AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್

ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ ನಂತರ ಇದೀಗ ಮದ್ರಾಸ್ ಐ ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್
ಹಾವೇರಿಯಲ್ಲಿ ಹೆಚ್ಚುತ್ತಿರುವ ಮದ್ರಾಸ್ ಐ ಪ್ರಕರಣಗಳು
ಸೂರಜ್​, ಮಹಾವೀರ್​ ಉತ್ತುರೆ
| Edited By: Rakesh Nayak Manchi|

Updated on: Aug 11, 2023 | 3:37 PM

Share

ಹಾವೇರಿ, ಆಗಸ್ಟ್ 11: ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ (Haveri) ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ (Lumpy skin disease) ನಂತರ ಇದೀಗ ಮದ್ರಾಸ್ ಐ (Madras Eye) ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ. ಹೌದು, ಜಿಲ್ಲೆಯಲ್ಲಿ ಮದ್ರಾಸ್ ಐ ಹಾವಳಿ ಹೆಚ್ಚಾಗುತ್ತಿದ್ದು, ಜನರು ಕಂಗೆಟ್ಟಿದ್ದಾರೆ.

ಕೊರೋನಾ ಸಾವು ಪ್ರಕರಣದಲ್ಲಿ ನಂಬರ್ 1 ಆಗಿದ್ದ ಹಾವೇರಿ ಜಿಲ್ಲೆ, ಲಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನಲ್ಲೂ ಅಗ್ರಸ್ಥಾನ ಪಡೆದಿದೆ. ರೈತರ ಆತ್ಮಹತ್ಯೆಯಲ್ಲೂ ಮೊದಲ ಸ್ಥಾನದಲ್ಲಿರುವ ಹಾವೇರಿ ಇದೀಗ ಕಣ್ಣುಬೇನೆ ರೋಗದಲ್ಲೂ ಮುಂದಿದೆ.

ಇದನ್ನೂ ಓದಿ: ಕಳೆದ ಒಂದು ವಾರದಲ್ಲಿ ಕರ್ನಾಟಕದಲ್ಲಿ 40 ಸಾವಿರ ಮದ್ರಾಸ್ ಐ ಪ್ರಕರಣಗಳು ಪತ್ತೆ

ಹೌದು, ಮದ್ರಾಸ್ ಐ ರೋಗದ ಪ್ರಕರಣಗಳು ಇಡೀ ರಾಜ್ಯದಲ್ಲಿ 64,506 ಕೇಸ್​ಗಳು ಇವೆ. ಈ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲೇ ಪತ್ತೆಯಾಗಿದೆ. ಇದು ಹಾವೇರಿ ಜಿಲ್ಲೆಯ ಜನತೆಯ ನಿದ್ದೆಗೆಡಿಸಿದೆ. ಇನ್ನು, ಮದ್ರಾಸ್ ಐ ರೋಗ ಪತ್ತೆ ಪ್ರಕರಣದಲ್ಲಿ ಬೀದರ್​ಗೆ 2ನೇ ಸ್ಥಾನ, ಶಿವಮೊಗ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಮದ್ರಾಸ್ ಐ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿ ವಿಫಲಗೊಂಡಿದೆ. ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುವಂತಾಗಿದೆ. ಸದ್ಯ ಹಾವೇರಿಯಲ್ಲಿ ಮದ್ರಾಸ್ ಐ ರೋಗ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿನ ಒಪಿಡಿ ವಿಭಾಗಕ್ಕೆ ನೂರಾರು ಸಂಖ್ಯೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ