AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್
ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆ
TV9 Web
| Edited By: ಆಯೇಷಾ ಬಾನು|

Updated on: Dec 28, 2023 | 11:32 AM

Share

ಹಾವೇರಿ, ಡಿ. 28: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ (Cheating) ಮಾಡಿದ ಆರೋಪ ಸಂಬಂಧ ಹಿರೇಕೆರೂರು ಟೌನ್​ ಠಾಣೆ ಪೊಲೀಸರು(Hirekerur Police Station) ಓರ್ವ ಆರೋಪಿಯನ್ನು ಬಂಧಿಸಿದ್ದಾರೆ (Arrest). ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ವಿದ್ಯಾನಗರದಲ್ಲಿರುವ ಫೈನಾನ್ಸ್ ಸಂಸ್ಥೆ ಓರ್ವ ಸಿಬ್ಬಂದಿಯನ್ನು ವಂಚನೆ ಆರೋಪದಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಬರೋಬ್ಬರಿ 3.38 ಕೋಟಿ ರೂಪಾಯಿ ಪಂಗನಾಮ ಹಾಕಿರುವುದಾಗಿ ಮಾಹಿತಿ ಸಿಕ್ಕಿದೆ.

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಹಿರೇಕೆರೂರು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಭಾರ ಕೇಂದ್ರ ವ್ಯವಸ್ಥಾಪಕ ಶಿವಾನಂದಪ್ಪ ದ್ಯಾವನಕಟ್ಟೆ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕ ಬಸವರಾಜಯ್ಯ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಓರ್ವ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರೊಫೆಸರ್‌ಗಳಿಗೆ ₹ 11 ಕೋಟಿ ವಂಚನೆ: ಜೆಎನ್‌ಯು ಮಾಜಿ ಉದ್ಯೋಗಿ ಬಂಧನ

ಮಹಿಳೆಯರಿಗೆ 1.25 ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಮಹಿಳಾ ಸದಸ್ಯರ ದಾಖಲೆ ಬಳಸಿಕೊಂಡು ವಂಚನೆ ಮಾಡಲಾಗಿದೆ. 376 ಮಹಿಳಾ ಸದಸ್ಯರಿಗೆ 643 ಸಾಲದ ಯೋಜನೆ ನೀಡಿದಂತೆ ನಕಲಿ ಸಾಲ ಸೃಷ್ಟಿಸಿ 4.16 ಕೋಟಿ ಸಾಲ ನೀಡಿರುವಂತೆ ನಕಲಿ ದಾಖಲೆ ಸೃಷ್ಟಿಸಿ ವಂಚಿಸಲಾಗಿದೆ. ಆರೋಪಿಗಳೂ ತಾವೇ ಸಾಲ ಪಡೆದುಕೊಂಡು ಕಂತಿನ ಹಣವನ್ನು ತಾವೇ ಸಂಸ್ಥೆಗೆ ಜಮೆ ಮಾಡುತ್ತಿದ್ದರು. ನಕಲಿ ಸಾಲದ 87.33 ಲಕ್ಷ ಮಾತ್ರ ಜಮಾ ಮಾಡಿದ್ದರು. ಉಳಿದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಆರೋಪಿಗಳು ಕಚೇರಿಯಲ್ಲಿ ನಕಲಿ ಕ್ಯಾಶ್ ಬುಕ್‌ ತಯಾರಿಸಿಕೊಂಡಿದ್ದರು. ಸದ್ಯ ಮಹಿಳೆಯರಿಗೆ ಗೊತ್ತಿಲ್ಲದೆ ಅವರ ಹೆಸರಲ್ಲಿ ವಂಚನೆ ಮಾಡಿದ ಬಗ್ಗೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಓರ್ವನ ಬಂಧನವಾಗಿದ್ದು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ