AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾಲು ಒಕ್ಕೂಟ: ಲೀಟರ್​ ಹಾಲಿನ ದರ ಏರಿಕೆ

ಹಾವೇರಿ ಜಿಲ್ಲಾ ಹಾಲು ಒಕ್ಕೂಟ (ಹಾವೆಮುಲ್) ಮಾರ್ಚ್‌ನಲ್ಲಿ ಹಾಲು ದರ ಕಡಿಮೆ ಮಾಡಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಒಕ್ಕೂಟ ಲೀಟರ್​ಗೆ 3.50 ರೂಪಾಯಿ ಕಡಿಮೆ ಮಾಡಿ ಆದೇಶ ಹೊರಡಿಸಿತ್ತು.ಈಗ ಲೀಟರ್‌ಗೆ 2.50 ರೂ. ಹೆಚ್ಚಳ ಮಾಡಿದೆ. ಹಸುವಿನ ಹಾಲಿಗೆ 33 ರೂ. ಮತ್ತು ಎಮ್ಮೆ ಹಾಲಿಗೆ 45.50 ರೂ. ನಿಗದಿಪಡಿಸಿದೆ.

ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾಲು ಒಕ್ಕೂಟ: ಲೀಟರ್​ ಹಾಲಿನ ದರ ಏರಿಕೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 06, 2025 | 8:45 PM

Share

ಹಾವೇರಿ, ಏಪ್ರಿಲ್​ 06: ಹಾಲು (Milk) ಉತ್ಪಾದಕರ ಆಕ್ರೋಶಕ್ಕೆ ಹಾವೇರಿ (Haveri) ಜಿಲ್ಲಾ ಹಾಲು ಒಕ್ಕೂಟ (ಹಾವೆಮುಲ್) ಮಣಿದಿದೆ. ಹಾಲು ಉತ್ಪಾದಕರಿಗೆ ನೀಡುವ ಲೀಟರ್​ ಹಾಲಿನ ದರವನ್ನು ಹೆಚ್ಚಿಗೆ ಮಾಡಿದೆ. ಲೀಟರ್​ ಹಾಲಿಗೆ 2.50 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ. ಹಸುವಿನ ಹಾಲನ್ನು ಲೀಟರ್​ಗೆ 33 ರೂ., ಎಮ್ಮೆ ಹಾಲನ್ನು ಲೀಟರ್​ಗೆ 45.50 ರೂಪಾಯಿ ನೀಡಿ ಹಾಲು ಉತ್ಪಾದಕರಿಂದ ಖರೀದಿಸಲು ಮುಂದಾಗಿದೆ. ಒಕ್ಕೂಟ ಈ ಹಿಂದೆ ಎಮ್ಮೆ ಹಾಲಿಗೆ 43 ರೂಪಾಯಿ ನೀಡುತ್ತಿತ್ತು. ಹಸುವಿನ ಹಾಲಿಗೆ 30.50 ರೂಪಾಯಿ ನೀಡುತ್ತಿತ್ತು. ಇದೀಗ, 2.50 ರೂಪಾಯಿ ಹೆಚ್ಚಿಗೆ ಮಾಡುವ ಮೂಲಕ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ನೀಡಿದೆ.

3.50 ರೂಪಾಯಿ ಕಡಿತಗೊಳಿಸಿದ್ದ ಹಾವೆಮುಲ್

ಹಾವೆಮುಲ್​ ಮಾರ್ಚ್​ 27ರಂದು ಲೀಟರ್​ಗೆ 3.50 ರೂಪಾಯಿ ಕಡಿಮೆ ಮಾಡಿ ಆದೇಶ ಹೊರಡಿಸಿದ್ದು ಹಾಲು ಉತ್ಪಾದಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹಾವೆಮುಲ್​ 18.50 ಕೋಟಿ ರೂಪಾಯಿ ನಷ್ಟದಲ್ಲಿದೆ. ನಷ್ಟದಿಂದ ಮೇಲೆತ್ತಲು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಬೆಲೆಯಲ್ಲಿ 3.50 ರೂಪಾಯಿ ಕಡಿಮೆ ಮಾಡುವ ಅನಿವಾರ್ಯತೆ ಇದೆ ಎಂದು ಹಾಲು ಒಕ್ಕೂಟದ ಅದ್ಯಕ್ಷರು ಹೇಳಿದ್ದರು.

ಇದಕ್ಕೆ ಹಾಲು ಉತ್ಪಾದಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರವಿವಾರ (.06) ಹಾವೆಮುಲ್ ಅಧ್ಯಕ್ಷರು, ನಿರ್ದೇಶಕರ ಜೊತೆ ಸಚಿವ ಶಿವಾನಂದ ಪಾಟೀಲ್​ ಸಭೆ ನಡೆಸಿದರು. ಸಚಿವರ ಸಲಹೆ ನೀಡಿದ ಹಿನ್ನೆಲೆಯಲ್ಲಿ 2.50 ರೂ. ಹೆಚ್ಚಳಕ್ಕೆ ಹಾವೆಮುಲ್​ ನಿರ್ಧರಿಸಿದೆ.

ಇದನ್ನೂ ಓದಿ
Image
ಸಾಕಾ, ಬೇಕಾ... ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಚಹಾ ದರ ಹೆಚ್ಚಳ
Image
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
Image
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
Image
ನಂದಿನಿ ಹಾಲಿಗೆ ನೀರು ಕಲಬೆರಕೆ: ಅಧಿಕಾರಿಗಳು ಅಮಾನತು

ಹಾವೇರಿ ಹಾಲು ಒಕ್ಕೂಟ 2022 ರಲ್ಲಿ ಪ್ರಾರಂಭವಾಗಿದೆ. ಧಾರವಾಡ ಹಾಲು ಒಕ್ಕೂಟದಿಂದ ಪ್ರತ್ಯೇಕಗೊಂಡು ಹಾವೇರಿ ಹಾಲು ಒಕ್ಕೂಟ ರಚನೆಯಾಗಿದೆ. ಪ್ರಸ್ತುತ ಹಾವೇರಿ ಜಿಲ್ಲೆಯಲ್ಲಿ ಪ್ರತಿ ನಿತ್ಯ 1 ಲಕ್ಷ 35 ಸಾವಿರ ಲೀಟರ್ ಹಾಲು ಉತ್ಪಾದನೆ ಆಗುತ್ತೆ. ಅದರಲ್ಲಿ ಮಾರುಕಟ್ಟೆಯಲ್ಲಿ ಕೇವಲ 20,000 ಲೀಟರ್ ಹಾಲು ಮಾತ್ರ ಮಾರಾಟವಾಗುತ್ತೆ. ಇದರಿಂದ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿದೆ ಎಂದು ಹಾವೆಮುಲ್ ಹೇಳಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಹೈನುಗಾರರಿಗೆ ಯುಗಾದಿ ಬೋನಸ್​

ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ

ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಬರೋಬ್ಬರಿ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದಾಗಿ ಬಜೆಟ್​ ಅಧಿವೇಶನದಲ್ಲಿ ಸರ್ಕಾರ ಉತ್ತರ ನೀಡಿತ್ತು. ಒಟ್ಟು 9,04,547 ಫಲಾನುಭವಿ ರೈತರಿಗೆ ಹಾಲು ಉತ್ಪಾದನಾ ಪ್ರೋತ್ಸಾಹಧನ ಬಾಕಿ ಇದೆ ಎಂದು ಹೇಳಿತ್ತು.

ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಬೇಕಿದೆ. ಹಾಲು ಉತ್ಪಾದನೆ ಜಾಸ್ತಿ ಆಗುತ್ತಿದೆ, ಉತ್ಪಾದನೆಗೆ ತಕ್ಕಂತೆ ಬಜೆಟ್ ಅಲೋಕೇಷನ್ ಇಲ್ಲ. 1300-1500 ಕೋಟಿ ರೂ ಮಾತ್ರ ಬಜೆಟ್ ಹಂಚಿಕೆ ಇದೆ ಎಂದು ಪಶುಸಂಗೋಪನಾ ಸಚಿವ ಉತ್ತರ ನೀಡಿದ್ದರು.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ