AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಪ್ರಪಂಚ ನೋಡುವ ಮೊದಲೇ ಕಣ್ಮುಚ್ಚಿದ ಕಂದಮ್ಮ: ವೈದ್ಯರ ನಿರ್ಲಕ್ಷ್ಯ ಆರೋಪ

ಹಾವೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ತೆರಳುವಾಗ ಮಹಿಳೆಗೆ ಹೆರಿಗೆಯಾದ ಪರಿಣಾಮ ಪೆಟ್ಟಾಗಿ ಮಗು ಪ್ರಾಣಕಳೆದುಕೊಂಡಿದೆ ಎನ್ನಲಾಗಿದೆ. ಆದರೆ, ಆಸ್ಪತ್ರೆ ಅಧಿಕಾರಿಗಳು ಮಾತ್ರ ಬೇರೆಯದ್ದೇ ಹೇಳಿಕೆ ನೀಡಿದ್ದು, ಮಗು ಹೊಟ್ಟೆಯಲ್ಲೇ ಸತ್ತಿತ್ತು ಎಂದಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯ ಆರೋಪ ಅಲ್ಲಗಳೆದಿದ್ದಾರೆ.

ಹಾವೇರಿಯಲ್ಲಿ ಪ್ರಪಂಚ ನೋಡುವ ಮೊದಲೇ ಕಣ್ಮುಚ್ಚಿದ ಕಂದಮ್ಮ: ವೈದ್ಯರ ನಿರ್ಲಕ್ಷ್ಯ ಆರೋಪ
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಹಾವೇರಿ
ಪ್ರಸನ್ನ ಹೆಗಡೆ
|

Updated on:Nov 19, 2025 | 10:20 AM

Share

ಹಾವೇರಿ, ನವೆಂಬರ್​ 19: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು , ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆ ಶೌಚಾಲಯಕ್ಕೆ ಹೋಗೋ ಮಾರ್ಗದಲ್ಲೇ ಮಹಿಳೆಗೆ ಹೆರಿಗೆಯಾದ ಪರಿಣಾಮ, ಆಗತಾನೇ ಜನಿಸಿದ ನವಜಾತ ಶಿಶುವಿಗೆ ಪೆಟ್ಟಾಗಿ ಮಗು ಮೃತಪಟ್ಟಿದೆ. ಶಿಶು ಸಾವನ್ನಪ್ಪಲು ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ರಾಣೆಬೆನ್ನೂರು ತಾಲೂಕು ಕಾಕೋಳ ಗ್ರಾಮ ರೂಪಾ ಗಿರೀಶ್ ಕರಬಣ್ಣನವರ ಎಂಬ ಗರ್ಭಿಣಿಯನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರತರಲಾಗಿತ್ತು. ಬಳಿಕ, ರೂಪಾ ಅವರಿಗೆ ಹೆರಿಗೆ ನೋವು ಹೆಚ್ಚಿದ್ದು, ಒಂದು ಬೆಡ್​​ ಕೂಡ ನೀಡಿರಲಿಲ್ಲ. ಬದಲಾಗಿ ನೆಲದ ಮೇಲೆಯೇ ಅವರನ್ನು ಕೂರಿಸಿದ್ದರು. ಶೌಚಾಲಯ ಎಲ್ಲಿದೆ ಎಂದು ಕೇಳಿದರೂ ಸಿಬ್ಬಂದಿ  ಮಾಹಿತಿ ಕೊಡಲಿಲ್ಲ. ಕೊನೆಗೆ ಅವರಿವರನ್ನು ಕೇಳಿಕೊಂಡು ಶೌಚಾಲಯಕ್ಕೆ ತೆರಳುತ್ತಿರುವಾಗ ರೂಪಾಗೆ ಹೆರಿಗೆ ಆಗಿದೆ‌. ದಾರಿಯಲ್ಲೇ ಹೆರಿಗೆಯಾದ ಕಾರಣ ಮಗುವಿಗೆ ಪೆಟ್ಟಾಗಿ ಮಗು ಮೃತ ಪಟ್ಟಿದೆ. ಸೂಕ್ತ ಚಿಕಿತ್ಸೆ ಕೊಡದೇ ವೈದ್ಯರು, ನರ್ಸ್​​ಗಳು ನಿರ್ಲಕ್ಷ್ಯ ವಹಿಸಿದ್ದ ಕಾರಣದಿಂದಲೇ ಮಗು ಸಾವನ್ನಪ್ಪಿದೆ ಎಂದು ರೂಪಾ ಸಂಬಂಧಿಕರು ದೂರಿದ್ದಾರೆ.

ಇದನ್ನೂ ಓದಿ:  ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ, ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

‘ಹೊಟ್ಟೆಯಲ್ಲೇ ಮಗು ಮೃತಪಟ್ಟಿತ್ತು’

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರೋ ಹಾವೇರಿ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಪಿ. ಆರ್. ಹಾವನೂರ್ ಬೇರೇಯದ್ದೇ ಹೇಳಿಕೆ ನೀಡಿದ್ದಾರೆ. ರೂಪಾ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದು, ಆಗ ನಮ್ಮ ವೈದ್ಯರು ತಪಾಸಣೆ ನಡೆಸಿದ್ದಾರೆ. ಈ ವೇಳೆ ನಿನ್ನೆಯಿಂದ ಹೊಟ್ಟೆಯಲ್ಲಿ ಮಗುವಿನ ಚಲನವಲನ ಇಲ್ಲ ಎಂದು ಮಹಿಳೆ ಹೇಳಿದ್ದು, ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು. ಶೌಚಾಲಯಕ್ಕೆ ಅವರು ತೆರಳುವ ಸಂದರ್ಭದಲ್ಲಿ ಹೆರಿಗೆ ನೋವು ಹೆಚ್ಚಾಗಿದೆ. ಈ ವೇಳೆ ನಮ್ಮ ನರ್ಸ್ ಕರೆದುಕೊಂಡು ಬಂದು ನೋಡಿದ್ದಾರೆ. ಮಹಿಳೆಗೆ ಬಿಪಿ ಹೆಚ್ಚಿತ್ತು. ಇನ್ನೂ ಮೂರು ಹೆರಿಗೆ ನಡೆದಿದ್ದರಿಂದ ನಮ್ಮ ಸಿಬ್ಬಂದಿಯೂ ಬ್ಯುಸಿ ಇದ್ದರು. ಇದೇ ವೇಳೆ ಅವರು ಶೌಚಾಲಯಕ್ಕೆ ತೆರಳಿದ್ದಾರೆ. ಘಟನೆ ಸಂಬಂಧ ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಆ ಮೂಲಕ ವೈದ್ಯರ ನಿರ್ಲಕ್ಷಯ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ 9 ಹಾವೇರಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:16 am, Wed, 19 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ