AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್

ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ ನಂತರ ಇದೀಗ ಮದ್ರಾಸ್ ಐ ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ.

ಅಪಖ್ಯಾತಿ ಗಳಿಸುವುದರಲ್ಲೇ ಹಾವೇರಿ ನಂಬರ್ 1; ಇದೀಗ ಮದ್ರಾಸ್ ಐ ರೋಗದಲ್ಲೂ ಟಾಪ್
ಹಾವೇರಿಯಲ್ಲಿ ಹೆಚ್ಚುತ್ತಿರುವ ಮದ್ರಾಸ್ ಐ ಪ್ರಕರಣಗಳು
ಸೂರಜ್​, ಮಹಾವೀರ್​ ಉತ್ತುರೆ
| Edited By: Rakesh Nayak Manchi|

Updated on: Aug 11, 2023 | 3:37 PM

Share

ಹಾವೇರಿ, ಆಗಸ್ಟ್ 11: ಕೊರೋನಾ ಸಾವು ಸಂಖ್ಯೆಯಲ್ಲಿ ಮಾತ್ರವಲ್ಲದೆ ಹಲವು ಅಪಖ್ಯಾತಿ ಗಳಿಸುವುದರಲ್ಲಿ ಹಾವೇರಿ (Haveri) ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಲಂಪಿ ಸ್ಕಿನ್ ಕಾಯಿಲೆ (Lumpy skin disease) ನಂತರ ಇದೀಗ ಮದ್ರಾಸ್ ಐ (Madras Eye) ಎಂಬ ಕಣ್ಣಿನ ರೋಗ ಜಿಲ್ಲೆಯನ್ನು ಕಾಡುತ್ತಿದೆ. ಹೌದು, ಜಿಲ್ಲೆಯಲ್ಲಿ ಮದ್ರಾಸ್ ಐ ಹಾವಳಿ ಹೆಚ್ಚಾಗುತ್ತಿದ್ದು, ಜನರು ಕಂಗೆಟ್ಟಿದ್ದಾರೆ.

ಕೊರೋನಾ ಸಾವು ಪ್ರಕರಣದಲ್ಲಿ ನಂಬರ್ 1 ಆಗಿದ್ದ ಹಾವೇರಿ ಜಿಲ್ಲೆ, ಲಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನಲ್ಲೂ ಅಗ್ರಸ್ಥಾನ ಪಡೆದಿದೆ. ರೈತರ ಆತ್ಮಹತ್ಯೆಯಲ್ಲೂ ಮೊದಲ ಸ್ಥಾನದಲ್ಲಿರುವ ಹಾವೇರಿ ಇದೀಗ ಕಣ್ಣುಬೇನೆ ರೋಗದಲ್ಲೂ ಮುಂದಿದೆ.

ಇದನ್ನೂ ಓದಿ: ಕಳೆದ ಒಂದು ವಾರದಲ್ಲಿ ಕರ್ನಾಟಕದಲ್ಲಿ 40 ಸಾವಿರ ಮದ್ರಾಸ್ ಐ ಪ್ರಕರಣಗಳು ಪತ್ತೆ

ಹೌದು, ಮದ್ರಾಸ್ ಐ ರೋಗದ ಪ್ರಕರಣಗಳು ಇಡೀ ರಾಜ್ಯದಲ್ಲಿ 64,506 ಕೇಸ್​ಗಳು ಇವೆ. ಈ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲೇ ಪತ್ತೆಯಾಗಿದೆ. ಇದು ಹಾವೇರಿ ಜಿಲ್ಲೆಯ ಜನತೆಯ ನಿದ್ದೆಗೆಡಿಸಿದೆ. ಇನ್ನು, ಮದ್ರಾಸ್ ಐ ರೋಗ ಪತ್ತೆ ಪ್ರಕರಣದಲ್ಲಿ ಬೀದರ್​ಗೆ 2ನೇ ಸ್ಥಾನ, ಶಿವಮೊಗ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಮದ್ರಾಸ್ ಐ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿ ವಿಫಲಗೊಂಡಿದೆ. ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಜನರು ಪರದಾಟ ನಡೆಸುವಂತಾಗಿದೆ. ಸದ್ಯ ಹಾವೇರಿಯಲ್ಲಿ ಮದ್ರಾಸ್ ಐ ರೋಗ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಸ್ಪತ್ರೆಯಲ್ಲಿನ ಒಪಿಡಿ ವಿಭಾಗಕ್ಕೆ ನೂರಾರು ಸಂಖ್ಯೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ