AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್

ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ ನಂತರ ಇದೀಗ ಮದ್ರಾಸ್ ಐ ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್
ಹಾವೇರಿಯಲ್ಲಿ ಹೆಚ್ಚುತ್ತಿರುವ ಮದ್ರಾಸ್ ಐ ಪ್ರಕರಣಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 11, 2023 | 3:37 PM

Share

ಹಾವೇರಿ, ಆಗಸ್ಟ್ 11: ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ (Haveri) ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ (Lumpy skin disease) ನಂತರ ಇದೀಗ ಮದ್ರಾಸ್ ಐ (Madras Eye) ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ. ಹೌದು, ಜಿಲ್ಲೆಯಲ್ಲಿ ಮದ್ರಾಸ್ ಐ ಹಾವಳಿ ಹೆಚ್ಚಾಗುತ್ತಿದ್ದು, ಜನರು ಕಂಗೆಟ್ಟಿದ್ದಾರೆ.

ಕೊರೋನಾ ಸಾವು ಪ್ರಕರಣದಲ್ಲಿ ನಂಬರ್ 1 ಆಗಿದ್ದ ಹಾವೇರಿ ಜಿಲ್ಲೆ, ಲಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನಲ್ಲೂ ಅಗ್ರಸ್ಥಾನ ಪಡೆದಿದೆ. ರೈತರ ಆತ್ಮಹತ್ಯೆಯಲ್ಲೂ ಮೊದಲ ಸ್ಥಾನದಲ್ಲಿರುವ ಹಾವೇರಿ ಇದೀಗ ಕಣ್ಣುಬೇನೆ ರೋಗದಲ್ಲೂ ಮುಂದಿದೆ.

ಇದನ್ನೂ ಓದಿ: ಕಳೆದ ಒಂದು ವಾರದಲ್ಲಿ ಕರ್ನಾಟಕದಲ್ಲಿ 40 ಸಾವಿರ ಮದ್ರಾಸ್ ಐ ಪ್ರಕರಣಗಳು ಪತ್ತೆ

ಹೌದು, ಮದ್ರಾಸ್ ಐ ರೋಗದ ಪ್ರಕರಣಗಳು ಇಡೀ ರಾಜ್ಯದಲ್ಲಿ 64,506 ಕೇಸ್​ಗಳು ಇವೆ. ಈ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲೇ ಪತ್ತೆಯಾಗಿದೆ. ಇದು ಹಾವೇರಿ ಜಿಲ್ಲೆಯ ಜನತೆಯ ನಿದ್ದೆಗೆಡಿಸಿದೆ. ಇನ್ನು, ಮದ್ರಾಸ್ ಐ ರೋಗ ಪತ್ತೆ ಪ್ರಕರಣದಲ್ಲಿ ಬೀದರ್​ಗೆ 2ನೇ ಸ್ಥಾನ, ಶಿವಮೊಗ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಮದ್ರಾಸ್ ಐ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿ ವಿಫಲಗೊಂಡಿದೆ. ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುವಂತಾಗಿದೆ. ಸದ್ಯ ಹಾವೇರಿಯಲ್ಲಿ ಮದ್ರಾಸ್ ಐ ರೋಗ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿನ ಒಪಿಡಿ ವಿಭಾಗಕ್ಕೆ ನೂರಾರು ಸಂಖ್ಯೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್