AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವಿ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ರುದ್ರಪ್ಪ ಲಮಾಣಿ ಕೂಡಲೇ ಆ ಕೊಠಡಿ ಮೇಲೆ ದಾಳಿ ಮಾಡಿದ್ದು, ಆ ವೇಳೆ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ
Rudrappa Lamani
ರಮೇಶ್ ಬಿ. ಜವಳಗೇರಾ
|

Updated on:Mar 03, 2026 | 7:33 PM

Share

ಹಾವೇರಿ, (ಮಾರ್ಚ್ 03): ಅಪರಾಧ ಕೃತ್ಯಗಳ ಜೊತೆಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದು ಪೊಲೀಸ್ (Police) ಇಲಾಖೆಯ ಕರ್ತವ್ಯವಾಗಿದೆ. ಆದ್ರೆ, ಹಳ್ಳಿಗಳಲ್ಲಿ ಪೊಲೀಸರೇ ಮಟ್ಕಾ (Matka), ಇಸ್ಪಿಟ್ ದಂಧೆಕೋರರ ಜೊತೆ ಶಾಮೀಲಾಗಿ ಹಣ ಮಾಡುವ ಕೆಲಸಕ್ಕಿಳಿದಿದ್ದಾರೆ. ಇದರ ಮಧ್ಯೆ ಪೊಲೀಸರು ಮಾಡಬೇಕಾದ ಕೆಲಸವನ್ನು ಶಾಸಕರೊಬ್ಬರು ಮಾಡಿ ತೋರಿಸಿದ್ದಾರೆ. ಹೌದು… ನಿನ್ನೆ (ಮಾರ್ಚ್ 02) ಕಾರ್ಯ ನಿಮಿತ್ತ ಹಾವೇರಿ (Haveri) ತಾಲೂಕಿನ ಗುತ್ತಲ ಪಟ್ಟಣಕ್ಕೆ ಆಗಮಿಸಿದ್ದು, ಈ ವೇಳೆ ಸ್ಥಳೀಯರಿಂದ  ಕೇಳಿಬಂದ ದೂರಿನ ಮೇರೆಗೆ ಸ್ವತಃ ಉಪಸಭಾಧ್ಯಕ್ಷರು ಶಾಸಕರಾದ ರುದ್ರಪ್ಪ ಲಮಾಣಿಯವರು (Rudrappa lamani )ಮಟ್ಕಾ ಬರೆಯುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಇದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವಿ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ರುದ್ರಪ್ಪ ಲಮಾಣಿ ಕೂಡಲೇ ಆ ಕೊಠಡಿ ಮೇಲೆ ದಾಳಿ ಮಾಡಿದ್ದು, ಆ ವೇಳೆ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್

ಶಾಸಕರ ಬಳಿ ಅಳಲು ತೋಡಿಕೊಂಡ ಮಹಿಳೆಯರು

ನಾಡ ಕಚೇರಿ ಉದ್ಘಾಟನೆ ಮತ್ತು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ರುದ್ರಪ್ಪ ಲಮಾಣಿ ಮತ್ತು ತಹಶೀಲ್ದಾರ್ ಆಗಮಿಸಿದ್ದರು. ಆಗ ಶಾಸಕರನ್ನು ಅಡ್ಡಗಟ್ಟಿದ ಮಹಿಳೆಯರು,ಮೀನು ಮಾಂಸದಂಗಡಿಯವರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದು, ಇದರಿಂದ ದುರ್ವಾಸನೆ ಬರುತ್ತಿದೆ. ಇದನ್ನು ತಿನ್ನಲು ಬರುವ ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಇದನ್ನು ತಡೆಟ್ಟಬೇಕೆಂದು ಮನವಿ ಮಾಡಿದ್ದರು. ಜೊತೆಗೆ ಮಟ್ಕಾ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದರು. ಅಲ್ಲದೇ ಇಲ್ಲೇ ರೂಮ್​​ನಲ್ಲಿ ಮಟ್ಕಾ ಬರೆಯುತ್ತಾರೆ ಯಾರು ಏನು ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದಾಳಿ

ಬಳಿಕ ರುದ್ರಪ್ಪ ಲಮಾಣಿಯವರು ಮಹಿಳೆಯರನ್ನು ಸಮಾಧಾನಪಡಿಸಿ ಕೂಡಲೇ ಆ ಕ್ಷಣವೇ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ವ್ಯಕ್ತಿಯೋರ್ವ ರೂಮ್​​​ನಲ್ಲಿ ಕುಳಿತು ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಇದರಿಂದ ಗರಂ ಆದ ರುದ್ರಪ್ಪ ಲಮಾಣಿ ಕೂಡಲೇ ಪಿಎಸ್​​ಐಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಮಟ್ಕಾ ಬುಕ್ಕಿಯನ್ನು ಒಪ್ಪಿಸಿದ್ದಾರೆ. ಈ ವೇಳೆ ಪಿಎಸ್​​ಐಗೆ ತರಾಟೆಗೆ ತೆಗೆದುಕೊಂಡಿದ್ದು, ತಹಶೀಲ್ದಾರ್ ಶರಣಮ್ಮ ಹಾಗೂ ಗುತ್ತಲ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.

ಎಷ್ಟೋ ರಾಜಕಾರಣಿಗಳು ಇಂತಹ ಅಕ್ರಮ ದಂಧೆಕೋರರ ಬೆನ್ನಿಗೆ ನಿಂತಿರುವರ ನಡುವೆ ಪೊಲೀಸರು ಮಾಡಬೇಕಾದ ಈ ಕೆಲಸವನ್ನು ಮಾಡಿ  ಶಾಸಕ ರುದ್ರಪ್ಪ ಲಮಾಣಿ ಮಾದರಿಯಾಗಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Tue, 3 March 26

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!