Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ.

ಹಾವೇರಿ: ಮಹಿಳೆಯರ ಹೆಸರಲ್ಲಿ ಸಾಲ ಪಡೆದು ಕೋಟಿ ಕೋಟಿ ವಂಚನೆ, ಫೈನಾನ್ಸ್ ಸಂಸ್ಥೆ ಸಿಬ್ಬಂದಿ ಅರೆಸ್ಟ್
ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆ
Follow us
TV9 Web
| Updated By: ಆಯೇಷಾ ಬಾನು

Updated on: Dec 28, 2023 | 11:32 AM

ಹಾವೇರಿ, ಡಿ. 28: ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ (Cheating) ಮಾಡಿದ ಆರೋಪ ಸಂಬಂಧ ಹಿರೇಕೆರೂರು ಟೌನ್​ ಠಾಣೆ ಪೊಲೀಸರು(Hirekerur Police Station) ಓರ್ವ ಆರೋಪಿಯನ್ನು ಬಂಧಿಸಿದ್ದಾರೆ (Arrest). ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ವಿದ್ಯಾನಗರದಲ್ಲಿರುವ ಫೈನಾನ್ಸ್ ಸಂಸ್ಥೆ ಓರ್ವ ಸಿಬ್ಬಂದಿಯನ್ನು ವಂಚನೆ ಆರೋಪದಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಬರೋಬ್ಬರಿ 3.38 ಕೋಟಿ ರೂಪಾಯಿ ಪಂಗನಾಮ ಹಾಕಿರುವುದಾಗಿ ಮಾಹಿತಿ ಸಿಕ್ಕಿದೆ.

ವಿದ್ಯಾನಗರದಲ್ಲಿರುವ ಬಿ.ಎಸ್‌.ಎಸ್‌. ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಪ್ರಭಾರ ಕೇಂದ್ರ ವ್ಯವಸ್ಥಾಪಕ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕರಿಬ್ಬರೂ ಸೇರಿಕೊಂಡು ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಗ್ರಾಹಕರಿಗೆ ಸಂಬಂಧಿಸಿದ 3.38 ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಹಿರೇಕೆರೂರು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಭಾರ ಕೇಂದ್ರ ವ್ಯವಸ್ಥಾಪಕ ಶಿವಾನಂದಪ್ಪ ದ್ಯಾವನಕಟ್ಟೆ ಮತ್ತು ಕ್ಷೇತ್ರ ಕಚೇರಿ ವ್ಯವಸ್ಥಾಪಕ ಬಸವರಾಜಯ್ಯ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಓರ್ವ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರೊಫೆಸರ್‌ಗಳಿಗೆ ₹ 11 ಕೋಟಿ ವಂಚನೆ: ಜೆಎನ್‌ಯು ಮಾಜಿ ಉದ್ಯೋಗಿ ಬಂಧನ

ಮಹಿಳೆಯರಿಗೆ 1.25 ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಮಹಿಳಾ ಸದಸ್ಯರ ದಾಖಲೆ ಬಳಸಿಕೊಂಡು ವಂಚನೆ ಮಾಡಲಾಗಿದೆ. 376 ಮಹಿಳಾ ಸದಸ್ಯರಿಗೆ 643 ಸಾಲದ ಯೋಜನೆ ನೀಡಿದಂತೆ ನಕಲಿ ಸಾಲ ಸೃಷ್ಟಿಸಿ 4.16 ಕೋಟಿ ಸಾಲ ನೀಡಿರುವಂತೆ ನಕಲಿ ದಾಖಲೆ ಸೃಷ್ಟಿಸಿ ವಂಚಿಸಲಾಗಿದೆ. ಆರೋಪಿಗಳೂ ತಾವೇ ಸಾಲ ಪಡೆದುಕೊಂಡು ಕಂತಿನ ಹಣವನ್ನು ತಾವೇ ಸಂಸ್ಥೆಗೆ ಜಮೆ ಮಾಡುತ್ತಿದ್ದರು. ನಕಲಿ ಸಾಲದ 87.33 ಲಕ್ಷ ಮಾತ್ರ ಜಮಾ ಮಾಡಿದ್ದರು. ಉಳಿದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಆರೋಪಿಗಳು ಕಚೇರಿಯಲ್ಲಿ ನಕಲಿ ಕ್ಯಾಶ್ ಬುಕ್‌ ತಯಾರಿಸಿಕೊಂಡಿದ್ದರು. ಸದ್ಯ ಮಹಿಳೆಯರಿಗೆ ಗೊತ್ತಿಲ್ಲದೆ ಅವರ ಹೆಸರಲ್ಲಿ ವಂಚನೆ ಮಾಡಿದ ಬಗ್ಗೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಓರ್ವನ ಬಂಧನವಾಗಿದ್ದು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?