AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್
ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆ
TV9 Web
| Edited By: |

Updated on: Dec 28, 2023 | 11:32 AM

Share

ಹಾವೇರಿ, ಡಿ. 28: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ (Cheating) ಮಾಡಿದ ಆರೋಪ ಸಂಬಂಧ ಹಿರೇಕೆರೂರು ಟೌನ್​ ಠಾಣೆ ಪೊಲೀಸರು(Hirekerur Police Station) ಓರ್ವ ಆರೋಪಿಯನ್ನು ಬಂಧಿಸಿದ್ದಾರೆ (Arrest). ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ವಿದ್ಯಾನಗರದಲ್ಲಿರುವ ಫೈನಾನ್ಸ್ ಸಂಸ್ಥೆ ಓರ್ವ ಸಿಬ್ಬಂದಿಯನ್ನು ವಂಚನೆ ಆರೋಪದಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಬರೋಬ್ಬರಿ 3.38 ಕೋಟಿ ರೂಪಾಯಿ ಪಂಗನಾಮ ಹಾಕಿರುವುದಾಗಿ ಮಾಹಿತಿ ಸಿಕ್ಕಿದೆ.

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಹಿರೇಕೆರೂರು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಭಾರ ಕೇಂದ್ರ ವ್ಯವಸ್ಥಾಪಕ ಶಿವಾನಂದಪ್ಪ ದ್ಯಾವನಕಟ್ಟೆ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕ ಬಸವರಾಜಯ್ಯ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಓರ್ವ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರೊಫೆಸರ್‌ಗಳಿಗೆ ₹ 11 ಕೋಟಿ ವಂಚನೆ: ಜೆಎನ್‌ಯು ಮಾಜಿ ಉದ್ಯೋಗಿ ಬಂಧನ

ಮಹಿಳೆಯರಿಗೆ 1.25 ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಮಹಿಳಾ ಸದಸ್ಯರ ದಾಖಲೆ ಬಳಸಿಕೊಂಡು ವಂಚನೆ ಮಾಡಲಾಗಿದೆ. 376 ಮಹಿಳಾ ಸದಸ್ಯರಿಗೆ 643 ಸಾಲದ ಯೋಜನೆ ನೀಡಿದಂತೆ ನಕಲಿ ಸಾಲ ಸೃಷ್ಟಿಸಿ 4.16 ಕೋಟಿ ಸಾಲ ನೀಡಿರುವಂತೆ ನಕಲಿ ದಾಖಲೆ ಸೃಷ್ಟಿಸಿ ವಂಚಿಸಲಾಗಿದೆ. ಆರೋಪಿಗಳೂ ತಾವೇ ಸಾಲ ಪಡೆದುಕೊಂಡು ಕಂತಿನ ಹಣವನ್ನು ತಾವೇ ಸಂಸ್ಥೆಗೆ ಜಮೆ ಮಾಡುತ್ತಿದ್ದರು. ನಕಲಿ ಸಾಲದ 87.33 ಲಕ್ಷ ಮಾತ್ರ ಜಮಾ ಮಾಡಿದ್ದರು. ಉಳಿದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಆರೋಪಿಗಳು ಕಚೇರಿಯಲ್ಲಿ ನಕಲಿ ಕ್ಯಾಶ್ ಬುಕ್‌ ತಯಾರಿಸಿಕೊಂಡಿದ್ದರು. ಸದ್ಯ ಮಹಿಳೆಯರಿಗೆ ಗೊತ್ತಿಲ್ಲದೆ ಅವರ ಹೆಸರಲ್ಲಿ ವಂಚನೆ ಮಾಡಿದ ಬಗ್ಗೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಓರ್ವನ ಬಂಧನವಾಗಿದ್ದು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ