ ಟೆಸ್ಟ್ ಮಾಡಲಾಗಿದೆ. ನಿನ್ನೆವರೆಗೂ ರೇಪ್ ಆಗಿದೆ ಅಂತ ಆರೋಪ ಮಾಡಿಲ್ಲ. ಹೇಳಿಕೆಯಲ್ಲಿ ಬಂದಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಇಂದು 164 ಸ್ಟೇಟ್ಮೆಂಟ್ ಕೂಡ ಮಾಡಲಾಗುತ್ತೆ. ಮ್ಯಾಜಿಸ್ಟ್ರೇಟ್ ಮುಂದೆ ಏನು ಹೇಳುತ್ತಾರೆ ಅದರ ಮೇಲೆ ತನಿಖೆ ಮಾಡಲಾಗತ್ತೆ. ನಿನ್ನೆ ತನಕ ಅತ್ಯಾಚಾರ ಅಂತ ನಮಗೆ ಹೇಳಿಲ್ಲ ಎಂದು ಹೇಳಿದ್ದರು.

ವರದಿ: ರವಿ ಹೂಗಾರ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ