AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ: ಅಧಿಕಾರಿಗಳ ವಿರುದ್ಧ ಖಾರವಾದ 25 ರೈತರು ಪೊಲೀಸರ ವಶಕ್ಕೆ

ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿಕಾಯಿ ಮಾರುಕಟ್ಟೆ ಮೆಣಸಿನಕಾಯಿ ದರ ಧಿಡೀರನೆ ಕುಸಿತವಾಗಿದ್ದು, ಇದರಿಂದ ಬೇಸರ, ಆಕ್ರೋಶಗೊಂಡ ರೈತರು ಅಧಿಕಾರಿಗಳಿಗೆ ಖಾರ ಅರೆದಿದ್ದಾರೆ. ಕಳೆದ ವಾರ ಒಂದು ಕ್ವಿಂಟಾಲ್‌ 20 ಸಾವಿರವಿದ್ದ ಮೆಣಸಿನಕಾಯಿ ದರ, ಇದೀಗ ಧಿಡೀರನೆ 12 ಸಾವಿರಕ್ಕೆ ಇಳಿಕೆಯಾಗಿದೆ.

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ: ಅಧಿಕಾರಿಗಳ ವಿರುದ್ಧ ಖಾರವಾದ 25 ರೈತರು ಪೊಲೀಸರ ವಶಕ್ಕೆ
ರೈತರ ಪ್ರತಿಭಟನೆ, ಅಗ್ನಿಶಾಮಕ ವಾಹನಕ್ಕೆ ಬೆಂಕಿ
TV9 Web
| Edited By: |

Updated on: Mar 12, 2024 | 9:12 AM

Share

ಹಾವೇರಿ, ಮಾರ್ಚ್​ 12: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಬರಕ್ಕೆ ಸೆಡ್ಡುಹೊಡೆದ ರೈತರು (Farmers) ಬಂಪರ್ ಮೆಣಸಿಕಾಯಿ (Chilli) ಬೆಳೆ ಬೆಳೆದಿದ್ದಾರೆ. ಆದರೆ ವಿಶ್ವಪ್ರಸಿದ್ಧ ಬ್ಯಾಡಗಿ (Byadagi) ಮೆಣಸಿನಕಾಯಿ ಮಾರುಕಟ್ಟೆಯಲ್ಲಿ (Byadgi Menasinakai Market) ದಿಢೀರ್ ಬೆಲೆ ಕುಸಿತವಾಗಿದೆ. ಇದರಿಂದ ರೊಚ್ಚಿಗೆದ್ದ ಮೆಣಸಿನಕಾಯಿ ಬೆಳೆಗಾರರು ಅಗ್ನಿಶಾಮಕ ವಾಹನ ಸೇರಿ 12 ವಾಹನಗಳಿಗೆ ಬೆಂಕಿ ಹಚ್ಚಿದರು. ಅಲ್ಲದೇ ಎಪಿಎಂಸಿ ಕಚೇರಿಗೆ ಕಲ್ಲು ತೂರಿದರು. ಹೀಗಾಗಿ ಪೊಲೀಸರು 25ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಆಗಿದ್ದೇನು?

ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿಕಾಯಿ ಮಾರುಕಟ್ಟೆ ಮೆಣಸಿನಕಾಯಿ ದರ ಧಿಡೀರನೆ ಕುಸಿತವಾಗಿದ್ದು, ಇದರಿಂದ ಬೇಸರ, ಆಕ್ರೋಶಗೊಂಡ ರೈತರು ಅಧಿಕಾರಿಗಳಿಗೆ ಖಾರ ಅರೆದಿದ್ದಾರೆ. ಕಳೆದ ವಾರ ಒಂದು ಕ್ವಿಂಟಾಲ್‌ ಮೆಣಸಿನಕಾಯಿ 20 ಸಾವಿರಕ್ಕೆ ಮಾರಾಟವಾಗಿತ್ತು. ಅದೇ ರೇಟ್‌ ಸಿಗುತ್ತೆ ಅಂತ ರೈತರು ಸೋಮವಾರ (ಮಾ.11) ರಂದು ಮೆಣಸಿನಕಾಯಿ ತಂದಿದ್ದರು. ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 5 ಲಕ್ಷ ಕ್ವಿಂಟಾಲ್‌ ಮೆಣಸಿನಕಾಯಿ ಮಾರುಕಟ್ಟೆಯೊಳಗೆ ಬಂದಿತ್ತು. ಸೋಮವಾರ ವಹಿವಾಟು ಆರಂಭ ಆಗುತ್ತಿದ್ದಂತೆ ರೈತರೆಲ್ಲ ಶಾಕ್ ಆಗಿದ್ದರು. ಯಾಕಂದರೆ ಕಳೆದ ವಾರ 20 ಸಾವಿರ ರೂ. ಇದ್ದ ದರ, ಸೋಮವಾರ ದಿಢೀರನೆ 12 ಸಾವಿರಕ್ಕೆ ಕುಸಿದಿತ್ತು.

ಇದನ್ನೂ ಓದಿ: ಅಂಚೆ ಲಕೋಟೆ ಮೇಲೆ ರಾರಾಜಿಸುತ್ತಿದೆ ಬ್ಯಾಡಗಿ ಮೆಣಸಿನಕಾಯಿ: ವಿಶ್ವ ಪ್ರಸಿದ್ಧ ಮೆಣಸಿನಕಾಯಿಗೆ ಮತ್ತೊಂದು ಗರಿ

ಯಾವಾಗ ಕ್ವಿಂಟಾಲ್​ಗೆ 12 ಸಾವಿರ ರೂ. ಅಂತ ತಿಳಿಯಿತು, ರೈತರು ಕೆರಳಿ ನಿಂತಿದ್ದರು. ಬ್ಯಾಡಗಿ ಎಪಿಎಂಸಿ ಕಚೇರಿ ಮೇಲೂ ಕಲ್ಲು ತೂರಿ ಗ್ಲಾಸ್‌ಗಳನ್ನು ಪೀಸ್‌ ಪೀಸ್‌ ಮಾಡಿದರು. ನಂತರ ಕಚೇರಿಯೊಳಗೆ ನುಗ್ಗಿ ದಾಖಲೆಗಳನ್ನು ನಾಶ ಮಾಡಿದರು. ಪೊಲೀಸ್‌ ಹಾಗೂ ಅಗ್ನಿಶಾಮಕ ವಾಹನಕ್ಕೆ ಬೆಂಕಿ ಹಚ್ಚಿದರು. ಅನ್ನದಾತರ ಕೋಪಾಗ್ನಿಯಲ್ಲಿ 12 ವಾಹನಗಳು ಜಖಂ ಆದವು. ಮೂರು ನಾಲ್ಕು ವಾಹನಗಳು ಸುಟ್ಟು ಭಸ್ಮವಾದವು. ಗಲಾಟೆ ದೊಡ್ಡದಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿದರು. ಆದರೆ, ಕೈಯಲ್ಲಿ ಬಡಿಗೆ ಹಿಡಿದ ರೈತರು ಪೊಲೀಸರನ್ನೇ ಓಡಿಸಿದರು.

ಮೆಣಸಿನಕಾಯಿ ಘಾಟು.. ಮಾರ್ಕೆಟ್‌ ಬಂದ್‌!

ಇನ್ನು ಮೆಣಸಿನಕಾಯಿ ಗೋಡೌನ್‌ಗೂ ಬೆಂಕಿ ಹೊತ್ತಿ ಕೊಂಡಿತ್ತು. ಮೆಣಸಿನಕಾಯಿ ಘಾಟು ಹೆಚ್ಚಾಗುತ್ತಿದ್ದಂತೆ ಅಲ್ಲಿದ್ದ ಜನ ಉಸಿರಾಡೋದಕ್ಕೂ ಪರದಾಡಿದರು. ಪರಿಣಾಮ ಮಾರುಕಟ್ಟೆ ವಹಿವಾಟು ಬಂದ್ ಮಾಡಲಾಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಐಜಿಪಿ ತ್ಯಾಗರಾಜ ಭೇಟಿ ನೀಡಿ, ರೈತರ ಮನವೊಲಿಸಲು ಯತ್ನಿಸಿದರು. ಇದೇ ವೇಳೆ ಜಿಲ್ಲಾಧಿಕಾರಿ ರಘುನಂಧನ್ ಮೂರ್ತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ರೈತರ ಮನ ಒಲಿಸುವಲ್ಲಿ ಯಶಸ್ವಿಯಾದರು. ಸೂಕ್ತ ದರ ನಿಗದಿ ಮಾಡುವ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಕೈ ಬಿಟ್ಟರು. ಸದ್ಯ ಮಾರುಕಟ್ಟೆ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ