AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

ಹಾವೇರಿ ತಾಲೂಕು ಬೆಳವಿಗೆ ಗ್ರಾಮದ ಓರ್ವ ವ್ಯಕ್ತಿ ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಪತ್ನಿಯ ಮಾಂಗಲ್ಯ ಸರವನ್ನು ಅಡವಿಟ್ಟು 20 ಸಾವಿರ ರೂ ನೀಡಿದ್ದಾರೆ. ಆದರೂ ಇದುವರೆಗೂ ಬಿಲ್ ಮಂಜೂರಾಗಿಲ್ಲ. ಈ ಬಗ್ಗೆ ತಹಶೀಲ್ದಾರರಿಗೆ ದೂರು ನೀಡಿದ್ದಾರೆ.

ಹಾವೇರಿ: ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡ ಸಂತ್ರಸ್ತ
ಗಂಗಾಧರ​ ಬ. ಸಾಬೋಜಿ
|

Updated on:Jun 26, 2025 | 1:50 PM

Share

ಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ.

ತಹಶೀಲ್ದಾರ್​ಗೆ ದೂರು 

ಹಾವೇರಿ ತಾಲೂಕು ಬೆಳವಿಗೆ ಗ್ರಾಮದ ಮಹಾಂತೇಶ್​, ಸಾಲ ಮಾಡಿ ಮನೆ ಕಟ್ಟಿದ್ದರಿಂದ ಬಿಲ್ ಅನಿವಾರ್ಯವಾಗಿತ್ತು. ಹೀಗಾಗಿ ಪತ್ನಿಯ ಮಾಂಗಲ್ಯ ಸರವನ್ನು ಅಡವಿಟ್ಟು ನೌಕರ ಮದನ್ ಮೋಹನ್‌ಗೆ 20 ಸಾವಿರ ರೂ ಲಂಚ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ. ಈ ಬಗ್ಗೆ ತಹಶೀಲ್ದಾರ್ ಶರಣಮ್ಮ ಅವರನ್ನು ಭೇಟಿಯಾಗಿ ಅಳಲು ತೊಡಿಕೊಂಡಿದ್ದು, ಜೊತೆಗೆ ದೂರು ಸಹ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದಲ್ಲಿ ನವೆಂಬರ್ ತಿಂಗಳು ಬದಲಾವಣೆ ನಿಶ್ಚಿತ, ಅದು ಭಾರೀ ಬದಲಾವಣೆಯೇನೂ ಆಗಿರಲ್ಲ: ಸತೀಶ್ ಜಾರಕಿಹೊಳಿ

ಸಂತ್ರಸ್ತನ ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಶರಣಮ್ಮ, ಹಣ ನೀಡಿರುವ ದಾಖಲೆಗಳನ್ನು ನನಗೆ ನೀಡಿ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ. ನೌಕರನ ವಿರುದ್ಧ ಕಠಿಣ ಕ್ರಮಕ್ಕೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ನೆರೆ ಸಂದರ್ಭದಲ್ಲಿ ಮಹಾಂತೇಶ್ ಅವರ ಮನೆ​ ಕುಸಿದು ಬಿದ್ದಿತ್ತು. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಮಂಜೂರು ಸಿಕ್ಕಿತ್ತು. ಹೀಗಾಗಿ ಮಹಾಂತೇಶ್​ ಅವರು ಸಾಲ ಮಾಡಿ ಮನೆ ನಿರ್ಮಾಣ ಆರಂಭಿಸಿದ್ದರು. ಆದರೆ, ಬ್ಯಾಂಕ್ ಖಾತೆಗೆ ಯಾವುದೇ ಬಿಲ್‌ ಬಂದಿರಲಿಲ್ಲ. ಬಿಲ್‌ಗಾಗಿ ಹಾವೇರಿ ತಹಶೀಲ್ದಾರ್ ಕಚೇರಿಗೆ ಹಲವು ವರ್ಷಗಳಿಂದ ಅಲೆದಾಡುತ್ತಿದ್ದರು. ಬಿಲ್ ಮಂಜೂರು ಮಾಡುವಂತೆ ಮನವಿ ಕೂಡ ಸಲ್ಲಿಸಿದ್ದರು.

ಇದನ್ನೂ ಓದಿ: ಪ್ರಲ್ಹಾದ್ ಜೋಶಿ ವಿರುದ್ಧ ನಿಂದನೆ, ಜೀವ ಬೆದರಿಕೆ ಆರೋಪ: ಏಮ್ಸ್ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು

ಇತ್ತ ಕಚೇರಿಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಮದನ್ ಮೋಹನ್​​, ಬಿಲ್ ಮಂಜೂರು ಮಾಡಲು ಉಳಿದ ಸಂತ್ರಸ್ತರು ಹಣ ನೀಡಿದ್ದಾರೆ. ನೀನು ಸಹ 20 ಸಾವಿರ ರೂ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದಾದ ನಂತರ ಕಚೇರಿಯ ಕ್ಯಾಂಟೀನ್‌ನಲ್ಲಿ ನೌಕರನಿಗೆ 20 ಸಾವಿರ ರೂ ನೀಡಿರುವುದಾಗಿ ಸಂತ್ರಸ್ತ ಮಹಾಂತೇಶ್​ ಆರೋಪಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:48 pm, Thu, 26 June 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು