Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್

ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ಇದೀಗ ಗ್ಯಾಂಗ್​ ರೇಪ್ ಅಡಿ ಕೇಸ್​ ದಾಖಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ 164 ಹೇಳಿಕೆ ನೀಡದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ನೈತಿಕ ಪೊಲೀಸ್​ಗಿರಿ ನಡೆಸಿದ್ದ ಆರೋಪಿಗಳ ವಿರುದ್ಧ ಈಗ ಪೊಲೀಸರು ಗ್ಯಾಂಗ್ ರೇಪ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್
ನೈತಿಕ ಪೊಲೀಸ್​ಗಿರಿ ಕೇಸ್​
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 11, 2024 | 10:30 PM

ಹಾವೇರಿ, ಜನವರಿ 11: ಜಿಲ್ಲೆಯ ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ (Moral Police)  ಪ್ರಕರಣ ಇದೀಗ ಗ್ಯಾಂಗ್​ ರೇಪ್ ಅಡಿ ಕೇಸ್​ ದಾಖಲಾಗಿದೆ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ 164 ಹೇಳಿಕೆ ನೀಡದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ನೈತಿಕ ಪೊಲೀಸ್​ಗಿರಿ ನಡೆಸಿದ್ದ ಆರೋಪಿಗಳ ವಿರುದ್ಧ ಈಗ ಪೊಲೀಸರು ಗ್ಯಾಂಗ್ ರೇಪ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಂದು ಜಡ್ಜ್​ ಮುಂದೆ ಹಾಜರುಪಡಿಸಿದ್ದಾರೆ.

ಅಫ್ತಾಬ್, ಮಾದರಸಾಬ್, ಅಬ್ದುಲ್ ಖಾದರ್​ನನ್ನು ಹಾನಗಲ್​ನ CJ&JMFC ಕೋರ್ಟ್​ಗೆ ಪೊಲೀಸರು ಹಾಜರುಪಡಿಸಿದ್ದು, ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿ, ಜಡ್ಜ್ ಅನಿತಾ ಆದೇಶ ಹೊರಡಿಸಿದ್ದಾರೆ. ಕೆರೆಮತ್ತಿಹಳ್ಳಿಯ ಸಬ್​ ಜೈಲಿಗೆ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿದೆ.

ಗ್ಯಾಂಗ್​​ರೇಪ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ: ಎಸ್​ಪಿ ಅಂಶುಕುಮಾರ್

ಎಸ್​ಪಿ ಅಂಶುಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ತೆ ಸಿಆರ್​ಪಿಸಿ ಸೆಕ್ಷನ್ 164ರಡಿ ನ್ಯಾಯಾಧೀಶರು ಎದುರು ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಸಂತ್ರಸ್ತೆ ಹೇಳಿಕೆ ಪ್ರಕಾರ ಐಪಿಸಿ ಸೆಕ್ಷನ್​ 376D ಸೇರಿಸುತ್ತೇವೆ. ಗ್ಯಾಂಗ್​​ರೇಪ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಗ್ಯಾಂಗ್ ರೇಪ್ ಆರೋಪ

ಸಂತ್ರಸ್ತೆ ಹೇಳಿಕೆಯಲ್ಲಿ 7 ಜನರ ವಿರುದ್ಧ ಆರೋಪವಿದೆ. ಮೂವರನ್ನು ಬಂಧಿಸಲಾಗಿದೆ, ಉಳಿದವರನ್ನೂ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

ನಿನ್ನೆ ಸಂತ್ರಸ್ಥೆಯ 161 ಹೇಳಿಕೆಯಲ್ಲಿ ಯಾವುದೇ ಗ್ಯಾಂಗ್ ರೇಪ್ ಆಗಿಲ್ಲ ಎಂದು ಹೇಳಿದ್ದರು. ಲಿಖಿತ ಹೇಳಿಕೆ ಕೂಡ ಮಾಡಿದ್ದೇವೆ. ಮೆಡಿಕಲ್‌ ಟೆಸ್ಟ್ ಮಾಡಲಾಗಿದೆ. ನಿನ್ನೆವರೆಗೂ ರೇಪ್ ಆಗಿದೆ ಅಂತ ಆರೋಪ ಮಾಡಿಲ್ಲ. ಹೇಳಿಕೆಯಲ್ಲಿ ಬಂದಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಇಂದು 164 ಸ್ಟೇಟ್ಮೆಂಟ್ ಕೂಡ ಮಾಡಲಾಗುತ್ತೆ. ಮ್ಯಾಜಿಸ್ಟ್ರೇಟ್ ಮುಂದೆ ಏನು ಹೇಳುತ್ತಾರೆ ಅದರ ಮೇಲೆ ತನಿಖೆ ಮಾಡಲಾಗತ್ತೆ. ನಿನ್ನೆ ತನಕ ಅತ್ಯಾಚಾರ ಅಂತ ನಮಗೆ ಹೇಳಿಲ್ಲ ಎಂದು ಹೇಳಿದ್ದರು.

ವರದಿ: ರವಿ ಹೂಗಾರ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...